Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡವ ಮಕ್ಕಡ ಕೂಟದ 105ನೇ ಪುಸ್ತಕ ಚೆಪ್ಪುಡೀರ ಕಾರ್ಯಪ್ಪ ರಚಿತ “ಕೊಡಗಿನ ಕ್ರೀಡಾಪಟುಗಳ ಜೀವನ ಚರಿತ್ರೆ” ಬಿಡುಗಡೆ : ಸಾಧಕರ ಸಾಧನೆ ದಾಖಲೀಕರಣಗೊಂಡರೆ ಯುವ ಸಮೂಹಕ್ಕೆ ಸ್ಫೂರ್ತಿಯಾಗಿ ಉಳಿದುಕೊಳ್ಳಲಿದೆ : ನ್ಯಾಯಾಧೀಶ ಚೆಪ್ಪುಡೀರ ಎಂ.ಪೂಣಚ್ಚ ಅಭಿಮತ*
ಇತ್ತೀಚಿನ ಸುದ್ದಿಗಳು

*ಕೊಡವ ಮಕ್ಕಡ ಕೂಟದ 105ನೇ ಪುಸ್ತಕ ಚೆಪ್ಪುಡೀರ ಕಾರ್ಯಪ್ಪ ರಚಿತ “ಕೊಡಗಿನ ಕ್ರೀಡಾಪಟುಗಳ ಜೀವನ ಚರಿತ್ರೆ” ಬಿಡುಗಡೆ : ಸಾಧಕರ ಸಾಧನೆ ದಾಖಲೀಕರಣಗೊಂಡರೆ ಯುವ ಸಮೂಹಕ್ಕೆ ಸ್ಫೂರ್ತಿಯಾಗಿ ಉಳಿದುಕೊಳ್ಳಲಿದೆ : ನ್ಯಾಯಾಧೀಶ ಚೆಪ್ಪುಡೀರ ಎಂ.ಪೂಣಚ್ಚ ಅಭಿಮತ*

December 22, 20244 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಡಿ.22 : ಕ್ರೀಡೆ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿದ ಸಾಧಕರ ಸಾಧನೆ ಪುಸ್ತಕದ ರೂಪದಲ್ಲಿ ದಾಖಲೀಕರಣಗೊಂಡರೆ ಮುಂದಿನ ಯುವ ಪೀಳಿಗೆಗೆ ಅದು ಸ್ಫೂರ್ತಿಯಾಗಿ ಉಳಿದುಕೊಳ್ಳಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಚೆಪ್ಪುಡೀರ ಎಂ.ಪೂಣಚ್ಚ ಅಭಿಪ್ರಾಯಪಟ್ಟಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡವ ಮಕ್ಕಡ ಕೂಟದ 105ನೇ ಪುಸ್ತಕ, ಹಾಕಿ ಆಟಗಾರ, ಬರಹಗಾರ ಚೆಪ್ಪುಡೀರ ಎ.ಕಾರ್ಯಪ್ಪ ಅವರು ರಚಿಸಿರುವ “ಕೊಡಗಿನ ಕ್ರೀಡಾಪಟುಗಳ ಜೀವನ ಚರಿತ್ರೆ” ಬಿಡುಗಡೆ ಸಮಾರಂಭದವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕೆಗಳಲ್ಲಿ ಸಾಧಕರ ಸಾಧನೆ ಪ್ರಕಟಗೊಂಡರೆ ಇಂದು ಓದಿ ನಾಳೆ ಮರೆಯುತ್ತೇವೆ. ಆದರೆ ಪುಸ್ತಕದ ರೂಪದಲ್ಲಿ ಹೊರ ಬಂದರೆ ದಾಖಲೆಯ ರೂಪದಲ್ಲಿ ಸಾಧಕರ ನೆನಪು ಸದಾ ಇರುವುದಲ್ಲದೆ ಯುವ ಸಮೂಹದಲ್ಲಿ ಹೊಸ ಸ್ಫೂರ್ತಿಯನ್ನು ತುಂಬುತ್ತದೆ. ಕ್ರೀಡಾ ಜಿಲ್ಲೆ ಕೊಡಗು ಈಗ ಕೇವಲ ಕ್ರೀಡೆಗೆ ಮಾತ್ರ ಸೀಮಿತವಾಗಿಲ್ಲ, ಎಲ್ಲಾ ಕ್ಷೇತ್ರಗಳಲ್ಲು ಕೊಡಗಿನ ಸಾಧಕರು ಗುರುತಿಸಿಕೊಳ್ಳುತ್ತಿದ್ದಾರೆ. ಶಿಸ್ತಿಗೆ ಹೆಸರಾದ ಕೊಡಗಿನಿಂದ ಅನೇಕ ಕ್ರೀಡಾಪಟುಗಳು