ಮಡಿಕೇರಿ NEWS DESK ನ.26 : ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಬಳಸಿ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಅವಹೇಳನ ಮಾಡಿರುವ ವ್ಯಕ್ತಿಯ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಅರ್ಚಕರ ಸಂಘ ಪೊನ್ನಂಪೇಟೆ ಠಾಣೆಯಲ್ಲಿ ದೂರು ದಾಖಲಿಸಿದೆ. ನಕಲಿ ಖಾತೆಯಲ್ಲಿ ಬಳಸಿರುವ ಹೆಸರು ಬ್ರಾಹ್ಮಣ ಸಮಾಜಕ್ಕೆ ಕಳಂಕ ತರುವ ಉದ್ದೇಶದಿಂದ ಕೂಡಿದ್ದು, ಇದನ್ನು ಖಂಡಿಸುವುದಾಗಿ ಸಂಘದ ಪ್ರಮುಖರು ತಿಳಿಸಿದರು. ಇನ್ನು ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದೂರು ಸಲ್ಲಿಸುವ ಸಂದರ್ಭ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಹಾಜರಿದ್ದರು.











