Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ ಗ್ಯಾರೆಂಟಿ ಯೋಜನೆಯ ಮಾಸಿಕ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ ಗ್ಯಾರೆಂಟಿ ಯೋಜನೆಯ ಮಾಸಿಕ ಸಭೆ*

ನವೆಂಬರ್ 27, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ನ.27 NEWS DESK : ಸರ್ಕಾರದ ಶಕ್ತಿ ಯೋಜನೆಯನ್ನು ಕೆಲವರು ಟೀಕಿಸಲು ಕೆಎಸ್‍ಆರ್‍ಟಿಸಿಯ ಕೆಲ ನಿರ್ವಾಹಕರು ಮತ್ತು ಚಾಲಕರೆ ಕಾರಣ ಎಂದು ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತಾರಾಜ್ ಹೇಳಿದರು. ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರೆಂಟಿ ಯೋಜನೆಯ ಮಾಸಿಕ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು, ತಮಗಾದ ಅನುಭವವನ್ನು ಸಭೆಯ ಗಮನಕ್ಕೆ ತಂದರು. ಸಭ್ಯತೆಯನ್ನು ಕಲಿಸುವ ತರಬೇತಿ ಕಾರ್ಯಾಗಾರ ಆಯೋಜಿಸುವ ಅನಿವಾರ್ಯತೆ ಇದೆ ಎಂದರು. ಹಿರಿಯ ನಾಗರಿಕರಿಗೆ ನೀಡುವ ರಿಯಾಯಿತಿ ಹಣವನ್ನು ಸರ್ಕಾರ ಕೆಎಸ್‍ಆರ್‍ಟಿಸಿಗೆ ಭರಿಸುತ್ತದೆ. ಅವರು ಭಿಕ್ಷೆ ಕೊಡುವುದಲ್ಲ ಎಂದು ಹೇಳಿದರು. ತಾ.ಪಂ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ತಮ್ಮ ಅನುಭವವನ್ನು ಹೇಳಿಕೊಂಡರು. ಬಸ್ ತಡವಾಗಿ ಬಂದಿದ್ದಕ್ಕೆ ಸಭ್ಯತೆಯಿಂದಲೇ ಪ್ರಶ್ನಿಸಿದಾಗ, ಇದೇನೂ ಮರ್ಸಿಡಿಸ್ ಬೆಂಜಾ, ಬೇಕಾದ್ರೆ ಹೋಗಿ ಕುತ್ಕೊಳ್ಳಿ ಎಂದು ಅನಾಗರಿಕತೆ ಪ್ರದರ್ಶಿಸಿದ. ನಿರ್ವಾಹಕನೊಂದಿಗೆ ವಾಗ್ವಾದ ಮಾಡಲಿಲ್ಲ. ನೇರವಾಗಿ ಹಿರಿಯ ಅಧಿಕಾರಿಗೆ ಮೇಲ್ ಮೂಲಕ ದೂರು ನೀಡಿದೆ ಎಂದು ಅನುಭವ ಹೇಳಿಕೊಂಡರು. ಮಹಿಳೆಯರು ಬಸ್‍ಗೆ ಕೈ ಅಡ್ಡಹಾಕಿದರೆ ಅನೇಕ ಬಸ್ ಚಾಲಕರು ಬಸ್ ನಿಲ್ಲಿಸದೇ ಹೋಗುತ್ತಾರೆ ಎಂದು ಸದಸ್ಯ ವಿರೇಂದ್ರ ಕುಮಾರ್ ದೂರಿದರು. ಅಂತಹ ಬಸ್ ನಂಬರ್, ಮಾರ್ಗ, ಸಮಯವನ್ನು ಬರೆದು ದೂರು ನೀಡಿದರೆ, ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಜರುಗಿಸುತ್ತಾರೆ ಎಂದು ಸಂಚಾರಿ ನಿಯಂತ್ರಕ ಶ್ರೀನಿವಾಸ್ ಭರವಸೆ ನೀಡಿದರು. 