Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮರೂರು ಗ್ರಾಮದಲ್ಲಿ ಕೃಷಿ ಕ್ಷೇತ್ರೋತ್ಸವ*
ಇತ್ತೀಚಿನ ಸುದ್ದಿಗಳು

*ಮರೂರು ಗ್ರಾಮದಲ್ಲಿ ಕೃಷಿ ಕ್ಷೇತ್ರೋತ್ಸವ*

December 20, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಡಿ.20 NEWS DESK  :  ಗೋಣಿಕೊಪ್ಪಲಿನ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಪ್ರಗತಿಪರ ಕೃಷಿಕ ಹೆಚ್.ಎಸ್.ಮಹೇಶ್ ಅವರ ತೋಟದಲ್ಲಿ ಕೃಷಿ ಕ್ಷೇತ್ರೋತ್ಸವ ನಡೆಯಿತು.  ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಡಾ.ವೀರೇಂದ್ರಕುಮಾರ್ ನೆರೆದಿದ್ದ ಕೃಷಿಕರಿಗೆ ಮಾಹಿತಿ ನೀಡಿದರು. 2013 ರಲ್ಲಿ ಪೆಪ್ಪರ್ ಗೆ ದೊರೆತ ಅತ್ಯಧಿಕ ದರಕ್ಕೆ ಮಾರು ಹೋದ ಬಹಳಷ್ಟು ಮಂದಿ ಕೃಷಿಕರು ಪೆಪ್ಪರ್ ಬೆಳೆಯತ್ತ ಮಾರುಹೋದರು. ಆದರೆ, ಪೆಪ್ಪರ್ ಬೆಳೆಯನ್ನು ಬೆಳೆಯುವ ವಿಧಾನಗಳನ್ನು ಅರಿಯದಾದ ಬಹಳಷ್ಟು ಮಂದಿ ಬೆಳೆಗಾರರು, ಪೆಪ್ಪರ್ ಗೆ ಬಾಧಿಸುವ ರೋಗಗಳನ್ನು ಹತೋಟಿ ಮಾಡಲಾಗದೇ ಬೆಳೆಯಿಂದ ವಿಮುಕ್ತರಾದರು. ಕುಶಾಲನಗರ ತಾಲ್ಲೂಕಿನಲ್ಲಿ ಪೆಪ್ಪರ್ ಬೆಳೆಗೆ ಸೂಕ್ತವಾದ ವಾತಾವರಣ ವಿದ್ದು ಬೆಳೆಗಾರರು ಮಿಶ್ರ ಮಾದರಿಯ ಪೆಪ್ಪರ್ ಗಿಡಗಳನ್ನು ಬೆಳೆಸುವಂತೆ ಸಲಹೆ ನೀಡಿದರು.  ಕೊಡಗು ಜಿಲ್ಲೆಯಲ್ಲಿ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪೆಪ್ಪರ್ ಬೆಳೆ ಕೈಗೊಳ್ಳಲಾಗಿದೆ. ಈ ಪೈಕಿ ಶೇ 80 ಭಾಗ ಪಣೀರ್ 1 ತಳಿಯದ್ದಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಹೊಸದಾಗಿ ಪೆಪ್ಪರ್ ಬೆಳೆಯತ್ತ ಆಸಕ್ತಿ ತೋರುವ ಕೃಷಿಕರು ತೇವಂ, ಶಕ್ತಿ, ಗಿರಿಮಂಡ ಸೇರಿದಂತೆ ಪಣೀರ್ 1 ರಿಂದ 9 ರವರೆಗಿನ ಹಲವು ತಳಿಯ ಗಿಡಗಳನ್ನು ಮಿಶ್ರವಾಗಿ ಪ್ರತೀ ವರ್ಷ ನಾಟಿ ಮಾಡುವಂತೆ ತಿಳಿಸಿದರು. ಕಟಾವಿಗೆ 15 ದಿನ ಮುನ್ನಾ ಹಾಗೂ ಕಟಾವಿನ ಬಳಿಕ 15 ಗಳ ವರೆಗೆ ಪೆಪ್ಪರ್ ಗಿಡಗಳಿಗೆ ನೀರು ಕಟ್ಟದಂತೆ ವಿಜ್ಞಾನಿಗಳು ಕರೆಕೊಟ್ಟರು.  