ರಾಜ್ಯ, ರಾಷ್ಟç ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಇದಕ್ಕೆ÷ಸತತ ಪರಿಶ್ರಮವೇ ಕಾರಣವಾಗಿದ್ದು, “ಕೊಡಗಿನ ಕ್ರೀಡಾಪಟುಗಳ ಜೀವನ ಚರಿತ್ರೆ” ಪುಸ್ತಕ ರಚನೆಗೂ ಚೆಪ್ಪುಡೀರ ಕಾರ್ಯಪ್ಪ ಅವರು ಶ್ರಮ ವಹಿಸಿದ್ದಾರೆ ಎಂದು ಶ್ಲಾಘಿಸಿದರು. ಈ ಪುಸ್ತಕ ಯುವ ಸಮೂಹಕ್ಕೆ ಸ್ಫೂರ್ತಿ ತುಂಬುವ ರೀತಿಯಲ್ಲಿದ್ದು, ಇದೊಂದು ದಾಖಲೆಯಾಗಿ ಉಳಿದುಕೊಳ್ಳಬೇಕು. ಗ್ರಾಮೀಣ ಪ್ರದೇಶದ ಓದುಗರಿಗೆ ಹೆಚ್ಚು ಹಂಚಿಕೆಯಾಗಬೇಕು. ಇಂದಿನ ಯುವ ಸಮೂಹ ಸಾಮಾಜಿಕ ಜಾಲತಾಣಕ್ಕೆ ಆಕರ್ಷಿತರಾಗಿರುವುದರಿಂದ ಪುಸ್ತಕದಲ್ಲಿರುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಗೊಂಡರೆ ಸಾಧಕರ ಪರಿಚಯ ಹೆಚ್ಚು ಜನರಿಗೆ ಆಗಲಿದೆ ಎಂದು ಚೆಪ್ಪುಡೀರ ಎಂ.ಪೂಣಚ್ಚ ಅಭಿಪ್ರಾಯಪಟ್ಟರು.
ಕೊಡಗಿನ ಸಂಸ್ಕೃತಿ, ಆಚಾರ, ವಿಚಾರಗಳ ಬೆಳವಣಿಗೆಗಾಗಿ ಶ್ರಮಿಸುತ್ತಿರುವ ಕೊಡವ ಮಕ್ಕಡ ಕೂಟ ಸಂಘಟನೆ ಸಾಹಿತ್ಯ ಕ್ಷೇತ್ರಕ್ಕೂ ಕೊಡುಗೆ ನೀಡುತ್ತಿದೆ. ದಾಖಲೆಯ 105 ಪುಸ್ತಕಗಳನ್ನು ಪ್ರಕಟಿಸಿರುವುದು ಹೆಮ್ಮೆಯ ವಿಚಾರವೆಂದು ಮೆಚ್ಚುಗೆ ವ್ಯಕ್ತಪಡಿಸಿದರು. “ಕೊಡಗಿನ ಕ್ರೀಡಾಪಟುಗಳ ಜೀವನ ಚರಿತ್ರೆ” ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರು ಹಾಕಿ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಉತ್ತರ ಭಾರತದವರಿಗೆ ಮಾತ್ರ ಅವಕಾಶ ದೊರೆಯುತ್ತಿದ್ದ ಕಾಲದಲ್ಲೇ ಅದನ್ನು ಮೆಟ್ಟಿನಿಂತು ರಾಷ್ಟ್ರೀಯ ತಂಡದಲ್ಲಿ ಕೊಡಗಿನವರು ಅವಕಾಶ ಪಡೆದುಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ. ಕೊಡಗಿನಲ್ಲಿರುವ ಎಲ್ಲರೂ ಒಗ್ಗಟ್ಟಾಗಿ ಹಾಕಿ ಕ್ರೀಡಾಕೂಟವನ್ನು ನಿರಂತರವಾಗಿ ನಡೆಸಿಕೊಂಡು ಹೋಗುವ ಮೂಲಕ ಉತ್ತಮ ಕ್ರೀಡಾಪಟುಗಳ ಆಯ್ಕೆಗೆ ಕಾರಣವಾಗಬೇಕು. ಕೊಡವ ಕೌಟುಂಬಿಕ ಹಾಕಿ ಹಬ್ಬ ಲಿಮ್ಕಾ ಮತ್ತು ಗಿನ್ನಿಸ್ ದಾಖಲೆಯ ಅರ್ಹತೆಯನ್ನು ಪಡೆದುಕೊಂಡಿದೆ. ದೊಡ್ಡ ಮಟ್ಟದ ಈ ಹಾಕಿ ಹಬ್ಬ ಪ್ರತಿವರ್ಷ ಒಂದೇ ಸ್ಥಳದಲ್ಲಿ ನಡೆಯುವಂತ್ತಾಗಬೇಕು, ಇದಕ್ಕಾಗಿ ಶಾಶ್ವತ ಮೈದಾನದ ವ್ಯವಸ್ಥೆಯಾಗಬೇಕು ಎಂದು ತಿಳಿಸಿದರು.
