
ಮಡಿಕೇರಿ ಡಿ.13 NEWS DESK : ಶಾಸಕರ ಅನುದಾನದಿಂದ ಬಿದ್ದಾಟಂಡ ವಾಡೆ ರಸ್ತೆಯಿಂದ ನಾಪೋಕ್ಲು ಸಂಪರ್ಕ ರಸ್ತೆ ಹಾಗೂ ಕೋಟೇರಿ ರಸ್ತೆಯಿಂದ ಮೂಟೇರಿ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ ದೊರೆಯಿತು. ಗ್ರಾ.ಪಂ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್ ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೇಟ್ಟಿರ ಕುಶು ಕುಶಾಲಪ್ಪ ಮಾತನಾಡಿ, ಕಾಮಗಾರಿ ನಡೆಯುವ ಸಂದರ್ಭ ಯಾವುದೇ ರೀತಿಯ ರಾಜೀ ಮಾಡಿಕೊಳ್ಳದೆ, ಉತ್ತಮ ರೀತಿಯ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲು ಸಹಕರಿಸಬೇಕೆಂದು ವಿನಂತಿಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಗ್ರಾಮ ಪಂಚಾಯಿತಿ ಸದಸ್ಯರಗಳಾದ ಸಾಬ ತಿಮ್ಮಯ್ಯ, ಕುಲ್ಲೇಟಿರ ಅರುಣ ಬೇಭ, ಹೇಮಾವತಿ, ಗಂಗಮ್ಮ, ಗ್ರಾಮಸ್ಥರಾದ ಬಿದ್ದಾಟಂಡ ಡಿಕ್ಕಿ, ಪಟ್ರಪಂಡ ಮೋಹನ್, ಬಿದ್ದಾಟಂಡ ದಿನೇಶ್, ಬಿದ್ದಾಟಂಡ ಜೀನ್ನು ನಾಣಯ್ಯ, ಬಿದ್ದಾಟಂಡ ರೋಜಿ, ಫುಲ್ಲೇರ ಪದ್ಮಿನಿ, ಬಿದ್ದಾಟಂಡ ಕುಟುಂಬಸ್ಥರು ಹಾಗೂ ಪುಲ್ಲೆರ ಕುಟುಂಬಸ್ಥರು ಹಾಜರಿದ್ದರು.









