Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*
  • *ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*
  • *ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*
  • *ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*
  • *ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*
  • *ಸೆ.12 ರಂದು ವಂದೇ ಮಾತರಂ ಸ್ಪರ್ಧೆ*
  • *ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*
  • *ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸಾಹಿತ್ಯಾಸಕ್ತರ ವೇದಿಕೆಯಿಂದ ಶ್ರದ್ಧಾಂಜಲಿ : ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಮೇರು ಸಾಹಿತಿ ನಾ.ಡಿಸೋಜಾ : ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಾಹಿತ್ಯಾಸಕ್ತರ ವೇದಿಕೆಯಿಂದ ಶ್ರದ್ಧಾಂಜಲಿ : ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಮೇರು ಸಾಹಿತಿ ನಾ.ಡಿಸೋಜಾ : ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ಅಭಿಮತ*

ಜನವರಿ 6, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.6 NEWS DESK : ಜೀವಪರವಾದ ಹೋರಾಟಗಳ ಸಾಹಿತ್ಯ ಕೃಷಿ ಮಾಡುವ ಮೂಲಕ ಜನಸಾಮಾನ್ಯರ ಗಟ್ಟಿಧ್ವನಿಯಾಗಿದ್ದ ಸಾಹಿತಿ ನಾ.ಡಿಸೋಜಾ ಅವರ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಎಂದು ಕೊಡಗಿನ ಹಿರಿಯ ಸಾಹಿತಿ ಬಾಚರಣಿಯಂಡ ಪಿ.ಅಪ್ಪಣ್ಣ ಹೇಳಿದರು. ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಕುಶಾಲನಗರದ ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು, ನಾ.ಡಿಸೋಜಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, 60 ರ ದಶಕದಲ್ಲಿ ಪಾಟೀಲ್ ಪುಟ್ಟಪ್ಪ ಅವರ ಪ್ರಪಂಚ ಪತ್ರಿಕೆಯಲ್ಲಿ ನಿರಂತರವಾಗಿ ನಾ.ಡಿಸೋಜಾ ಅವರು ಬರೆಯುತ್ತಿದ್ದ ಲೇಖನಗಳಿಗಾಗಿ ಓದುಗರು ಕಾತರದಿಂದ ಕಾಯುತ್ತಿದ್ದರು. ಮಲೆನಾಡಿನ ಪ್ರಕೃತಿ ರಮಣೀಯ ಹಸಿರು ಹೊದಿಕೆಗೆ ಘಾಸಿಯಾಗದಂತೆ ಸದಾ ಕಾಲ ಕಾವಲುಗಾರನಂತಿದ್ದು ಪರಿಸರ ಸಂರಕ್ಷಕರಾಗಿದ್ದರು. ಕವಿ, ಸಾಹಿತಿ, ಕಥೆಗಾರ, ಕಾದಂಬರಿಕಾರ ಹೀಗೆ ಸಾಹಿತ್ಯದ ಹಲವು ಆಯಾಮಗಳನ್ನು ತನ್ನಲ್ಲಿ ಅವ್ಯಕ್ತಗೊಳಿಸಿದ್ದ ನಾ.ಡಿಸೋಜ ಶರಾವತಿ ಹಿನ್ನೀರಿನಿಂದಾಗಿ ಜನ ಅನುಭವಿಸುತ್ತಿದ್ದ ಸಂಕಷ್ಟಗಳನ್ನು ತಮ್ಮ ಲೇಖನಿಯ ಮೂಲಕವೇ ಪ್ರತಿರೋಧಿಸುತ್ತಾ ಆಳುವ ಸರ್ಕಾರಗಳಿಗೆ ಎಚ್ಚರಿಕೆಯ ಘಂಟೆಯಾಗಿದ್ದರು ಎಂದು ಬಾಚರಣಿ ಅಪ್ಪಣ್ಣ ಹೇಳಿದರು. ಅನುಗ್ರಹ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಪ್ರೊ.