ಸೋಮವಾರಪೇಟೆ ಡಿ.7 NEWS DESK : ಸೋಮವಾರಪೇಟೆ ತಾಲ್ಲೂಕು ಆಡಳಿತದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಾಣವಾರ ರಸ್ತೆಯಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್, ಪ.ಪಂ ಮುಖ್ಯಾಧಿಕಾರಿ ಕಾರ್ಯನಿರ್ವಾಹಣ ಸತೀಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಆರೋಗ್ಯ ನಿರೀಕ್ಷಕ ಜಾಸಿಂಖಾನ್, ದಲಿತಪರ ಸಂಘಟನೆಗಳ ಮುಖಂಡರುಗಳಾದ ಜನಾರ್ಧನ್. ಟಿ.ಈ.ಸುರೇಶ್. ಬಿ.ಈ.ಜಯೇಂದ್ರ, ಪ್ರತಾಪ್. ಈರಪ್ಪ. ಡಿ.ಎಸ್.ನಿರ್ವಾಣಪ್ಪ. ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಪಿ.ಕೆ.ಚಂದ್ರು, ಮೋಹಿನಿ ಇದ್ದರು.











