Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ವಕೀಲರ ಸಂಘದಿಂದ ವಕೀಲರ ದಿನಾಚರಣೆ ಸಂಭ್ರಮ :  ವಕೀಲ ವೃತ್ತಿಯ ಘನತೆ ಹೆಚ್ಚಿಸುವ ನಿಟ್ಟಿನಲ್ಲಿ ಯುವಪೀಳಿಗೆಗೆ ಸೂಕ್ತ ಮಾಗದಶ೯ನ ನೀಡಿ  : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ವಕೀಲರ ಸಂಘದಿಂದ ವಕೀಲರ ದಿನಾಚರಣೆ ಸಂಭ್ರಮ :  ವಕೀಲ ವೃತ್ತಿಯ ಘನತೆ ಹೆಚ್ಚಿಸುವ ನಿಟ್ಟಿನಲ್ಲಿ ಯುವಪೀಳಿಗೆಗೆ ಸೂಕ್ತ ಮಾಗದಶ೯ನ ನೀಡಿ  : ಶಾಸಕ ಎ.ಎಸ್.ಪೊನ್ನಣ್ಣ*

ಡಿಸೆಂಬರ್ 3, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.3 NEWS DESK : ವಕೀಲ ವೃತ್ತಿಯ ಘನತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯುವಪೀಳಿಗೆಯ ವಕೀಲರಿಗೆ ಹಿರಿಯ ವಕೀಲರು ಪ್ರೋತ್ಸಾಹ ನೀಡುವ ಮಾಗ೯ದಶಿ೯ಗಳಾಗಬೇಕೆಂದು ಮುಖ್ಯ ಮಂತ್ರಿಗಳ ಕಾನೂನು ಸಹೆಗಾರ ಮತ್ತು ವೀರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದ್ದಾರೆ.  ನಗರದ ಹೊರವಲಯದಲ್ಲಿನ ಕ್ಯಾಪಿಟಲ್ ವಿಲೇಜ್ ರೆಸಾಟ್೯ನಲ್ಲಿ ಮಡಿಕೇರಿ ವಕೀಲರ ಸಂಘದ ವತಿಯಿಂದ ಆಯೋಜಿತ ವಕೀಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ವಕೀಲರ ಸೇವೆ ಸದಾ ಸ್ಮರಣೀಯವಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿಯೂ ವಕೀಲರು ಮುಂಚೂಣಿಯಲ್ಲಿದ್ದದ್ದು ಗಮನಾಹ೯, ಇಂಥ ಪವಿತ್ರ ವೃತ್ತಿಯಾದ ವಕೀಲ ವೃತ್ತಿಯ ಘನತೆಯನ್ನು ಸದಾ ಎತ್ತರದಲ್ಲಿರುವಂತೆ ಪ್ರತೀಯೋವ೯ ವಕೀಲರೂ ಗಮನಹರಿಸುವಂತೆ ಹೇಳಿದರು. ಗ್ರಾಮೀಣ ನ್ಯಾಯಾಲಯಗಳಿಂದ ಮೊದಲ್ಗೊಂಡು ಸವೋ೯ಚ್ಚ ನ್ಯಾಯಾಲಯದವರೆಗೂ ವಕೀಲರ ಪಾಂಡಿತ್ಯ ಸಮಾನವಾಗಿರುತ್ತದೆ. ಇದರಿಂದಾಗಿಯೇ ಇಂದಿಗೂ ವಕೀಲ ವೃತ್ತಿ ತನ್ನ ನಂಬಿಕೆಯನ್ನು ದೇಶದಲ್ಲಿ ಉಳಿಸಿಕೊಂಡಿದೆ ಎಂದು ಅಭಿಪ್ರಾಯಪಟ್ಟ ಪೊನ್ನಣ್ಣ, ವಕೀಲರು ಸದಾ ಹೊಸವಿಚಾರಗಳನ್ನು, ನವ ಕಾನೂನುಗಳನ್ನು ಅಧ್ಯಯನ ಮಾಡುತ್ತಲೇ ಇರಬೇಕು. ಈ ಮೂಲಕ ವೃತ್ತಿಯಲ್ಲಿ ಜ್ಞಾನ ಸಂಪಾದನೆಗೆ ಸಕ್ರಿಯರಾಗಿರಬೇಕೆಂದರು. ಜ್ಞಾನದ ತಿಳುವಳಿಕೆಯಿಂದ ಉನ್ನತ ಮಟ್ಟದ ವಕೀಲರಾಗಲು ಸಾಧ್ಯ ಎಂದ ಅವರು ವಕೀಲರ ಜತೆಗೆ ವಕೀಲ ವೃತ್ತಿಯ ಸಂರಕ್ಷಣೆ ಕೂಡ ಆಗಬೇಕೆಂಬ ಉದ್ದೇಶದಿಂದ ಕಳೆದ ವಷ೯ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ವಕೀಲರ ಸಂರಕ್ಷಣಾ ಕಾಯಿದೆಯನ್ನು ಮಂಡಿಸಲಾಯಿತು. ವಕೀಲರ ರಕ್ಷಣೆಯಾದಾಗ ಆ ಮೂಲಕ ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆ ಕೂಡ ಆಗುತ್ತದೆ ಎಂಬ ಉದ್ದೇಶ ಈ ಕಾಯಿದೆ ಜಾರಿಯ ಹಿನ್ನಲೆಯಲ್ಲಿದೆ ಎಂದೂ ಪೊನ್ನಣ್ಣ ಮಾಹಿತಿ ನೀಡಿದರು. ಕನಾ೯ಟಕ ಸಕಾ೯ರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎನ್.ದೇವದಾಸ್ ಮಾತನಾಡಿ, 75 ವಷ೯ಗಳನ್ನು ಪೂರೈಸಿರುವ ದೇಶದ ಸಂವಿಧಾನ ಅಪಾಯದಲ್ಲಿದೆ ಎಂಬ ಕೂಗು ಕೇಳಿಬಂದಿರುವ ಈ ಕಾಲಘಟ್ಟದಲ್ಲಿ, ವಕೀಲರು ಸಂವಿಧಾನದ ಸಂರಕ್ಷರಾಗುವತ್ತ ಮುಂದಡಿ ಇರಿಸಬೇಕು, ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದ ವಕೀಲ ಸಮೂಹ, ಸ್ವಾತಂತ್ರ್ಯಾನಂತರ ಪ್ರಜಾಪ್ರಭುತ್ವದ ರಕ್ಷಣೆ ನಿಟ್ಟಿನಲ್ಲಿ ಹಿಂದಡಿ ಇರಿಸುವಂತೆ ಆಗಬಾರದು ಎಂದು ಕರೆ ನೀಡಿದರು. ಕಠಿಣ ಶ್ರಮದಿಂದ ಯುವಪೀಳಿಗೆಯು ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡು ಉನ್ನತ ಸ್ಥಾನ ಪಡೆಯಬೇಕು. ಆ ಮೂಲಕ ವೃತ್ತಿಯ ಗೌರವ ಕಾಪಾಡಿಕೊಳ್ಳುವಂತೆ ಕರೆ ನೀಡಿದ ದೇವದಾಸ್, ಕಿರಿಯ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದಾಗ ಅದನ್ನು ಆಲಿಸಿ ಕಿರಿಯರಿಗೆ ಪ್ರೋತ್ಸಾಹದ ನುಡಿಗಳನ್ನಾಡಿ ಮೆಚ್ಚುಗೆ ವ್ಯಕ್ತಪಡಿಿಸಬೇಕು, ಜತೆಗೇ ಮಾಗ೯ದಶ೯ನ ನೀಡುವ ಕೆಲಸ ಹಿರಿಯ ವಕೀಲರಿಂದ ಆಗಬೇಕೆಂದು ಹೇಳಿದರು. ವಕೀಲರು ಸದಾ ನ್ಯಾಯಕ್ಕಾಗಿ ಹೋರಾಟ ನಡೆಸಬೇಕೇ ವಿನಾ ತೀಪು೯ ನೀಡುವ ನ್ಯಾಯಾಧೀಶರ ವಿರುದ್ದ ಅಲ್ಲ ಎಂದು ಸೂಚ್ಯವಾಗಿ ದೇವದಾಸ್ ಅಭಿಪ್ರಾಯ ವ್ಯಕ್ತಪಡಿಸಿದರು. ಮಡಿಕೇರಿಯ ಮಹದೇವಪೇಟೆ ರಸ್ತೆ ಅಗಲೀಕರಣ, ಮುಖ್ಯರಸ್ತೆಯಲ್ಲಿ ಅಂಗಡಿಗಳ ತೆರವು ಪ್ರಕರಣ ಸೇರಿದಂತೆ ಇದೀಗ ತ್ಯಾಜ್ಯ ವಿಲೇವಾರಿ ಸಮಸ್ಯೆ ಸಂಬಂಧಿತ ತಾನು ಮಡಿಕೇರಿ ನಿವಾಸಿಗಳ ಪರವಾಗಿ ಹೈಕೋಟ್೯ನಲ್ಲಿ ವಾದಮಂಡಿಸುತ್ತಿದ್ದು, ಹೀಗಾಗಿ ಮಡಿಕೇರಿಯ ಸ್ವಚ್ಚತೆ ಬಗ್ಗೆ ತನಗೂ ಕಾಳಜಿ ಇದೆ ಎಂದೂ ದೇವದಾಸ್ ಹೇಳಿದರು. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮಾತನಾಡಿ, ಕಾನೂನು ಪ್ರತಿಪಾದಕರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳುವ ವಕೀಲರು ಸ್ವತಹ ಕಾನೂನನ್ನು ಪಾಲಿಸುವ ಮೂಲಕ ಆದಶ೯ಪ್ರಾಯರಾಗಿ ಜೀವಿಸುವುದು ಮುಖ್ಯ ಎಂದರಲ್ಲದೇ, ನ್ಯಾಯಾಲಯದ ಒಳಗೆ ಮತ್ತು ನ್ಯಾಯಾಲಯದ ಹೊರಗಡೆಯೂ ವಕೀಲರು ತವ್ವ ವ್ಯಕ್ತಿತ್ವಕ್ಕೆ ಕುಂದು ಬಾರದಂತೆ ವತಿ೯ಸಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮಡಿಕೇರಿ ವಕೀಲರ ಸಂಘದ ಪ್ರಧಾನ ಕಾಯ೯ದಶಿ೯ ಡಿ.ಎಂ.ಕೇಶವ, ಉಪಾಧ್ಯಕ್ಷ ಎಂ.ಪಿ.ನಾಗರಾಜ್, ಖಜಾಂಜಿ ಜಿ.ಆರ್.ರವಿಶಂಕರ್ ವೇದಿಕೆಯಲ್ಲಿದ್ದರು, ಉಪಾಧ್ಯಕ್ಷ ಪವನ್ ಪೆಮ್ಮಯ್ಯ, ಜಿತೇಂದ್ರ, ಕಪಿಲ್ ಕುಮಾರ್ ಕಾಯ೯ಕ್ರಮ ನಿವ೯ಹಿಸಿದರು. ವಕೀಲರ ಸಾಧಕ ಮಕ್ಕಳಿಗೆ ಬಹುಮಾನ ಮತ್ತು ಕ್ರೀಡಾಕೂಟದಲ್ಲಿ ವಿಜೇತರಾದ ವಕೀಲರಿಗೆ ಬಹುಮಾನ ವಿತರಿಸಲಾಯಿತು. ವಕೀಲ ವೃಂದದಿಂದ ಆಕಷ೯ಕ ಸಾಂಸ್ಕೃತಿಕ ಕಾಯ೯ಕ್ರಮಗಳು ಮನಸೆಳೆದವು.

ಸಕಾ೯ರದ ಟ್ರಬಲ್ ಶೂಟರ್ ಪೊನ್ನಣ್ಣ…! :: ಕೊಡಗಿನ ಹೆಸರಾಂತ ರಾಜಕಾರಣಿ, ವಕೀಲ ಎ.ಕೆ.ಸುಬ್ಬಯ್ಯ ರಾಜ್ಯದಲ್ಲಿ ಫೈರ್ ಬ್ರಾಂಡ್ ಆಗಿದ್ದರೆ ಅವರ ಮಗ ಎ.ಎಸ್ .ಪೊನ್ನಣ್ಣ ಸೂಪರ್ ಫ್ರೈರ್ ಬ್ರಾಂಡ್ ಆಗಿದ್ದಾರೆ ಎಂದು ರಾಜ್ಯ ಸಕಾ೯ರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎನ್.ದೇವದಾಸ್ ಶ್ಲಾಘಿಸಿದರು. ಎ.ಕೆ.