Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುವೆಂಪು ರಚಿತ ನಾಡಗೀತೆ ಆಶಯಕ್ಕೆ ನೂರು ವರ್ಷ : ಮಡಿಕೇರಿಯಲ್ಲಿ ಗಮನ ಸೆಳೆದ ಸಹಸ್ರ ಕಂಠ ಗಾಯನ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ಕುವೆಂಪು ರಚಿತ ನಾಡಗೀತೆ ಆಶಯಕ್ಕೆ ನೂರು ವರ್ಷ : ಮಡಿಕೇರಿಯಲ್ಲಿ ಗಮನ ಸೆಳೆದ ಸಹಸ್ರ ಕಂಠ ಗಾಯನ ಕಾರ್ಯಕ್ರಮ*

January 4, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link


ಮಡಿಕೇರಿ ಜ.4 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆ ಇವರ ಸಹಯೋಗದಲ್ಲಿ ಕುವೆಂಪು ರಚಿಸಿರುವ ‘ನಾಡಗೀತೆಗೆ ನೂರು ವರ್ಷ’ ಸಹಸ್ರ ಕಂಠ ಗಾಯನ ಕಾರ್ಯಕ್ರಮವು ನಡೆಯಿತು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನೋತ್ಸವ ಹಾಗೂ ಕುವೆಂಪು ರಚಿತ ನಾಡಗೀತೆ ಆಶಯಕ್ಕೆ ನೂರು ವರ್ಷ ಪ್ರಯುಕ್ತ ನಾಡಗೀತೆ ಸಹಸ್ರ ಕಂಠ ಗಾಯನ ಕಾರ್ಯಕ್ರಮ ಜರುಗಿತು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ನಾಡು ಕಂಡ ಶ್ರೇಷ್ಠ ಕವಿ ಕುವೆಂಪು ಅವರು ನಾಡಗೀತೆ ರಚಿಸಿ ನೂರು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಸಹಸ್ರ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಶಾಲಾ ಕಾಲೇಜು ಹಂತದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಕುವೆಂಪು ಅವರು ನಾಡಿಗೆ ನೀಡಿದ ಕೊಡುಗೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು. 1924-25 ರ ಅವಧಿಯಲ್ಲಿ ಕುವೆಂಪು ಅವರ ಆತ್ಮಕಥೆ ‘ನೆನಪಿನ ದೋಣಿ’ಯಲ್ಲಿ ಉಲ್ಲೇಖಿಸಿರುವಂತೆ ‘ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ’ ನಾಡಗೀತೆಯನ್ನು ರಚಿಸಿ ಕನ್ನಡ ನಾಡಿನ ಸಮೃದ್ಧಿಯನ್ನು ಕಟ್ಟಿಕೊಟ್ಟಿದ್ದಾರೆ ಎಂದು ಟಿ.ಪಿ.ರಮೇಶ್ ನುಡಿದರು. 1925ರ ಸುಮಾರಿಗೆ ಭಾರತ ಒಂದು ಗಣರಾಜ್ಯವಾಗಿ ಭಾಷಾವಾರು ಪ್ರಾಂತ್ಯ ರಚನೆ, ಕನ್ನಡ ನಾಡು ಏಕೀಕರಣವಾಗಿ ಕರ್ನಾಟಕ ಹೆಸರು ನಾಮಕರಣ ಹೀಗೆ ಕನ್ನಡ ನಾಡು, ಭಾಷೆ ಬೆಳವಣಿಗೆಗೆ ಕುವೆಂಪು ಅವರು ಶ್ರಮಿಸಿದ್ದಾರೆ ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ರಸಖುಷಿ ಕವಿಯಾದ ಕುವೆಂಪು ಅವರು ನಾಡಿನ ಸರ್ವತೋಮುಖ ಬೆಳವಣಿಗೆಗೆ ಸಾಹಿತ್ಯದ ಮೂಲಕ ಅಪಾರ ಕೊಡುಗೆ ನೀಡಿದ್ದಾರೆ. ಕುವೆಂಪು ಅವರು ಕನ್ನಡನಾಡು ಭಾರತ ಮಾತೆಯಲ್ಲಿ ಪ್ರಮುಖ ಸ್ಥಾನ ಪಡೆದಿದೆ ಎಂದು ನಾಡಗೀತೆಯಲ್ಲಿ ವಿವರಿಸಿದ್ದಾರೆ ಎಂದರು. ‘ಭಾರತ ಜನನಿಯ ತನುಜಾತೆ’ ‘ಜಯಹೇ ಕರ್ನಾಟಕ ಮಾತೆ’ ‘ಜನನಿಯ ಜೋಗುಳ’, ಕಪಿಲ ಪತಜಂಲಿ ಗೌತಮ(ಜೀನ)ನುತ, ‘ಶಂಕರ ರಾಮಾನುಜ’, ‘ಕೃಷ್ಣ ಶರಾವತಿ(ವರ) ತುಂಗಾ’, ‘ಸರ್ವ ಜನಾಂಗದ ಶಾಂತಿ(ನಿಕೇತನ)ಯ ತೋಟ’, ‘ಗಾಯಕ ವೈಣಿಕ’ ಎಂಬಂತಹ ಪದಪುಂಜಗಳನ್ನು ಗಮನಿಸಬಹುದು ಎಂದರು. ರೂಪಾಂಶ ಭಾವ, ಭಾಷೆ ಬದಲಾಗಿದ್ದರೂ ಮೂಲ ಆಶಯ ಮಾತ್ರ ಮೂಲದ್ದೇ ಎಂಬುದು ಸ್ಪಷ್ಟವಾಗುತ್ತದೆ. ಹಾಗೆಯೇ ಮೂಲದ ‘ಪಚ್ಚೆಯ ನವ ಕಂಠೀಮಾಲೆ’ ಯಂತಹ ಉಕ್ತಿಗೆ ಬದಲಾಗಿ ‘ಹಸುರಿನ ಗಿರಿಗಳ ಸಾಲೆ ನಿನ್ನಯ ಕೊರಳಿನ ಮಾಲೆ’ ಎಂಬಂತಹ ಸಾಲುಗಳು ಬಂದಿರುವುದು ಅವರ ‘ಭಾವ’ ಬೆಳವಣಿಗೆಯ ಸಂಕೇತವಾಗಿದೆ ಎಂದು ಅವರು ವಿವರಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆ.ಮಂಜುಳ ಅವರು ಮಾತನಾಡಿ ‘ಭಾರತ ಜನನಿಯ ತನುಜಾತೆ’ ಮತ್ತು ‘ಸರ್ವ ಜನಾಂಗದ ಶಾಂತಿಯ ತೋಟ’ ಈ ನಾಡಗೀತೆಯ ಮೂಲ ಆಶಯಗಳೆಂಬುದು ಸ್ಪಷ್ಟಪಡಿಸಿರುವಂತೆ, ಕನ್ನಡ ನಾಡಿನ ವಿಸ್ತೀರ್ಣವನ್ನು ಚದರ ಮೈಲಿಗಳಲ್ಲಿ ಅಳೆಯುವುದಕ್ಕಿಂತ ಚದರ ವರ್ಷಗಳಲ್ಲಿ ಅಳೆಯಬೇಕಾಗಿದೆ. ನಾಡು ಅಥವಾ ದೇಶ ಎಂದರೆ ಅದರ ಭೂಭಾಗ ಮಾತ್ರವಲ್ಲ ಅದರ ಜನ-ಭಾಷೆ-ಸಂಸ್ಕøತಿ ಎಲ್ಲವೂ ಸೇರುತ್ತದೆ. ಇವು ತಮ್ಮ ತನವನ್ನು ಉಳಿಸಿಕೊಂಡು ವಿಶ್ವಾತ್ಮಕವಾಗುವ ಆಶಯಗಳೆಂದರೂ ತಪ್ಪಾಗುವುದಿಲ್ಲ. ಮುಂದೆ ಅವರೇ ಪ್ರತಿಪಾದಿಸಿದ ‘ವಿಶ್ವಮಾನವ ಸಂದೇಶ’ಕ್ಕೂ ಆಶಯಗಳಾಗಿವೆ ಎಂದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ ಅವರು ಮಾತನಾಡಿ ಕನ್ನಡ ನಾಡು ಕಟ್ಟುವಲ್ಲಿ ಕುವೆಂಪು ಅವರು ಶ್ರಮಿಸಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿ ವಿಶ್ವಮಾನವ ಸಂದೇಶವನ್ನು ನೀಡಿದ್ದಾರೆ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಅವರು ಮಾತನಾಡಿ ನಾಡುಕಂಡ ಶ್ರೇಷ್ಠ ಕವಿ ಕುವೆಂಪು ಆಗಿದ್ದಾರೆ. ರಾಷ್ಟ್ರ ಹಾಗೂ ನಾಡಿನ ಬಗ್ಗೆ ನಾಡಗೀತೆಯಲ್ಲಿ ವರ್ಣೀಸಿರುವುದು ವಿಶೇಷವಾಗಿದೆ. ರಾಷ್ಟ್ರದ ಹಿರಿಮೆಯನ್ನು ನಾಡಗೀತೆ ಮೂಲಕ ಸಾರಿದ್ದಾರೆ ಎಂದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ, ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಕೆ.ವಿ.ಶಶಿಕಲಾ, ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾದ ಸುಶೀಲ, ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಆರ್.ಪಿ.ಚಂದ್ರಶೇಖರ್, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಿ.ಟಿ.ಶಿವಶಂಕರ, ಪ್ರಾಥಮಿಕ ಶಾಲಾ ಅಭಿವೃದ್ಧಿ ಅಧ್ಯಕ್ಷರಾದ ಎನ್.ಜಗದೀಶ್, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್, ತಾಲ್ಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಜೆ.ಸಿ.ಶೇಖರ್, ವಿಜೇತ್, ಹರಿಣಿ ವಿಜಯ್, ಡಾ.ಕಾವೇರಿ ಪ್ರಕಾಶ್, ಪ್ರೇಮ್‍ಕುಮಾರ್, ಪ್ರೇಮ ರಾಘವಯ್ಯ, ಜಮೀರ್, ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಮಕ್ಕಂದೂರಿನಲ್ಲಿ ಸಂಭ್ರಮದ ಉಮ್ಮೇಟಿ ಕೋಲ್‌ ಮಂದ್‌ ಮತ್ತು ಪುತ್ತರಿ ಊರೋರ್ಮೆ*
Next Article *ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ : ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ : ಕೋರನ ಸರಸ್ವತಿ*

Website design development company services in Mangalore

Forex Trading Teacher in India

Related Posts

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

ನ್ಯೂಯಾರ್ಕ್/ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದೊಂದಿಗಿನ ಇತ್ತೀಚಿನ ವಾಣಿಜ್ಯ ಒಪ್ಪಂದವನ್ನು “ಐತಿಹಾಸಿಕ” ಎಂದು ಬಣ್ಣಿಸಿದ್ದಾರೆ. ಈ ಒಪ್ಪಂದದ…

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.