
ಮಡಿಕೇರಿ ಡಿ.13 NEWS DESK : ಭಾರತೀಯ ಭಾಷಾ ದಿವಸ ಹಾಗೂ ತಮಿಳು ಮಹಾ ಕವಿ ಸುಬ್ರಹ್ಮಣ್ಯ ಭಾರತಿಯಾರ್ ಅವರ 143 ನೇ ಜಯಂತಿಯ ಅಂಗವಾಗಿ ತಮಿಳುನಾಡಿನ ರಾಜಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಡಾ. ಮುಲ್ಲೇಂಗಡ ರೇವತಿ ಪೂವಯ್ಯ ಅವರನ್ನು ರಾಜ್ಯಪಾಲ ಆರ್.ಎನ್. ರವಿ ಅವರು ಸನ್ಮಾನಿಸಿದರು. ಪ್ರಾಚೀನ ತಮಿಳು ಗ್ರಂಥ ತಿರುಕುರಳ್ ಅನ್ನು ಕೊಡವ ಭಾಷಾ ಅನುವಾದದ ಮೂಲಕ ಭಾರತೀಯ ಭಾಷಾ ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಕಾವೇರಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಇವರು ಮುಲ್ಲೇಂಗಡ ಮಧೋಶ್ ಪೂವಯ್ಯ ಅವರ ಪತ್ನಿ ಹಾಗೂ ನಾಲ್ಕೇರಿ ಗ್ರಾಮದ ಚೆಪ್ಪುಡಿರ ಸನ್ನು ಮುದ್ದಪ್ಪ ಮತ್ತು ನಳಿನಿ ದಂಪತಿಗಳ ಪುತ್ರಿ.









