Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬಿಜೆಪಿಯ ಕೃಪಾಪೋಷಿತ ಪ್ರತಿಭಟನೆ : ಗಾಳಿಬೀಡು ವಲಯ ಕಾಂಗ್ರೆಸ್ ಆರೋಪ*
ಇತ್ತೀಚಿನ ಸುದ್ದಿಗಳು

*ಬಿಜೆಪಿಯ ಕೃಪಾಪೋಷಿತ ಪ್ರತಿಭಟನೆ : ಗಾಳಿಬೀಡು ವಲಯ ಕಾಂಗ್ರೆಸ್ ಆರೋಪ*

December 19, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.19 NEWS DESK : ಗಾಳಿಬೀಡು ರಸ್ತೆ ಡಾಂಬರೀಕರಣಕ್ಕಾಗಿ ಒತ್ತಾಯಿಸಿ ಗ್ರಾಮಸ್ಥರ ಹೆಸರಿನಲ್ಲಿ ನಡೆಸಿದ ಪ್ರತಿಭಟನೆ ಬಿಜೆಪಿಯ ಕೃಪಾಪೋಷಿತ ಪ್ರತಿಭಟನೆಯಾಗಿದೆ ಎಂದು ಗಾಳಿಬೀಡು ವಲಯ ಕಾಂಗ್ರೆಸ್ ಅಧ್ಯಕ್ಷ ಸುಭಾಷ್ ಆಳ್ವ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗ್ರಾಮದ ರಸ್ತೆ ಕಳೆದ 20 ವರ್ಷಗಳಿಂದ ಸಂಪೂರ್ಣ ಡಾಂಬರೀಕರಣಗೊಂಡಿಲ್ಲ, ಅಂದಿನಿಂದ ಇಂದಿನವರೆಗೆ ರಸ್ತೆಗೆ ತೇಪೆ ಹಾಕುವ ಕಾರ್ಯವೇ ಮುಂದುವರಿದುಕೊಂಡು ಬಂದಿದೆ. ಈ ಹಿಂದೆ ನಡೆದ ತೇಪೆ ಕಾರ್ಯವನ್ನು ವಿರೋಧಿಸದೇ ಇದ್ದ ಬಿಜೆಪಿ ಸದಸ್ಯರು ಇಂದು ಆಡಳಿತ ವ್ಯವಸ್ಥೆ ಬದಲಾಗಿರುವುದನ್ನು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಸ್ವಾರ್ಥ ರಾಜಕಾರಣಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮಸ್ಥರ ಹೆಸರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎನ್ನುವ ಮಾಹಿತಿ ಇದ್ದ ಕಾರಣದಿಂದ ಗ್ರಾಮಸ್ಥರಿಂದ ದೊಡ್ಡ ಬೆಂಬಲ ದೊರೆತ್ತಿಲ್ಲವೆಂದು ತಿಳಿಸಿದ್ದಾರೆ. ಈ ಹಿಂದೆ ಬಿಜೆಪಿ ಶಾಸಕರು ಇದ್ದ ಸಂದರ್ಭದಲ್ಲಿ ಗ್ರಾಮಸ್ಥರು ಪ್ರತಿಭಟನೆಗೆ ಕರೆ ನೀಡಿದಾಗ ಬೆಂಬಲಿಸದೇ ಇದ್ದ ಪ್ರಮುಖರು, ಇಂದು ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ನಡೆಸಿದ್ದಾರೆ. 2008ನೇ ಇಸವಿಯಲ್ಲಿ ಬಿಜೆಪಿ ಮಂದಿ ಕಾನೂನಿಗೆ ವಿರುದ್ಧವಾಗಿ ಮಡಿಕೇರಿ-ಗಾಳಿಬೀಡು-ಕಡಮಕಲ್ಲು-ಸುಬ್ರಹ್ಮಣ್ಯ ರಸ್ತೆಗಾಗಿ ಪ್ರತಿಭಟನೆ ನಡೆಸಿ ಇದೀಗ ರಸ್ತೆ ಮುಚ್ಚಿರುವುದನ್ನು ಗಮನಿಸಬಹುದು. ಈ ಕಾರಣದಿಂದ ರಸ್ತೆಗೆ ಬರುವ ಅನುದಾನವೂ ಕಡಿತಗೊಂಡಿದೆ. ಕಾನೂನಾತ್ಮಕ ಹೋರಾಟದಲ್ಲಿ ಮುಂದುವರೆದಿದ್ದರೆ ಇಂದು ಸಾರ್ವಜನಿಕವಾಗಿ ರಸ್ತೆ ಸಂಚಾರಕ್ಕೆ ಮುಕ್ತವಾಗಿರುತ್ತಿತ್ತು ಎಂದು ಆರೋಪಿಸಿದ್ದಾರೆ. ಮಡಿಕೇರಿಯ ಶಾಸಕ ಡಾ.