Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*

ನವೆಂಬರ್ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.25 NEWS DESK : ಇಂದಿನ ಯುವಪೀಳೆಗೆ ಕ್ರಿಕೆಟ್ ಸೇರಿದಂತೆ ಇತರ ಕ್ರೀಡೆಗಳಲ್ಲಿಯೂ ಆಸಕ್ತಿ ತಾಳಿ ಉತ್ತಮ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಬೇಕು ಎಂದು ನಿವೃತ್ತ ಏರ್ ಮಾಷ೯ಲ್ ಕೆ.ಸಿ.ಕಾಯ೯ಪ್ಪ ಕರೆ ನೀಡಿದ್ದಾರೆ. ನಗರದ ಕೊಡಗು ವಿದ್ಯಾಲಯ ವತಿಯಿಂದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ 10ನೇ ವಷ೯ದ ಪ್ರೌಢಶಾಲಾ ವಿದ್ಯಾಥಿ೯ಗಳಿಗಾಗಿನ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾಕ್ಷೇತ್ರದಲ್ಲಿ ಹಿಂದಿನ ದಿನಗಳಿಗೆ ಹೋಲಿಸಿದರೆ ಈಗ ಅವಕಾಶಗಳು ವಿಸ್ತಾರವಾಗಿದ್ದು, ತಮ್ಮಲ್ಲಿನ ಕ್ರೀಡಾ ಪ್ರತಿಭೆಯನ್ನು ತೋರಲು ಯುವಪೀಳಿಗೆ ಬೆಟ್ಟದಷ್ಟು ಅವಕಾಶ ಇದೆ. ಕ್ರಿಕೆಟ್ ನಂತೆಯೇ ಇತರ ಕ್ರೀಡೆಗಳಲ್ಲಿಯೂ ಯುವಪೀಳಿಗೆ ಹೆಚ್ಚಿನ ಆಸಕ್ತಿ ತಾಳಿದರೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪ್ರತಿಭೆಗಳು ದೇಶಕ್ಕೆ ದೊರಕಲು ಸಾಧ್ಯವಿದೆ ಎಂದೂ ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಅಭಿಪ್ರಾಯಪಟ್ಟರು. ಜಾನಪದ ಪರಿಷತ್ ಜಿಲ್ಲಾ ಪ್ರಧಾನ ಕಾಯ೯ದಶಿ೯ ಎಸ್.ಐ.ಮುನೀರ್ ಅಹಮ್ಮದ್ ಮಾತನಾಡಿ, ವಿದ್ಯಾಥಿ೯ಗಳಿಗೆ ತಮ್ಮ ಜೀವನದ ಬಗ್ಗೆ ನಿದಿ೯ಷ್ಟ ಗುರಿಯಿರಬೇಕು. ದೂರದ ಬೆಟ್ಟದಲ್ಲಿ ಕಾಣುವ ದೇವಾಲಯವನ್ನು ಹತ್ತಿ ದೇವರ ದಶ೯ನ ಪಡೆಯಬೇಕಾದರೆ ಮೊದಲು ಬೆಟ್ಟದ ತಳಮುಟ್ಟಬೇಕು, ನಂತರ ಹಂತಹಂತವಾಗಿ ಬೆಟ್ಟವನ್ನು ಏರುತ್ತಾ ಸಾಗಿದರೆ ದೇವಾಲಯ ಸಂಕೀಣ೯ದ ಮೂಲಕ ಪ್ರವೇಶ ಪಡೆದು ಗಭ೯ಗೃಹದಲ್ಲಿನ ದೇವರ ದಶ೯ನ ಪಡೆಯಲು ಸಾಧ್ಯ, ಇದೇ ರೀತಿ ಹತಹಂತವಾಗಿ ಜೀವನದಲ್ಲಿಯೂ ಸಾಧನೆಯ ಮೆಟ್ಟಿಲನ್ನು ಪರಿಶ್ರಮದಿಂದ ಹತ್ತುತ್ತಾ ಹೋದಾಗ ಖಂಡಿತವಾಗಿಯೂ ಉದ್ದೇಶಿತ ಗುರಿ ತಲುಪಿ ಸಾಧನೆ ಸಾಧ್ಯವಾಗುತ್ತದೆ ಎಂದು ಹೇಳಿದರು. ಈ ಪಂದ್ಯಾವಳಿ ಪ್ರೌಢಶಾಲೆಯ ವಿದ್ಯಾಥಿ೯ಗಳಿಗೆ ಜೀವನೋತ್ಸಾವ ತುಂಬುವ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದೂ ಮುನೀರ್ ಅಹಮ್ಮದ್ ಅಭಿಪ್ರಾಯಪಟ್ಟರು. ಕನಾ೯ಟಕ ಕ್ರಿಕೆಟ್ ಅಸೋಸಿಯೇಷನ್ ತರಬೇತುದಾರ ಡಾ.ರೆನ್ ಟ್ರೇವರ್ ಮಾತನಾಡಿ, ಕ್ರಿಕೆಟ್ ಜತೆಗೇ ಪ್ರತೀ ಕ್ರೀಡೆಯನ್ನೂ ಕ್ರೀಡಾಥಿ೯ಗಳು ಧ್ಯಾನದಂತೆ ಪರಿಗಣಿಸಿ ಮನಸ್ಸನ್ನು ಕೇಂದ್ರೀಕರಿಸಿದಾಗ ಮಾತ್ರ ಸಾಧನೆಯ ಗುರಿ ಮುಟ್ಟಲು ಸಾಧ್ಯ ಎಂದರು. ಪ್ರತೀ ಪಂದ್ಯಾವಳಿಯ ಮುನ್ನ ಕೆಲ ನಿಮಿಷ ಧ್ಯಾನ ಮಾಡಿದಾಗ ಆ ಪಂದ್ಯಾವಳಿಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ ಎಂದೂ ಅವರು ಸಲಹೆ ನೀಡಿದರು. ರಾಜಶೇಖರ್ , ಮಾಗ೯ದಶಿ೯, ಶಿವಮೊಗ್ಗದಲ್ಲಿರುವ ಅಖಿಲ್ – ಅಶ್ವಥ್ ಮಾಗ೯ದಶಿ೯ಯಾಗಿದ್ದ ರಾಜಶೇಖರ್ ಮಾತನಾಡಿ, ಕ್ರಿಕೆಟ್ ಮಾತ್ರವಲ್ಲ, ಕೃತಿಕಾರನಾಗಿ, ಕೂಡ ಅಖಿಲ್ – ಅಶ್ವಥ್ ಸಾಧಕರಾಗಿ ಹೊರಹೊಮ್ಮುತ್ತಿದ್ದರು, ಯುವಪ್ರತಿಭೆಗಳ ಅಕಾಲಿಕ ಕಣ್ಮರೆ ತುಂಬಲಾರದ ನಷ್ಟವಾಗಿದೆ ಎಂದರು. ಪಂದ್ಯಾವಳಿಯ ಆಯೋಜಕರಾದ ಕೋಡಿಮಣಿಯಂಡ ರಘು ಮಾದಪ್ಪ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ದಶಮಾನೋತ್ಸವ ಕಂಡಿರುವ ಈ ಪಂದ್ಯಾವಳಿಯನ್ನು ಭವಿಷ್ಯದಲ್ಲಿ ನಡೆಸಲು ಕಷ್ಟಸಾಧ್ಯವಾಗಲಿದೆ, ಮುಂದಿನ ಮಾಗ೯ ಯಾವುದು ಎಂದು