“ಕೊಡಗಿನ ಕ್ರೀಡಾಪಟುಗಳ ಜೀವನ ಚರಿತ್ರೆ” ಪುಸ್ತಕದ ಬರಹಗಾರ ಚೆಪ್ಪುಡೀರ ಎ.ಕಾರ್ಯಪ್ಪ ಮಾತನಾಡಿ ಹಾಕಿ ಕ್ರೀಡೆಯ ಸ್ಫೂರ್ತಿ ಕೊಡಗಿನ ಮಕ್ಕಳ ರಕ್ತದಲ್ಲಿ ಶೇ.70 ರಷ್ಟಿದೆ. ಉಳಿದ ಶೇ.30ರಷ್ಟು ಪ್ರೋತ್ಸಾಹ ಪೋಷಕರಿಂದ ಸಿಗಬೇಕಾಗಿದೆ ಎಂದರು. ಕ್ರೀಡಾ ಸಾಧಕರ ಸಾಧನೆಯನ್ನು ಕೊಡಗಿನ ಚರಿತ್ರೆ ಮರೆಯಬಾರದು ಎನ್ನುವ ಕಾರಣಕ್ಕಾಗಿ ಪುಸ್ತಕವನ್ನು ಬರೆದಿದ್ದೇನೆ. ಜಿಲ್ಲೆಯ ಶಾಲಾ ಕಾಲೇಜುಗಳು ಮತ್ತು ಗ್ರಂಥಾಲಯಗಳಿಗೆ ಪುಸ್ತಕವನ್ನು ಉಚಿತವಾಗಿ ನೀಡಲಾಗುತ್ತಿದೆ. ಮಕ್ಕಳು ಈ ಪುಸ್ತಕವನ್ನು ಹೆಚ್ಚು ಓದಬೇಕು, ಸಾಧಕರ ಆದರ್ಶಗಳನ್ನು ಅಳವಡಿಸಿಕೊಂಡು ಕ್ರೀಡಾ ಸಾಧನೆ ಮಾಡಬೇಕು ಎನ್ನುವುದು ನಮ್ಮ ಉದ್ದೇಶ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಅನೇಕ ಸಂಶೋಧಕರು ಗ್ರಂಥಗಳನ್ನು ಉಲ್ಲೇಖ ಮಾಡಿಯೇ ಸಂಶೋಧನೆಗಳನ್ನು ಮಾಡಿದ್ದಾರೆ. ದಾಖಲೀಕರಣದಿಂದ ಮಾತ್ರ ಸಾಧಕರ ಸಾಧನೆ ನೆನಪಿನಲ್ಲಿ ಉಳಿಯಲು ಸಾಧ್ಯವೆಂದರು. ಎಲ್ಲಾ ಕ್ರೀಡಾ ಸಾಧಕರ ಮಾಹಿತಿಯನ್ನು ಸಂಗ್ರಹಿಸಿ ಪುಸ್ತಕದ ರೂಪದಲ್ಲಿ ಹೊರ ತಂದಿರುವುದು ದೊಡ್ಡ ಸಾಧನೆಯೇ ಆಗಿದೆ. ನೈಜತೆಯನ್ನು ಹೊಂದಿರುವ ಈ ಪುಸ್ತಕ ಸಂಗ್ರಹಕ್ಕೆ ಯೋಗ್ಯವಾಗಿದ್ದು, ಶಾಲಾ ಕಾಲೇಜುಗಳಿಗೆ ಉಚಿತವಾಗಿ ನೀಡುತ್ತಿರುವುದು ಶ್ಲಾಘನೀಯವೆಂದು ತಿಳಿಸಿದರು. ಮತ್ತೊಬ್ಬ ಅತಿಥಿ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡAಡ ಕೆ.