Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯತ್ ಪ್ರಶಸ್ತಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯತ್ ಪ್ರಶಸ್ತಿಗೆ ಅರ್ಜಿ ಆಹ್ವಾನ*

ನವೆಂಬರ್ 23, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.23 NEWS DESK : ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯಿತಿಯ ಪ್ರಶಸ್ತಿಗಳ ಮಾರ್ಗಸೂಚಿಗಳು [ಮೈಸೂರು (ನಗರ ಪ್ರದೇಶವನ್ನು ಹೊರತುಪಡಿಸಿ) ಮತ್ತು ಕೊಡಗು ಜಿಲ್ಲೆಗಳಿಗೆ ಮಾತ್ರ ಅನ್ವಯ] ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಒಂದು ಸ್ವಯಂ ಸೇವಾ ಸಂಸ್ಥೆಯಾಗಿದ್ದು, ಸಮುದಾಯದ ಅಭಿವೃದ್ಧಿಗಾಗಿ 1984 ರಿಂದ ಆರೋಗ್ಯ, ಶಿಕ್ಷಣ, ಸಾಮಾಜಿಕ-ಆರ್ಥಿಕ ಸಬಲೀಕರಣ ಕಾರ್ಯಕ್ರಮ ಹಾಗೂ ತರಬೇತಿ ಮತ್ತು ಸಂಶೋಧನೆ ಎಂಬ ನಾಲ್ಕು ಕ್ಷೇತ್ರಗಳಲ್ಲಿ ತನ್ನ ಕಾರ್ಯಕ್ಷಮತೆ ಇರಿಸಿಕೊಂಡು ನವಭಾರತದ ನಿರ್ಮಾಣದೆಡೆಗೆ ಸಾಗುತ್ತಿದೆ. ಸಂಸ್ಥೆಯು ಸಾಮಾಜಿಕ ಕಳಕಳಿಯನ್ನು ಹೊಂದಿದ್ದು ಸರ್ಕಾರ, ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಸಮಾನ ಮನಸ್ಸುಳ್ಳವರು ಸೇರಿ, ಸ್ಥಳೀಯ ಸಮುದಾಯದ ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸಂಸ್ಥೆಯು 1990ರ ದಶಕದಿಂದ ವಿಶೇಷಚೇತನರ ಸಬಲೀಕರಣಕ್ಕಾಗಿ ಸಮುದಾಯ ಆಧಾರಿತ ಪುನರ್ವಸತಿ ಕಾರ್ಯಕ್ರಮ ನಡೆಸುತ್ತಿದ್ದು, ಪ್ರಸ್ತುತ ಮೈಸೂರು ಮತ್ತು ಕೊಡಗು ಜಿಲ್ಲೆಯಲ್ಲಿ ವಿಶೇಷಚೇತನರಿಗಾಗಿ ಸಮಗ್ರ ಆರೈಕೆ, ಬೆಂಬಲ ಮತ್ತು ಚಿಕಿತ್ಸೆ ಕಾರ್ಯಕ್ರಮವು ಜಾರಿಯಲ್ಲಿದೆ. ವಿಶೇಷಚೇತನರನ್ನು ಗುರುತಿಸಿ, ಮೌಲ್ಯಮಾಪನ ಮಾಡಿ, ದೈಹಿಕ ಮತ್ತು ಮಾನಸಿಕ ಹಾಗೂ ಸಂವೇದನಾ ಸಾಮಥ್ರ್ಯ ಹೆಚ್ಚಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಯೊಂದಿಗೆ ಸ್ಪರ್ಧಿಸಿ, ಸಾಮಾಜಿಕ-ಆರ್ಥಿಕ ಉತ್ಪಾದಕ ಜೀವನವನ್ನು ನಡೆಸುವಂತೆ ಸಕ್ರಿಯಗೊಳಿಸುವ ಗುರಿ ಹೊಂದಿದೆ. ಸಂಸ್ಥೆಯು ವಿಶೇಷಚೇತನರ ಬಗೆಗೆ ಸಮುದಾಯದವರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಂತರರಾಷ್ಟ್ರೀಯ ವಿಶೇಷಚೇತನರ ದಿನಾಚರಣೆಯನ್ನು ಆಚರಿಸುತ್ತಾ ಬಂದಿದೆ. 