ಕೃಷಿ ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ದೇವರಾಜು, ಕೃಷಿ ವಿಸ್ತರಣಾ ಘಟಕದ ಸಹಪ್ರಾಧ್ಯಾಪಕ ಡಾ.ಬಸವಲಿಂಗಯ್ಯ ರೈತರಿಗೆ ಮಾಹಿತಿ ನೀಡಿದರು. ಮರೂರಿನ ಪ್ರಗತಿಪರ ಕೃಷಿಕ ಹೆಚ್.ಎಸ್.ಮಹೇಶ್  ತಮ್ಮ ನಾಲ್ಕು ಎಕರೆ ಬರಡು ಭೂಮಿಗೆ ನೀರು ಹರಿಸಿ ನಿರಂತರ ಶ್ರಮದಿಂದಾಗಿ ಹತ್ತಾರು ಮಾದರಿಯ ಸಮಗ್ರ ಕೃಷಿಗಳನ್ನು ಕೈಗೊಳ್ಳುವ ಮೂಲಕ ಸುತ್ತಮುತ್ತಲಿನ ಕೃಷಿಕರಿಗೆ ಮಾದರಿಯಾಗಿದ್ದಾರೆ ಎಂದು ಕೃಷಿ ವಿಜ್ಞಾನಿ ವೀರೇಂದ್ರಕುಮಾರ್ ಇದೇ ಸಂದರ್ಭ ಶ್ಲಾಘಿಸಿದರು. ಮರೂರು ಗ್ರಾಮದ ಪ್ರಗತಿಪರ ಕೃಷಿಕ ಶತಾಯುಷಿ ಹೆಚ್.ಎಸ್.ಶಿವರುದ್ರಪ್ಪ, ಹೆಬ್ಬಾಲೆಯ ಕೃಷಿಕರಾದ ಹೆಚ್.ಹೆಚ್.ರಾಜಶೇಖರ್, ಶೇಷಪ್ಪ, ಮಣಜೂರು ಗ್ರಾಮದ ಗುರುಲಿಂಗಪ್ಪ, ಎಸ್.ಕೆ.ಗಿರೀಶ್, ಹೆಚ್.ಎಸ್.ಶಿವಣ್ಣ, ಪ್ರಸನ್ನ, ಆನಂದ್, ಭಿಕ್ಷೇಶ್, ಹೆಚ್.ಎಸ್.ರಾಜಶೇಖರ್, ಶಿಕ್ಷಕಿಯೂ ಆದ ರೈತ ಮಹಿಳೆ ಹೆಚ್.ಎಸ್.ಸುನೀತಾ ಮಹೇಶ್, ಮಹದೇವಿ, ಕೆ.ಸಿ.ನಂಜುಂಡಸ್ವಾಮಿ, ಹೆಚ್.ಎಂ.ಬಸವಣ್ಣ, ಹುಲುಸೆ ಕಪನಪ್ಪ, ಮಹೇಶ್, ಬಸವರಾಜು ಮೊದಲಾದವರಿದ್ದರು. ಇದೇ ಸಂದರ್ಭ ಕೃಷಿ ವಿಜ್ಞಾನಿಗಳು ಹಾಗೂ ರೈತರೊಡಗೂಡಿ ತೋಟದಲ್ಲಿ ಕೃಷಿಕ ಮಹೇಶ್ ಸಾಮೂಹಿಕ ಭೋಜನದ ವ್ಯವಸ್ಥೆ ಮಾಡಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸಿ.ಟಿ.ರವಿ ಬಂಧನಕ್ಕೆ ಖಂಡನೆ : ಕೊಡಗು ಬಿಜೆಪಿ ಪ್ರತಿಭಟನೆ*
Next Article *ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ದಸಂಸ ಸಂಚಾಲಕಿ ಗಾಯತ್ರಿ ನರಸಿಂಹ ಒತ್ತಾಯ*

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.