ಸುಬ್ಬಯ್ಯ ಅವರೊಂದಿಗಿನ ತಮ್ಮ ನೆನಪುಗಳನ್ನು ಸವಿಸ್ತಾರವಾಗಿ ದೇವದಾಸ್ ವಕೀಲರ ದಿನಾಚರಣೆ ಸಂದಭ೯ ಸಭಿಕರ ಮುಂದಿಟ್ಟರು. ವಕೀಲರ ಅತ್ಯಗತ್ಯವಾಗಿದ್ದ ವಕೀಲರ ಸಂರಕ್ಷಣಾ ಕಾಯಿದೆ ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಅವರನ್ನು ಮಡಿಕೇರಿ ವಕೀಲರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು, ಈ ಸಂದಭ೯ ಪೊನ್ನಣ್ಣ ಅವರನ್ನು ರಾಜ್ಯ ಸಕಾ೯ರದ ಟ್ರಬಲ್ ಶೂಟರ್ ಎಂದು ವಕೀಲ ಸಮೂಹದ ಅಭಿನಂದನಾ ಪತ್ರದಲ್ಲಿ ವಣಿ೯ಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪೊನ್ನಣ್ಣ, ಮುಖ್ಯಮಂತ್ರಿಗಳ ವಿರುದ್ದದ ಮೂಡಾ ಹಗರಣದ ಸಂದಭ೯ ದೇಶದ ಅತ್ಯಂತ ಖ್ಯಾತನಾಮ ವಕೀಲರ ಜತೆ ಸಂಪಕ೯ ಹೊಂದಲು ತನಗೆ ಸಾಧ್ಯವಾಯಿತು, ಕಪಿಲ್ ಸಿಬ್ಬಲ್ ಅವರಂಥ ಹಿರಿಯ ವಕೀಲರೊಂದಿಗಿನ ಚಚೆ೯ ಸಂದಭ೯ದಲ್ಲಿ ರಾಜಕೀಯ ಭೇಧವಿಲ್ಲದೇ ನಾನಿ ಫಾಲ್ಕಿವಾಲಾರಂಥ ದಿಗ್ಗಜ ವಕೀಲರ ಕಾಯ೯ವೈಖರಿಯನ್ನು ಸ್ಮರಿಸಿಕೊಳ್ಳುವ ಅವಕಾಶ ಅವರಿಂದ ತನಗೆ ದೊರಕಿತ್ತು ಎಂದರು. ತಾನು ಹೈಕೋಟ್೯ ವಕೀಲನಾಗಿದ್ದ ಸಂದಭ೯ ರಾಜಕೀಯ ಭಿನ್ನಮತಗಳನ್ನು ಮರೆತು ಎಲ್ಲಾ ಪಕ್ಷದವರೂ ತನ್ನಲ್ಲಿ ಕಕ್ಷಿದಾರರಾಗಿ ಬರುತ್ತಿದ್ದರು, ವಿಧಾನಸಭಾ ಚುನಾವಣೆಯಲ್ಲಿ ವಿರಾಜಪೇಟೆ ಕ್ಷೇತ್ರದಿಂದ ತನ್ನ ವಿರುದ್ದ ಸ್ಪಧಿ೯ಸಿದ್ದವರೂ ತನ್ನ ಕಕ್ಷಿದಾರರೇ ಆಗಿದ್ದರು, ಬಹುಷ ಚುನಾವಣೆಯಲ್ಲಿ ತಾನು ಸ್ಪಧಿ೯ಸುವ ವಿಚಾರ ಗೊತ್ತಿದ್ದರೆ ಅವರು ನನ್ನ ಬಳಿ ಕಕ್ಷಿದಾರರಾಗಿ ಬರುತ್ತಿರಲಿಲ್ಲವೋ ಏನೋ ಎಂದೂ ಪೊನ್ನಣ್ಣ ಹಾಸ್ಯ ಮಿಶ್ರಿತವಾಗಿ ಹೇಳಿದರು. ಇದೇ ಸಂದಭ೯ ಮಡಿಕೇರಿ ನ್ಯಾಯಾಲಯಕ್ಕೆ 1,30 ಕೋಟಿ ರು ವೆಚ್ಚದಲ್ಲಿ ತಡೆಗೋಡೆ ಕಾಮಗಾರಿಗೆ ಶೀಘ್ರ ಸಕಾ೯ರದ ಮಂಜುರಾತಿ ನೀಡುವಂತೆ ವಕೀಲರ ಸಂಘದ ವತಿಯಿಂದ ಅಧ್ಯಕ್ಷ ನಿರಂಜನ್ ಅವರು ಪೊನ್ನಣ್ಣ ಅವರಿಗೆ ಬೇಡಿಕೆಯ ಮನವಿ ಪತ್ರ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.