Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರದಲ್ಲಿ ಕುವೆಂಪು ಸಂಸ್ಮರಣೆ ಕಾರ್ಯಕ್ರಮ : ವಿದ್ಯಾರ್ಥಿಗಳು ಕುವೆಂಪು ಸಾಹಿತ್ಯ ಅರಿತುಕೊಳ್ಳಿ : ಸಾಹಿತಿ ಭಾರಧ್ವಜ್ ಆನಂದ ತೀರ್ಥ ಕರೆ*
ಇತ್ತೀಚಿನ ಸುದ್ದಿಗಳು

*ಕುಶಾಲನಗರದಲ್ಲಿ ಕುವೆಂಪು ಸಂಸ್ಮರಣೆ ಕಾರ್ಯಕ್ರಮ : ವಿದ್ಯಾರ್ಥಿಗಳು ಕುವೆಂಪು ಸಾಹಿತ್ಯ ಅರಿತುಕೊಳ್ಳಿ : ಸಾಹಿತಿ ಭಾರಧ್ವಜ್ ಆನಂದ ತೀರ್ಥ ಕರೆ*

December 31, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಡಿ.31 NEWS DESK  : ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸುವ ಮೂಲಕ ನಾಡಿನಲ್ಲಿ ವೈಚಾರಿಕತೆಯನ್ನು ಭಿತ್ತಿದ ಸಾಹಿತ್ಯದ ಮೇರು ಪರ್ವತ ಕುವೆಂಪು ಎಂದು ಕೊಡಗಿನ ಹಿರಿಯ ಸಾಹಿತಿ ಕಣಿವೆ ಭಾರಧ್ವಜ್ ಆನಂದ ತೀರ್ಥ ಪ್ರತಿಪಾದಿಸಿದರು. ಕುಶಾಲನಗರದ ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಸ್ಥಳೀಯ ಕನ್ನಡ ಭಾರತಿ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕುವೆಂಪು ಸಂಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾತಿ, ಮತ, ಪಂಥಗಳನ್ನು ಮೆಟ್ಟಿನಿಂತು ಸಂಘರ್ಷಗಳನ್ನು ಎದುರಿಸಿ ಮಾನವತೆಯ ಮೇರು ಗಿರಿಯಾದ ಕುವೆಂಪು ಪರಿಸರವನ್ನೇ ದೇವರೆಂದರು.
ಪರಿಸರವನ್ನು ಆಹ್ಲಾದಿಸಿ ಆಸ್ವಾದಿಸಿದ ರಸ ಕವಿ ತಮ್ಮ ಬಹುಪಾಲು ಕಥೆ, ಕವನ, ಕಾದಂಬರಿ, ನಾಟಕ ಮೊದಲಾದ ಮಹಾಗ್ರಂಥಗಳನ್ನು ಬರೆದು ನಾಡಿನ ಸಾಹಿತ್ಯವನ್ನು ಶ್ರೀಮಂತ ಗೊಳಿಸಿದರು. ಆದ್ದರಿಂದ ಇಂದಿನ ವಿದ್ಯಾರ್ಥಿ ಸಮೂಹ ಕನ್ನಡ ನಾಡಿಗೆ ರಸ ಋಷಿ ಕುವೆಂಪು ಕೊಟ್ಟಿರುವ ಸಾಹಿತ್ಯವನ್ನು ಉಳಿಸಿಕೊಂಡು ಹೋದರೆ ಅದು ಆ ವಿಶ್ವಮಾನವನಿಗೆ ಕೊಡುವ ಗೌರವವಾಗಲಿದೆ ಎಂದರು. ಕುವೆಂಪು ವಿಚಾರಧಾರೆಗಳ ಕುರಿತು ಮಾತನಾಡಿದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ನಾಗೇಂದ್ರಸ್ವಾಮಿ, ಅಖಂಡ ಕರ್ನಾಟಕದ ನಿರ್ಮಾಣಕ್ಕೆ ಕವಿಗಳು, ಸಾಹಿತಿಗಳು, ಋಷಿ ಮುನಿಗಳ ಕೊಡುಗೆಯನ್ನು ಬಣ್ಣಿಸಿದ್ದ ಕುವೆಂಪು, ಬೂಟಾಟಿಕೆಯ ರಾಜಕಾರಣವನ್ನು ಹರಿತವಾದ ಲೇಖನಿಯಲ್ಲಿ ಪ್ರಬಲವಾಗಿ ವಿರೋಧಿಸಿದ್ದರು. ಕನ್ನಡ ನಾಡು – ನುಡಿ, ಭಾಷೆ, ಸಂಸ್ಕೃತಿಗೆ ಜೀವ ಸವೆಸುವ ಮೂಲಕ ಸಾಹಿತ್ಯ ಲೋಕದಲ್ಲಿ ಸತ್ಯ -ಶಾಂತಿ, ಸಮಾನತೆಯೆಂಬ ಆರದ ಜ್ಯೋತಿಯನ್ನು ಹಚ್ಚಿದ ಮರೆಯಲಾಗದ ಮಾಣಿಕ್ಯ ಎಂದು ಬಣ್ಣಿಸಿದರು. ಇಂದಿನ ವಿದ್ಯಾರ್ಥಿಗಳು ಹಾಗೂ ಯುವ ಸಮೂಹ ಮಾರಕವಾದ ಮೊಬೈಲ್ ಅನ್ನು ದೂರವಿಟ್ಟು ಕುವೆಂಪು ಸಾಹಿತ್ಯವನ್ನು ಓದಲು ಡಾ.ನಾಗೇಂದ್ರ ಸ್ವಾಮಿ ಕರೆಕೊಟ್ಟರು. ರಾಷ್ಟ್ರ ಕವಿ ಕುವೆಂಪು ಕುರಿತಾದ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಕನ್ನಡ ಭಾರತಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಸ್ಪಂದನ, ಕುವೆಂಪು ಕುರಿತು ಮಾತನಾಡಿದರಲ್ಲದೇ ಕುವೆಂಪು ವಿರಚಿತ ಕಾನೂರು ಸುಬ್ಬಮ್ಮ ಹೆಗ್ಗಡತಿ ಹಾಗೂ ಮಲೆಗಳಲ್ಲಿ ಮದು ಮಗಳು ಎಂಬ ಮೇರು ಗ್ರಂಥಗಳನ್ನು ಓದಬೇಕೆಂದು ವಿದ್ಯಾರ್ಥಿಗಳಿಗೆ ಕರೆನೀಡಿದರು. ಕನ್ನಡ ಭಾರತಿ ಪದವಿ ಕಾಲೇಜಿನ ಪ್ರಾಂಶುಪಾಲ ಕೆ.ಎಸ್.ರುದ್ರಪ್ಪ ಅಧ್ಯಕ್ಷತೆ ವಹಿಸಿ ಮಾತಮಾಡಿದರು. ಇದೇ ಸಂದರ್ಭ ಸಾಹಿತಿ ಭಾರಧ್ವಜ್ ಆನಂದ ತೀರ್ಥರನ್ನು ವೇದಿಕೆ ವತಿಯಿಂದ ಗೌರವಿಸಲಾಯಿತು. ಸಾಹಿತ್ಯಾಸಕ್ತರ ವೇದಿಕೆಯ ಸಂಚಾಲಕ ಕೆ.ಎಸ್.ಮೂರ್ತಿ ಪ್ರಾಸ್ತಾವಿಕ ನುಡಿಗಳಾಡಿದರು. ಪುರಸಭೆಯ ಆರೋಗ್ಯಾಧಿಕಾರಿ ಉದಯಕುಮಾರ್, ಕಾಲೇಜಿನ ಉಪನ್ಯಾಸಕ ಕೆ.ರಾಮಚಂದ್ರ, ಮಂಜುನಾಥ್ ಇದ್ದರು. ವಿದ್ಯಾರ್ಥಿಗಳಾದ ಅಮೃಯ ಸ್ವಾಗತಿಸಿದರೆ, ವಿಸ್ಮಿತಾ ನಿರೂಪಿಸಿದರು. ಅಂಜಲಿ ತಂಡ ಪ್ರಾರ್ಥಿಸಿತು. ಪ್ರಜ್ವಲ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕ್ರೈಸ್ತ ಧರ್ಮದ ಅವಹೇಳನ : ನಾಪೋಕ್ಲುವಿನಲ್ಲಿ ಪ್ರತಿಭಟನೆ*
Next Article *ಕಸ್ತೂರಿ ರಂಗನ್ ವರದಿ : ರಾಜ್ಯದ ನಿರ್ಧಾರವನ್ನು ಕೇಂದ್ರ ಸರ್ಕಾರ ಪುರಸ್ಕರಿಸಲು ಮನವಿ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.