Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗರಹಳ್ಳಿ ನಾಡು ಪ್ರೌಢಶಾಲೆಯ ವಾರ್ಷಿಕೋತ್ಸವ : ಪೋಷಕರು ಮಕ್ಕಳ ಉನ್ನತ ಶಿಕ್ಷಣಕ್ಕೆ ಒತ್ತು ನೀಡಿ : ಹರಪಳ್ಳಿ ರವೀಂದ್ರ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗರಹಳ್ಳಿ ನಾಡು ಪ್ರೌಢಶಾಲೆಯ ವಾರ್ಷಿಕೋತ್ಸವ : ಪೋಷಕರು ಮಕ್ಕಳ ಉನ್ನತ ಶಿಕ್ಷಣಕ್ಕೆ ಒತ್ತು ನೀಡಿ : ಹರಪಳ್ಳಿ ರವೀಂದ್ರ ಕರೆ*

ಡಿಸೆಂಬರ್ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಡಿ.23 NEWS DESK : ವಿದ್ಯಾರ್ಥಿಗಳಿಗೆ ಮುಂದಿನ ಗುರಿ, ಏಕಾಗ್ರತೆ ಸಾಧಿಸುವ ಛಲ, ವಿದ್ಯಾರ್ಜನೆಯಲ್ಲಿ ಪರಿಶ್ರಮ ಮುಖ್ಯವಾಗಿದೆ. ಪೋಷಕರು ಮಕ್ಕಳ ವಿದ್ಯಾರ್ಜನೆಗೆ ಒತ್ತು ನೀಡಬೇಕು ಎಂದು ದಾನಿಗಳೂ ಹಾಗೂ ಬೆಂಗಳೂರಿನ ಪುರವಂಕರ ಕಾರ್ಯನಿರ್ವಾಹಕ ಉಪಾಧ್ಯಕ್ಷ ಹರಪಳ್ಳಿ ರವೀಂದ್ರ ಕರೆ ನೀಡಿದರು. ಸುಂಟಿಕೊಪ್ಪ ನಾಡು ಪ್ರೌಢಶಾಲೆ ಕೊಡಗರಹಳ್ಳಿ ಶಾಲೆಯ 59ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯವಿದೆ. ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳೂ ಮುಂದಿದ್ದಾರೆ. ಆದರೆ ಶಾಲಾ ಮಕ್ಕಳು ಚಲನಚಿತ್ರ ನಟ, ನಟಿಯರನ್ನು ವೈಭವಿಕರೀಸುವ ಮನೋಭಾವ ತ್ಯಜಿಸಬೇಕು. ಸಮಾಜ ಪರಿವರ್ತಕರಾದ ಸ್ವಾಮಿವಿ ವೇಕಾನಂದ, ಗಾಂಧೀಜಿ, ಲಾಲ್ ಬಹುದ್ದೂರ್ ಶಾಸ್ತ್ರಿ, ಸುಭಾಷ್ ಚಂದ್ರಭೋಸ್, ಮಾಜಿ ರಾಷ್ಟ್ರಪತಿ ಅಬ್ಧುಲ್ ಕಲಾಂ ಅವರನ್ನು ಆದರ್ಶವಾಗಿ ತೆಗೆದುಕೊಂಡರೆ ಮುಂದಿನ ಭವಿಷ್ಯದಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಲ್ಲರು ಎಂದು ಅಭಿಮತ ವ್ಯಕ್ತಪಡಿಸಿದರು. ಅಭಿವೃದ್ಧಿ ಪಥದತ್ತ ಸಾಗಿದ ರಷ್ಯಾ, ಚೀನಾ, ಜಪಾನ್ ರಾಷ್ಟ್ರದ ಅಧಿಕಾರ ಚುಕ್ಕಾಣಿ ಹಿಡಿದ ನಾಯಕರುಗಳಿಗೆ ಇಂಗ್ಲೀಷ್ ಬರದಿದ್ದರೂ ಅವರು ದೇಶವನ್ನು ಅಭಿವೃದ್ಧಿ ಮುಂಚೂಣಿಗೆ ತಂದಿದ್ದನ್ನು ನೆನಪಿಸಿದ ರವೀಂದ್ರ, ಭಾಷೆಯಾಗಿ ಇಂಗ್ಲೀಷ್‍ನ್ನು ಕಲಿಯಿರಿ. ಆದರೆ ಕನ್ನಡಭಾಷೆ ಜ್ಞಾನ ಸಂಸ್ಕೃತಿಯನ್ನು ಕಲಿಸುತ್ತದೆ. ದೇಶವನ್ನು ಆಳಿದ ಶಾಸಕರು, ಸಚಿವರು ವೇದಿಕೆಯಲ್ಲಿ ನುಡಿದ ಶೇ.1 ರಷ್ಟು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿರುವುದು ವಿಷಾದನೀಯ ಎಂದು ಅವರು ಹೇಳಿದರು. ಕಾಫಿ ಬೆಳೆಗಾರರೂ, ಸಮಾಜ ಸೇವಕರಾದ ಟಿ.ಕೆ.