
ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ 7 ದಿನಗಳ ಕಾಲ ಶೋಕಾಚರಣೆ ಇರುವುದರಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಕಾರದಲ್ಲಿ ಹಾಗೂ ಕೊಡಗು ಗೌಡ ವಿದ್ಯಾ ಸಂಘ ವತಿಯಿಂದ ಇದೇ ಡಿ.29 ರಂದು ನಡೆಯಬೇಕಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮವು ಜನವರಿ 12 ಕ್ಕೆ ಮುಂದೂಡಲಾಗಿದೆ ಎಂದು ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ತಿಳಿಸಿದ್ದಾರೆ.