ಹೆಚ್.ಬಿ.ಲಿಂಗಮೂರ್ತಿ ಮಾತನಾಡಿ, ಸಾಹಿತಿ ನಾ.ಡಿಸೋಜಾ ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕದ ಕೊಂಡಿ ಕಳಚಿದೆ. ಸಾಹಿತ್ಯದತ್ತ ಒಲವಿರುವಂತಹ ವಿದ್ಯಾರ್ಥಿಗಳು ಹಾಗೂ ಯುವಜನಾಂಗಕ್ಕೆ ನಾ.ಡಿಸೋಜಾ ಅವರ ಸಾಹಿತ್ಯ ಕೃಷಿ ಹಾಗೂ ಜನಪರ ಹೋರಾಟ ಮಾದರಿಯಾಗಬೇಕಿದೆ ಎಂದರು. ಸಾಹಿತ್ಯಾಸಕ್ತರ ವೇದಿಕೆಯ ಸಂಚಾಲಕ ಕೆ.ಎಸ್.ಮೂರ್ತಿ ಮಾತನಾಡಿ, ಆಳುವ ಸರ್ಕಾರದ ಯೋಜನೆಗಳು ಜನರ ಹಿತಾಸಕ್ತಿಗೆ ಮಾರಕವಾಗುತ್ತಿದ್ದ ಸಂದರ್ಭ ತಮ್ಮ ಬರಹಗಳ ಮೂಲಕವೇ ಆಳುವವರಿಗೆ ಎಚ್ಚರಿಕೆ ನೀಡುತ್ತಿದ್ದ ನಾ.ಡಿಸೋಜಾ ಅವರ ಸಾಹಿತ್ಯ ದೊಂದಿಗಿನ ಹೋರಾಟ ಹಾಗೂ ಬರಹ ಇಂದಿನ ತಲೆಮಾರಿನ ಸಾಹಿತ್ಯ ಪ್ರೇಮಿಗಳು, ವಿದ್ಯಾರ್ಥಿಗಳು ಹಾಗೂ ಮಕ್ಕಳಿಗೆ ಪ್ರೇರಣೆಯಾಗಬೇಕಿದೆ ಎಂದರು.
ಸಾಹಿತಿ ಲೀಲಾವತಿ ತೊಡಿಕಾನ ನಾ.ಡಿಸೋಜಾ ಅವರ ಕುರಿತು ಮಾತನಾಡಿದರು. ಉಪನ್ಯಾಸಕರಾದ ಶ್ರೀವಾಣಿ, ಪೃಥ್ವಿ, ಶ್ವೇತಾ, ಸೀಮಾ, ರಕ್ಷಾಪ್ರಿಯ, ಪ್ರವೀಣ್, ಪುನೀತ್, ಅನಿತಾ, ರೇಷ್ಮಾ, ಸೌಮ್ಯ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 7, 2026

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026

*ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*

ಸೆಪ್ಟೆಂಬರ್ 7, 2026

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, ಸೆ.7 NEWS DESK : ಮಾದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಪಾಲಾಕ್ಷ ಅವರಿಗೆ…

*ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*

ಸೆಪ್ಟೆಂಬರ್ 7, 2026

*ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 7, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*

ಸೆಪ್ಟೆಂಬರ್ 7, 2026

*ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*

ಸೆಪ್ಟೆಂಬರ್ 7, 2026

*ಸೆ.12 ರಂದು ವಂದೇ ಮಾತರಂ ಸ್ಪರ್ಧೆ*

ಸೆಪ್ಟೆಂಬರ್ 7, 2026

*ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*

ಸೆಪ್ಟೆಂಬರ್ 7, 2026

*ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 7, 2026

*ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*

ಸೆಪ್ಟೆಂಬರ್ 7, 2026

*ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಿರಾಜಪೇಟೆಯ ಭರತನಾಟ್ಯ ಪ್ರತಿಭೆ ಲಾವಣ್ಯ ಬೋರ್ಕರ್*

ಸೆಪ್ಟೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.