
ಮಡಿಕೇರಿ NEWS DESK ನ.18 : ನಗರದ ಪೆನ್ಷನ್ಲೇನ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಮಕ್ಕಳ ಪ್ರತಿಭೆಗೆ ಪೋಷಕರು ಸಂಪೂರ್ಣ ಸಹಕಾರ ನೀಡಬೇಕು ಎಂದರು. ಈ ಅಂಗನವಾಡಿ ಕೇಂದ್ರ ಬಾಡಿಗೆ ಮನೆಯಲ್ಲಿ ನಡೆಯುತ್ತಿದ್ದು, ಸರ್ಕಾರದಿಂದ ಕಟ್ಟಡ ನಿರ್ಮಿಸಿದರೆ ಮಕ್ಕಳಿಗೆ ಸಹಕಾರಿಯಾಗಲಿದೆ. ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳುವಂತಾಗಬೇಕು ಎಂದು ಹೇಳಿದರು. ಅಂಗನವಾಡಿ ಕಾರ್ಯಕರ್ತೆ ಬಬಿತಾ, ಸಹಾಯಕಿ, ಮಕ್ಕಳ ಪೋಷಕರು, ಬಾಲವಿಕಾಸ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಪುಟಾಣಿಗಳು ನೇತಾಜಿ ಸುಭಾಷ್ಚಂದ್ರ ಬೋಸ್, ಸ್ವಾಮಿ ವಿವೇಕಾನಂದ, ರಾಧಕೃಷ್ಣ, ಹೂ ಮಾರುವ ಹುಡುಗಿ, ಫ್ಯಾಷನ್ ಲೇಡಿ ಸೇರಿದಂತೆ ವಿವಿಧ ಛದ್ಮವೇಷಗಳಲ್ಲಿ ಗಮನ ಸೆಳೆದರು.