ಬೋಪಣ್ಣ ಮಾತನಾಡಿ ಕೊಡಗಿನಲ್ಲಿ ಹಾಕಿ ಕ್ರೀಡೆಯನ್ನು ಮತ್ತಷ್ಟು ಬೆಳೆಸಬೇಕು. “ಕೊಡಗಿನ ಕ್ರೀಡಾಪಟುಗಳ ಜೀವನ ಚರಿತ್ರೆ” ಪುಸ್ತಕ ಮುಂದಿನ ಪೀಳಿಗೆಗೆ ಸ್ಫೂರ್ತಿದಾಯಕವಾಗಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಕೊಡಗು ಸಣ್ಣ ಜಿಲ್ಲೆಯಾದರೂ ಕ್ರೀಡೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ದೊಡ್ಡ ಮಟ್ಟದ ಸಾಧನೆ ಮಾಡಿದ್ದಾರೆ. ಮತ್ತಷ್ಟು ಸಾಧಕರು ಬರಬೇಕಾಗಿದೆ, ಯುವ ಸಮೂಹ ಹಾದಿ ತಪ್ಪಬಾರದು. ಹಿಂದೆ ಅವಕಾಶದ ಕೊರತೆ ಇತ್ತು, ಆದರೆ ಇಂದು ಎಲ್ಲಾ ಅವಕಾಶಗಳೊಂದಿಗೆ ಪೋಷಕರ ಪ್ರೋತ್ಸಾಹವೂ ಸಿಗುತ್ತಿದೆ. ಇದನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಸೇನೆ ಮತ್ತು ಕ್ರೀಡಾ ಕ್ಷೇತ್ರಕ್ಕೆ ಸೇರುತ್ತಿರುವ ಯುವ ಸಮೂಹದ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಕೊಡವ ಮಕ್ಕಡ ಕೂಟ ಸಂಘಟನೆ ಇನ್ನು ಮುಂದೆಯೂ ಸಾಹಿತ್ಯದ ಬೆಳವಣಿಗೆಗೆ ಪ್ರೋತ್ಸಾಹ ನೀಡಲಿದೆ ಎಂದರು. “ಕೊಡಗಿನ ಕ್ರೀಡಾಪಟುಗಳ ಜೀವನ ಚರಿತ್ರೆ” ಪುಸ್ತಕದ 1500 ಪ್ರತಿಗಳನ್ನು ಹೊರ ತರಲಾಗಿದ್ದು, 613 ಶಾಲೆಗಳಿಗೆ, 67 ಪದವಿ ಪೂರ್ವ ಕಾಲೇಜುಗಳಿಗೆ, 26 ಪದವಿ ಕಾಲೇಜುಗಳಿಗೆ, 102 ಗ್ರಾ.ಪಂ ಗಳಿಗೆ, 5 ತಾ.ಪಂ ಮತ್ತು 1 ಜಿ.ಪಂ ಗೆ ಉಚಿತವಾಗಿ ಹಂಚಿಕೆ ಮಾಡಲಾಗುತ್ತಿದೆ ಎಂದು ಬೊಳ್ಳಜಿರ ಅಯ್ಯಪ್ಪ ತಿಳಿಸಿದರು. ಕ್ರೀಡಾಪಟು ಬಾಳೆಯಡ ಕಾಳಪ್ಪ ಹಾಗೂ ಲೆ.ಕ.ಬಾಳೆಯಡ ಸುಬ್ರಮಣಿ ಮಾತನಾಡಿದರು.