2024-25 ನೇ ಸಾಲಿನ ಅಂತರರಾಷ್ಟ್ರೀಯ ವಿಶೇಷ ಚೇತನರ ದಿನಾಚರಣೆ “ಸೇರ್ಪಡೆ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಶೇಷಚೇತನರ ನಾಯಕತ್ವ ವರ್ಧಿಸುವುದು” ಎಂಬ ಘೋಷ ವಾಕ್ಯದೊಂದಿಗೆ ಡಿಸೆಂಬರ್ ತಿಂಗಳ ನಾಲ್ಕನೇ ವಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಮಾದರಿ ಸ್ವ-ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯಿತಿ ಎಂಬ 2 ರೀತಿಯ ಪ್ರಶಸ್ತಿ ಪುರಸ್ಕಾರಗಳನ್ನು ನೀಡಲಾಗುತ್ತದೆ. ಪ್ರಶಸ್ತಿಯ ಹೆಸರು ಮಾದರಿ ವಿಶೇಷಚೇತನರ ಸ್ವ-ಸಹಾಯ ಸಂಘ(2), ಪ್ರತೀ ಸಂಘಕ್ಕೆ ರೂ.10 ಸಾವಿರ ಮತ್ತು ಪ್ರಮಾಣ ಪತ್ರ. ಮಾದರಿ ಗ್ರಾಮ/ ಪಟ್ಟಣ ಪಂಚಾಯಿತಿ(2) ಗೌರವ ಸಮರ್ಪಣೆ ಮತ್ತು ಪ್ರಮಾಣಪತ್ರ ನೀಡಲಾಗುತ್ತದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತಾ ಮಾನದಂಡಗಳು: ಮಾದರಿ ವಿಶೇಷಚೇತನರ ಸ್ವ-ಸಹಾಯ ಸಂಘ: ಮೈಸೂರು (ನಗರ ಪ್ರದೇಶವನ್ನು ಹೊರತುಪಡಿಸಿ) ಮತ್ತು ಕೊಡಗು ಜಿಲ್ಲೆಯ ವಿಶೇಷಚೇತನರ ಸ್ವ-ಸಹಾಯ ಸಂಘಗಳಿಗೆ ಮಾತ್ರ ಅನ್ವಯ, ಸಂಘವು ಕನಿಷ್ಠ ಶೇ.50 ವಿಶೇಷಚೇತನರು ಅಥವಾ ವಿಶೇಷಚೇತನರ ಕುಟುಂಬ ಸದಸ್ಯರನ್ನು ಒಳಗೊಂಡಿರಬೇಕು. ಕನಿಷ್ಟ ಒಂದು ವರ್ಷವನ್ನು ಪೂರ್ಣಗೊಳಿಸಿ, ನಿರಂತರವಾಗಿ ಮುನ್ನಡೆಯುತ್ತಿರಬೇಕು. ಮಾದರಿ ಗ್ರಾಮ/ ಪಟ್ಟಣ ಪಂಚಾಯಿತಿ: ಮೈಸೂರು (ನಗರ ಪ್ರದೇಶವನ್ನು ಹೊರತುಪಡಿಸಿ) ಮತ್ತು ಕೊಡಗು ಜಿಲ್ಲೆಯ ಗ್ರಾಮ/ ಪಟ್ಟಣ ಪಂಚಾಯಿತಿಗಳಿಗೆ ಮಾತ್ರ ಅನ್ವಯ, ವಿಶೇಷಚೇತನರ ಪುನರ್ವಸತಿಗಾಗಿ ಕಾರ್ಯನಿರ್ವಹಿಸುತ್ತಿರಬೇಕು. ಮೌಲ್ಯಮಾಪನಾ ಮಾನದಂಡಗಳು: ಮಾದರಿ ವಿಶೇಷಚೇತನರ ಸ್ವ-ಸಹಾಯ ಸಂಘ: ಸಂಘದ ನಿಯಮಗಳ ಪಾಲನೆ ಹಾಗೂ ನಿರಂತರತೆ, ಬ್ಯಾಂಕ್, ಸ್ಥಳೀಯ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳೊಂದಿಗೆ ನಿಕಟ ಸಂಬಂಧವನ್ನು ಹೊಂದಿರುವುದು. ಪಡೆದುಕೊಂಡ ಸಾಲದ ಮರುಪಾವತಿ, ತೆಗೆದುಕೊಂಡ ಸಾಲದ ಸಮರ್ಪಕ ಬಳಕೆ, ಇತರೆ ವಿಶೇಷಚೇತನರ ಶ್ರೇಯೋಭಿವೃದ್ಧಿಯತ್ತ ಗಮನ, ಒಬ್ಬರು ಅಧಿಕಾರಿ ಹಾಗೂ ಒಬ್ಬರು ಸಮುದಾಯದವರಿಂದ ಅಭಿಪ್ರಾಯ ಹಂಚಿಕೆಯ ವಿಡಿಯೋ ರೆಕಾರ್ಡ್ (ಸಂಘದ ಸದಸ್ಯರನ್ನು ಹೊರತುಪಡಿಸಿ ಮಾದರಿ ಗ್ರಾಮ/ ಪಟ್ಟಣ ಪಂಚಾಯಿತಿ: ಶೇ.5 ವಿಶೇಷಚೇತನರ ಅನುದಾನದ ಬಳಕೆ, ಗ್ರಾಮೀಣ/ ನಗರ ಪುನರ್ವಸತಿ ಕಾರ್ಯಕರ್ತರನ್ನು ಹೊಂದಿರುವುದು. ಸಮುದಾಯದಲ್ಲಿ ಜಾಗೃತಿ ಹಾಗೂ ಅರಿವಿನ ಕಾರ್ಯಕ್ರಮಗಳು, ಪುನರ್ವಸತಿ ಚಟುವಟಿಕೆಗಳು, ವಿಶೇಷಚೇತನರ ಸ್ನೇಹಿ ವಾತಾವರಣ ನಿರ್ಮಾಣ, ಒಬ್ಬರು ವಿಶೇಷಚೇತನರು ಹಾಗೂ ಒಬ್ಬರು ಸಮುದಾಯದವರಿಂದ ಅಭಿಪ್ರಾಯ ಹಂಚಿಕೆಯ ವೀಡಿಯೊ ರೆಕಾರ್ಡ್ (ಗ್ರಾಮೀಣ/ ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ಗ್ರಾಮ/ ಪಟ್ಟಣ ಪಂಚಾಯಿತಿಯ ಕುಟುಂಬದವರನ್ನು ಹೊರತುಪಡಿಸಿ). ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್, 25 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಎಸ್‍ವಿವೈಎಂನ “ವಿಶೇಷಚೇತನರ ಸಹಾಯವಾಣಿ”ಗೆ ದೂರವಾಣಿ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳುವುದು. ಸಹಾಯವಾಣಿ ಸಂಖ್ಯೆ: 9880005297 ಮತ್ತು 08272-298322 ನ್ನು ಬೆಳಗ್ಗೆ 8.30 ರಿಂದ ಸಂಜೆ 5 ಗಂಟೆವರೆಗೆ ಸಂಪರ್ಕಿಸಬಹುದು. ಅಭ್ಯರ್ಥಿಗಳಿಂದ ಪ್ರಶಸ್ತಿಗಳಿಗೆ ಅರ್ಜಿ ಸ್ವೀಕರಿಸಿದ ನಂತರ ಮೌಲ್ಯಮಾಪನ ತಂಡವು ತಮ್ಮ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ತಾವು ನೀಡಿರುವ ಮಾಹಿತಿ/ ದಾಖಲೆಗಳನ್ನು ಪರಿಶೀಲಿಸಿ ಮೌಲ್ಯಮಾಪನ ಮಾಡಲಾಗುತ್ತದೆ. ನಂತರ ಮೌಲ್ಯಮಾಪನದ ವರದಿಯನ್ನು ತೀರ್ಪುಗಾರರ ಮುಂದೆ ಮಂಡಿಸಲಾಗುತ್ತದೆ. ವರದಿಯನ್ನು ಗಮನಿಸಿದ ತೀರ್ಪುಗಾರರ ತಂಡವು ಮಾದರಿ ವಿಶೇಷಚೇತನರ ಸ್ವ-ಸಹಾಯ ಸಂಘ ಮತ್ತು ಮಾದರಿ ಗ್ರಾಮ/ ಪಟ್ಟಣ ಪಂಚಾಯಿತಿಗಳನ್ನು ಆಯ್ಕೆ ಮಾಡುತ್ತದೆ ಮತ್ತು ತೀರ್ಪುಗಾರರ ತಂಡದ ನಿರ್ಧಾರವೇ ಅಂತಿಮವಾಗಿದೆ. ಡಿಸೆಂಬರ್ ತಿಂಗಳ ನಾಲ್ಕನೇ ವಾರದಲ್ಲಿ ನಡೆಯುವ ಅಂತರರಾಷ್ಟ್ರೀಯ ವಿಶೇಷಚೇತನರ ದಿನಾಚರಣೆಯ ಕಾರ್ಯಕ್ರಮದಂದು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಅರ್ಜಿಯನ್ನು ಸಲ್ಲಿಸುವ ಆನ್‍ಲೈನ್ ಲಿಂಕ್: ಮಾದರಿ ವಿಶೇಷಚೇತನರ ಸ್ವ-ಸಹಾಯ ಸಂಘ- https://www.appsheet.com/start/d3a7e74a-877a-4b42-b125-1c68d02c9617 ಮಾದರಿ ಗ್ರಾಮ/ ಪಟ್ಟಣ ಪಂಚಾಯಿತಿ – https://www.appsheet.com/start/83ed3b99-f62c-4c9b-a665-6e39f3cc72ff

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.