ಸಾಯಿಕುಮಾರ್ ಮಾತನಾಡಿ, ಈ ಶಾಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು, ಶಿಕ್ಷಕರುಗಳ ಪರಿಶ್ರಮವನ್ನು ಮರೆಯುವಂತಿಲ್ಲ, ಕನ್ನಡ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬರೆದರೆ ತೇರ್ಗೆಡೆಯಾಗುವುದಿಲ್ಲ ಎಂಬುದು ತಪ್ಪು ಭಾವನೆ ಸರಿಯಲ್ಲ. ಸತತ ಪರಿಶ್ರಮ, ಶ್ರದ್ಧೆಯಿಂದ ಮಕ್ಕಳು ಜಿವನದಲ್ಲಿ ಸಾಧಿಸಬಹುದು 2025 ನೇ ಇಸವಿಯಲ್ಲಿ ಈ ಶಾಲೆಯ ವಿದ್ಯಾರ್ಥಿಗಳಿಗೆ 1 ಜತೆ ಸಮವಸ್ತ್ರವನ್ನು ತಾನು ಉದಾರವಾಗಿ ನೀಡುವುದಾಗಿ ಭರವಸೆ ನೀಡಿದರು. ಮಕ್ಕಳು ಮೊಬೈಲ್‍ನಿಂದ ದೂರವಿರಬೇಕು. ಓದು ಮುಖ್ಯವಾಗಿ ಪರಿಗಣಿಸಲು ಪೋಷಕರು ಮಕ್ಕಳ ಬಗ್ಗೆ ಸದಾ ನಿಗಾವಹಿಸಬೇಕು ಎಂದು ಹೇಳಿದರು. ಕೊಡಗರಹಳ್ಳಿ ನಾಡು ಪ್ರೌಢಶಾಲೆಯ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್ ಮಾತನಾಡಿ, ಶಾಲಾ ಕಟ್ಟಡ ಅಭಿವೃದ್ಧಿಗೆ 58 ಲಕ್ಷ ಬೇಕಾಗಿದ್ದು, ಸರಕಾರದಿಂದ ಅನುದಾನ ಲಭಿಸುತ್ತಿಲ್ಲ. 25 ಕ್ಕಿಂತ ಕಡಿಮೆ ಸಂಖ್ಯೆ ಇರುವ ಅನುದಾನಿತ ಪ್ರೌಢಶಾಲೆಯನ್ನು ಮುಚ್ಚಿಸಲು ಸರಕಾರ ಆದೇಶ ನೀಡಿದೆ. ಸರಕಾರದಿಂದ ಅನುದಾನ ಒದಗಿಸಲು ಮುಂದಾಗಬೇಕು. 60 ವರ್ಷದಿಂದ ನಡೆಸಿಕೊಂಡ ಶಾಲೆ ಅಭಿವೃದ್ಧಿಗೆ ದಾನಿಗಳು ಸಹಕಾರ ಒದಗಿಸಬೇಕೆಂದರು. ಕೃಷಿಕ ಈ ಶಾಲೆಯ ಹಳೆಯ ವಿದ್ಯಾರ್ಥಿ ಅಜರಂಗಳ ಎಸ್.ರಾಮಣ್ಣ ಮಾತನಾಡಿ ಶಾಲಾ ಮಕ್ಕಳಿಗೆ ಕ್ರೀಡಾಕೂಟಕ್ಕೆ ಬೇಕಾದ ಕ್ರಿಡಾ ಸಾಮಾಗ್ರಿಗಳನ್ನು ಒದಗಿಸುವ ಬಗ್ಗೆ ಭರವಸೆ ನೀಡಿದರು. ಕೊಡಗರಹಳ್ಳಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಎಸ್.ಬಿ.ಶಂಕರ್, ಜಿ.ಪಂ ಸೋಮವಾರಪೇಟೆಯ ಅಭಿಯಂತರ ಕೊಲಿಂಗನ ಹೆಚ್.ಕೀರ್ತನ್, ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಡುವಂಡ ಎಸ್.ಚಂಗಪ್ಪ, ಬಿಬಿಎಂಪಿ ಹಿರಿಯ ಆರೋಗ್ಯ ಪರಿವೀಕ್ಷಕರಾದ ಕೆ.ಬಿ.ಸಂಧ್ಯಾ, ಸಂಸ್ಥೆಯ ಉಪಾಧ್ಯಕ್ಷರಾದ ಕುಟ್ಟಪ್ಪ, ಸದಸ್ಯರುಗಳಾದ ಲಕ್ಷ್ಮೀ ನಾರಾಯಣ, ನಿರ್ದೇಶಕ ಸುರೇಶ್ ಚಂಗಪ್ಪ, ತಾ.ಪಂ.ಮಾಜಿ ಅಧ್ಯಕ್ಷೆ ಗೀತಾ ಬಸಪ್ಪ, ಪೆಲಿಕ್ಸ್ ಪಿಂಟೋ ಉಪಸ್ಥಿತರಿದ್ದರು. ಕಾರ್ಯಕ್ರಮದ ಮೊದಲಿಗೆ ಶಾಲಾ ಮಕ್ಕಳು ಗೌರವ ವಂದನೆಯನ್ನು ಅತಿಥಿಗಳಿಗೆ ನೀಡಿದರು. ಅರ್ಚನಾ ತಂಡ ಪ್ರಾರ್ಥಿಸಿದರು, ಶಿಕ್ಷಕ ಗುರ್ಕಿಬ ನಿರೂಪಿಸಿದರು, ಶಾಲೆಯ ಮುಖ್ಯೋಪಾಧ್ಯಾಯಿನಿ ಕೆ.ಎಸ್.ಇಂದಿರಾ ವರದಿ ವಾಚಿಸಿ, ಸ್ವಾಗತಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.