ಮಂತರ್ ಗೌಡ ಅವರು ಮಡಿಕೇರಿ-ಗಾಳಿಬೀಡು ಗ್ರಾಮದ ರಸ್ತೆಗಾಗಿ ಮೀಸಲಿಟ್ಟಿದ್ದ 2.5ಕೋಟಿ ಹಣವನ್ನು 3.5 ಕೋಟಿಗೆ ಏರಿಕೆ ಮಾಡಿ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಕೆಲವೇ ತಿಂಗಳುಗಳಲ್ಲಿ ಅನುಮೋದನೆ ಪಡೆಯುವ ಭರವಸೆಯನ್ನೂ ಶಾಸಕರು ನೀಡಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿದ ಅನೇಕ ಸಂದರ್ಭಗಳಲ್ಲಿ ಈ ವಿಚಾರವನ್ನು ಶಾಸಕರು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಗ್ರಾಮಸ್ಥರಿಗೂ ಈ ಬಗ್ಗೆ ಮಾಹಿತಿ ಇದೆ. ಆದರೆ ಬಿಜೆಪಿ ಮಂದಿ ಇರುವ ವಾಸ್ತವ ವಿಚಾರವನ್ನು ತಿರುಚಿ ಗ್ರಾಮಸ್ಥರ ಭಾವನೆಯ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಈ ಹಿಂದಿನ ಬಿಜೆಪಿ ಸರಕಾರದ ಅವಧಿಯ ವೈಫಲ್ಯವನ್ನು ಮುಚ್ಚಿ ಹಾಕುವ ಸಂಚು ಇದಾಗಿದೆ ಎಂದು ಸುಭಾಷ್ ಆಳ್ವ ಆರೋಪಿಸಿದ್ದಾರೆ. ಡಾ.ಮಂತರ್ ಗೌಡ ಅವರು ಶಾಸಕರಾದ ನಂತರ ಇಲ್ಲಿಯವರೆಗೆ ಅಂದಾಜು 70ಲಕ್ಷದ ರೂ. ಅನುದಾನ ದೊರಕಿದೆ. ಗ್ರಾಮ ಪಂಚಾಯತ್ ಗೆ ಸರಕಾರದಿಂದ ಬಂದಿರುವ ಅನುದಾನದ ಹೊರತಾಗಿಯೂ ಅಂದಾಜು 70ಲಕ್ಷದ ಕಾಮಗಾರಿ ನಡೆದಿರುವುದು ಶ್ಲಾಘನೀಯ. ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಸಂಪರ್ಕ ಕಡಿತಗೊಳ್ಳುತ್ತಿದ್ದ ಅನೇಕ ರಸ್ತೆಗಳು ಇಂದು ಕಾಯಕಲ್ಪ ಪಡೆದುಕೊಳ್ಳುತ್ತಿವೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿರುವ ಶಾಸಕರ ಮೇಲೆ ಗ್ರಾಮದ ಜನರಿಗೆ ಅಪಾರ ವಿಶ್ವಾಸವಿದೆ. ವಿಶ್ವಾಸಕ್ಕೆ ಧಕ್ಕೆಯಾಗದ ರೀತಿಯಲ್ಲಿ ಮುಂದೆಯೂ ಕಾರ್ಯನಿರ್ವಹಿಸಲಿದ್ದಾರೆ ಎನ್ನುವ ನಂಬಿಕೆ ಗ್ರಾಮಸ್ಥರಲ್ಲಿದೆ. ರಸ್ತೆ ಕಾಮಗಾರಿಗಾಗಿ ಅನುಮೋದನೆಗೆಂದು ಸಲ್ಲಿಸಿರುವ 3.5 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿಸಿಕೊಡುವಂತೆ ಗಾಳಿಬೀಡು ವಲಯ ಕಾಂಗ್ರೆಸ್ ಸಮಿತಿ ಶಾಸಕರಲ್ಲಿ ಮನವಿ ಮಾಡಿಕೊಳ್ಳಲಿದೆ ಮತ್ತು ಗ್ರಾಮಗಳ ಅಭಿವೃದ್ಧಿಗಾಗಿ ಅವಿರತ ಶ್ರಮವಹಿಸಲಿದೆ ಎಂದು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ರಾಷ್ಟ್ರಮಟ್ಟದ ಥ್ರೋಬಾಲ್ ಪಂದ್ಯಾವಳಿ : ಕರ್ನಾಟಕವನ್ನು ಪ್ರತಿನಿಧಿಸಲಿರುವ ಬ್ಲಾಕ್ ಪ್ಯಾಂಥರ್ಸ್ ಮರಗೋಡು ತಂಡ*
Next Article *ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಕೊಡಗು ಎಸ್‍ಡಿಪಿಐ ಆಗ್ರಹ*

Website design development company services in Mangalore

Forex Trading Teacher in India

Related Posts

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

ಚಿಕ್ಕಬಳ್ಳಾಪುರ: ವಿಶ್ವ ಪ್ರೇಮಿಗಳ ದಿನಾಚರಣೆಯ ಸಂಭ್ರಮದಲ್ಲಿ ನಂದಿಬೆಟ್ಟಕ್ಕೆ ಭೇಟಿ ನೀಡಲು ಯೋಜಿಸಿದ್ದ ಪ್ರವಾಸಿಗರಿಗೆ ಹಾಗೂ ಪ್ರೇಮಿಗಳಿಗೆ ಜಿಲ್ಲಾಡಳಿತ ನಿರಾಸೆ ಮೂಡಿಸಿದೆ.…

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.