ವಿವಿಧ ಶಾಲೆಗಳಿಗೆ ವಿತರಣೆ ಮಾಡಲು ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಗುರುರಾಜ್ ಕೆ.ಪಿ ಹಾಗೂ ಮದೆ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ ಅವರಿಗೆ ಇದೇ ಸಂದರ್ಭ ಪುಸ್ತಕಗಳನ್ನು ವಿತರಿಸಲಾಯಿತು. 1975ರ ವಿಶ್ವಕಪ್ ಹಾಕಿ ಪಂದ್ಯಾವಳಿಯ ವಿಜೇತ, ಹಿರಿಯ ಕ್ರೀಡಾಪಟು ಪೈಕೇರ ಇ.ಕಾಳಯ್ಯ ಉಪಸ್ಥಿತರಿದ್ದರು. ಚೀಯಕ್ ಪೂವಂಡ ಶ್ವೇತನ್ ಚಂಗಪ್ಪ ಅವರು ಬರಹಗಾರ ಚೆಪ್ಪುಡೀರ ಎ.ಕಾರ್ಯಪ್ಪ ಅವರ ಪರಿಚಯ ಮಾಡಿದರು. ಚೋಕಿರ ಅನಿತಾ ನಿರೂಪಿಸಿ, ತೆನ್ನೀರ ಟೀನಾ ಚಂಗಪ್ಪ ಪ್ರಾರ್ಥಿಸಿ, ಐಚಂಡ ರಶ್ಮಿ ಮೇದಪ್ಪ ಸ್ವಾಗತಿಸಿ, ಪೇರಿಯಂಡ ಯಶೋಧ ವಂದಿಸಿದರು. ::: ಯುವ ಆಟಗಾರರಿಗೆ ಸ್ಫೂರ್ತಿ ::: ಕ್ರೀಡಾಪಟು ಹಾಗೂ ಬರಹಗಾರ ಚೆಪ್ಪುಡೀರ ಎ.ಕಾರ್ಯಪ್ಪ ಅವರು ತೀರ್ಪುಗಾರರಾಗಿ, ವೀಕ್ಷಕ ವಿವರಣೆಗಾರರಾಗಿ ಕಾರ್ಯನಿರ್ವಹಿಸಿದ್ದು, ಯುವ ಆಟಗಾರರಿಗೆ ಸ್ಫೂರ್ತಿ ತುಂಬುವ ಸಲುವಾಗಿ ರಾಷ್ಟಿçÃಯ ಕ್ರೀಡೆ ಮತ್ತು ಒಲಂಪಿಕ್ಸ್ ನಲ್ಲಿ ಪದಕ ಗೆದ್ದ ಆಟಗಾರರ ಜೀವನ ಚರಿತ್ರೆಯನ್ನು ಪುಸ್ತಕದ ರೂಪದಲ್ಲಿ ಹೊರತಂದಿದ್ದಾರೆ. ತೆರೆಮರೆಯ ಪ್ರತಿಭೆಗಳನ್ನು ಪರಿಚಯಿಸಿದ್ದಾರೆ, ಅಲ್ಲದೇ ಕಷ್ಟಪಟ್ಟು ಸಾಧನೆ ಮಾಡಿದ ಮಹಾನ್ ಹಾಕಿ ಆಟಗಾರರ ಪರಿಚಯವನ್ನು ಕೂಡ ನೀಡಿದ್ದಾರೆ. ಈ ಪುಸ್ತಕದಲ್ಲಿ ಹಾಕಿ ಮಾತ್ರವಲ್ಲದೇ ಕುದುರೆ ಸವಾರಿ, ಕ್ರಿಕೆಟ್, ಕರಾಟೆ, ವಾಲಿಬಾಲ್, ಅಥ್ಲೆಟಿಕ್ಸ್, ಬಾಕ್ಸಿಂಗ್, ಗಾಲ್ಫ್ ಹಾಗೂ ಬ್ಯಾಡ್ಮಿಂಟನ್ ಆಟಗಾರರ ಜೀವನ ಚರಿತ್ರೆಯನ್ನು ಕೂಡ ವಿವರಿಸಲಾಗಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರ ರೋಟರಿಗೆ ರಾಜ್ಯಪಾಲ ವಿಕ್ರಂ ದತ್ತ ಭೇಟಿ : ಉತ್ತಮ ಉದ್ದೇಶದ ಗುರಿಯೊಂದಿಗೆ ಕಾರ್ಯಯೋಜನೆ ರೂಪಿಸಲು ಕರೆ*
Next Article *ರಾಮಾಯಣ ಮತ್ತು ಮಹಾಭಾರತ ಅರೇಬಿಕ್ ಭಾಷೆಗೆ ಅನುವಾದ : ಲೇಖಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.