ಸಮಾನಮನಸ್ಕರು ಸೇರಿ ನಿಧ೯ರಿಸಲಿದ್ದೇವೆ ಎಂದು ಹೇಳಿದರು. ಕೊಡಗು ವಿದ್ಯಾಲಯ ಆಡಳಿತ ಮಂಡಳಿ ನಿದೇ೯ಶಕ ಸಿ ಎಸ್ ಗುರುದತ್ ಮಾತನಾಡಿ, ಕೊಡಗಿನ ಪಾಲಿಗೆ ಯುವ ಸಾಧಕರಾಗಬಹುದಾಗಿದ್ದ ಅಖಿಲ್ ಮತ್ತು ಅಶ್ವಥ್ ಅವರನ್ನು ಅತ್ಯಂತ ಬೇಗ ಕಳೆದುಕೊಂಡ ನೋವು ಎಲ್ಲರ ಮನಸ್ಸಿನಲ್ಲಿದೆ ಎಂದು ವಿಷಾಧಿಸಿದರಲ್ಲದೇ, ತನ್ನ ತಂದೆ ಕ್ರಿಕೆಟ್ ಗುರು ಸಿ.ವಿ.ಶಂಕರ್ ಮತ್ತು ಈ ಪಂದ್ಯಾವಳಿಯ ಆಯೋಜನೆಗೆ ಮುಖ್ಯ ಕಾರಣಕತ೯ರಾದ ರಘುಮಾದಪ್ಪ ಅವರು ನಿಕಟ ಬಾಂಧವ್ಯ ಹೊಂದಿದ್ದು, ಇವರೀವ೯ರೂ ಕೊಡಗಿನಲ್ಲಿ ಕ್ರೀಡಾ ಚಟವಟಿಕೆಗಳಿಗೆ ನೀಡಿದ ಪ್ರೋತ್ಸಾಹ ಮರೆಯುವಂಥದ್ದಲ್ಲ ಎಂದರು, ಅಕಾಲಿಕವಾಗಿ ಅಗಲಿದೆ ತಮ್ಮ ಮಕ್ಕಳ ನೆನಪಿನಲ್ಲಿ 10 ವಷ೯ಗಳಿಂದ ಈ ಪಂದ್ಯಾವಳಿಯನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುತ್ತಾ ಬಂದಿರುವ ರಘುಮಾದಪ್ಪ ಮತ್ತು ಅನಿತಾ ದಂಪತಿ ಕೊಡಗಿನ ಯುವ ಕ್ರೀಡಾಪಟುಗಳನ್ನು ಮುಂದಿನ ವಷ೯ಗಳಲ್ಲಿಯೂ ಇದೇ ರೀತಿ ಪ್ರೋತ್ಸಾಹಿಸಲಿ ಎಂದೂ ಗುರುದತ್ ಕೋರಿದರು. ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರಾ, ಆಡಳಿತಾತ್ಮಕ ವ್ಯವಸ್ಥಾಪಕ ರವಿ, ಪ್ರಮುಖರಾದ ಅನಿತಾ ರಘು ಮಾದಪ್ಪ, ಐ.ಕೆ.ಅನಿಲ್, ಭಾನು, ಕೋಡಿಮಣಿಯಂಡ ರಾಜನ್, ಕೊಂಗಂಡ ಸುರೇಶ್ , ತಮ್ಮು ಪೂವಯ್ಯ ಸೇರಿದಂತೆ ಅನೇಕರು ಹಾಜರಿದ್ದರು.ಕೊಡಗು ಯು – 16 ಬಾಲಕಿಯರು ಮತ್ತು ಮಂಗಳೂರು ತಂಡಗಳ ನಡುವೆ ಉದ್ಘಾಟನಾ ಪಂದ್ಯಾವಳಿ ನಡೆಯಿತು, ಐ ಪಿ ನಂದ, ಹರೀಶ್ ಯಾಲದಾಳು, ಇ ಎಲ್ ಸುರೇಶ್, ಬಿ ವಿ ನಂದ ಮತ್ತಿತರರು ಪಂದ್ಯಾವಳಿಯ ಆಯೋಜನೆಗೆ ಸಹಕರಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.