2023ರಿಂದ ನವೆಂಬರ್ 24ರ ವರಗೆ ಸೋಮವಾರಪೇಟೆ ತಾಲ್ಲೂಕಿನಲ್ಲಿ 81,22,476 ಮಂದಿ ಮಹಿಳೆಯರು ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಪ್ರಯಾಣಿಸಿದ್ದಾರೆ. ಮಡಿಕೇರಿ ಡಿಪೋಗೆ ಪ್ರತಿ ದಿನ 6.5 ಲಕ್ಷ ಅದಾಯ ಬರುತ್ತಿದೆ ಎಂದು ಶ್ರೀನಿವಾಸ ಹೇಳಿದರು.2024ರ ನವೆಂಬರ್ ಅಂತ್ಯಕ್ಕೆ ಗೃಹಲಕ್ಷ್ಮೀ ಯೋಜನೆಯಲ್ಲಿ ತಾಲ್ಲೂಕಿನಲ್ಲಿ 25232 ಫಲಾನುಭವಿಗಳ ನೊಂದಾಣಿಯಾಗಿದ್ದು, 24,802 ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದೆ. ಶೇ.97.06 ಸಾಧನೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಸಾವಿತ್ರಮ್ಮ ತಿಳಿಸಿದರು. ಇನ್ನೆರಡು ತಿಂಗಳಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ, ಶೇ.100ರಷ್ಟು ಪ್ರಗತಿ ಸಾಧಿಸುವ ಗುರಿಯಿದೆ ಎಂದು ಅಧ್ಯಕ್ಷರು ಸಭೆಯ ಗಮನಕ್ಕೆ ತಂದರು. ಗೃಹಜ್ಯೋತಿ ಯೋಜನೆಯಲ್ಲಿ ತಾಲ್ಲೂಕಿನಲ್ಲಿ 26418 ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಅಧಾರ್ ಸಂಖ್ಯೆ ಸರಿಹೊಂದದ ಹಾಗು ಇನ್ನಿತರ ತಾಂತ್ರಿಕ ಕಾರಣಗಳಿಂದ 166 ಮನೆಗಳಿಗೆ ಸೌಲಭ್ಯ ಸಿಗುತ್ತಿಲ್ಲ ಶೇ.99.38 ಸಾಧನೆಯಾಗಿದೆ ಎಂದು ಎಇಇ ತಿಳಿಸಿದರು. ಅನ್ನಭಾಗ್ಯ ಯೋಜನೆಯಡಿ, ತಾಲ್ಲೂಕಿನಲ್ಲಿ 24,410 ಫಲಾನುಭವಿಗಳಿದ್ದು, 22,889 ಫಲಾನುಭವಿಗಳಿಗೆ ಹಣ ಸಂದಾಯವಾಗಿದೆ. ಆರು ತಿಂಗಳಿನಿಂದ ಪಡಿತರ ತೆಗೆದುಕೊಳ್ಳದ 606 ಕಾರ್ಡ್‍ಗಳು ಸ್ಥಗಿತಗೊಂಡಿವೆ. ಆದಾಯ ತೆರಿಗೆ ಕಟ್ಟುವ 207 ಪಡಿತರ ಚೀಟಿಗಳು ಎಪಿಎಲ್ ಆಗಿ ಪರಿವರ್ತನೆಯಾಗಿವೆ. 1.20 ಲಕ್ಷ ರೂ.ಗಳಷ್ಟು ಮೇಲ್ಪಟ್ಟ ಆದಾಯ ಪ್ರಮಾಣ ಪತ್ರ ಪಡೆದಿರುವ 2411 ಪಡಿತರ ಚೀಟಿಗಳು ಪರಿಶೀಲನೆಯಲ್ಲಿವೆ ಎಂದು ಆಹಾರ ನಿರೀಕ್ಷಕಿ ಯಶಸ್ವಿನಿ ಸಭೆಗೆ ತಿಳಿಸಿದರು. ಯುವನಿಧಿಯಲ್ಲಿ ಸೋಮವಾರಪೇಟೆ ತಾಲ್ಲೂಕಿನಲ್ಲಿ 385 ಮಂದಿ ನೊಂದಾವಣಿಯಾಗಿದ್ದು, 285 ಮಂದಿಗೆ ಹಣ ಸಂದಾಯವಾಗುತ್ತಿದೆ. 2023ರಲ್ಲಿ ಪದವಿ ಮತ್ತು ಡಿಪ್ಲೋಮ ಪಡೆದವರು, ಯೋಜನೆಗೆ ಅರ್ಹರು ಎಂದು ಸಂಬಂಧಪಟ್ಟ ಅಧಿಕಾರಿ ಮಾಹಿತಿ ನೀಡಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.