Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ದಂತ ಮಹಾವಿದ್ಯಾಲಯದಲ್ಲಿ ಶಾಸಕ ಎ.ಎಸ್.ಪೊನ್ನಣ್ಣಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ದಂತ ಮಹಾವಿದ್ಯಾಲಯದಲ್ಲಿ ಶಾಸಕ ಎ.ಎಸ್.ಪೊನ್ನಣ್ಣಗೆ ಸನ್ಮಾನ*

ಜನವರಿ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜ.17 NEWS DESK :  ಕೊಡಗಿನ ಏಕೈಕ ದಂತ ವೈದ್ಯ ಸಂಸ್ಥೆಯು ಈ ಭಾಗಕ್ಕೆ ಹೆಮ್ಮೆ ನೀಡಿರುವುದು ಮಾತ್ರವಲ್ಲದೆ ಅಸಂಖ್ಯಾತ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯವನ್ನು ರೂಪಿಸುವುದರಲ್ಲಿ ಉತ್ತಮ ಕೊಡುಗೆ ನೀಡಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು. ವಿರಾಜಪೇಟೆಯ ಮಗ್ಗುಲದ ಬಳಿಯಿರುವ ಕೊಡಗು ದಂತ ಮಹಾವಿದ್ಯಾಲಯದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಬಳಿಕ ಮಾತನಾಡಿದ ಶಾಸಕ ಪೊನ್ನಣ್ಣ ಅವರು ಸಂಸ್ಥೆಯು ಉತ್ತಮ ರೀತಿಯಲ್ಲಿ ಮುಂದುವರೆದು ಸಮಾಜಕ್ಕೆ  ಉತ್ತಮ ವೈದ್ಯರನ್ನು ನೀಡುವುದೊಂದಿಗೆ ತಮ್ಮ ಸಂಸ್ಥೆಯ ಕೀರ್ತಿಯನ್ನು ಮತ್ತಷ್ಟು ಉತ್ತುಂಗಕ್ಕೆ ಏರಿಸುವಂತಾಗಲಿ ಎಂದು ಶುಭ ಹಾರೈಸಿದರು. ದಂತ ವೈಧ್ಯಕೀಯ ಮಹಾವಿದ್ಯಾಲಯದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ಮುಂದೆಯೂ ಸ್ವಯಂ ಕಲಿಕೆ ವೃತ್ತಿಯಲ್ಲಿ ನಿರಂತರವಾಗಿ ವೈದ್ಯಕೀಯ ಲೋಕದ ಕುರಿತು ಜ್ಞಾನವನ್ನು ಹೆಚ್ಚಿಸಿಕೊಳ್ಳುವಂತಾಗಲಿ. ಯುವ ಪದವಿಧರರು ವೈಧ್ಯಕೀಯ ವೃತ್ತಿಯಲ್ಲಿ ಹೊಸ ಆವಿಷ್ಕಾರ, ಆಧುನಿಕ ಚಿಕಿತ್ಸಾ ಪದ್ದತಿಯನ್ನು ಅಳವಡಿಸಿಕೊಂಡು ಉತ್ತಮ ವೈದ್ಯರಾಗಿ ರೋಗಿಗಳಿಗೆ ಸೇವೆ ನೀಡುವಂತೆ ವೈಧ್ಯಕೀಯ ವೃತ್ತಿಯಲ್ಲಿ ಡಿಜಿಟಲ್ ವ್ಯವಸ್ಥೆ ಕೃತಕ ಬುದ್ದಿಗಳನ್ನು ಅಳವಡಿಸಿಕೊಳ್ಳಬೇಕಿದೆ. ನಿರಂತರವಾಗಿ ಮುಂದಿನ ವೈಧ್ಯಕೀಯ ಲೋಕದ ಕುರಿತು ಜ್ಞಾನ ಹೆಚ್ಚಿಸುವಲ್ಲಿ ಸಹಕಾರಿಯಾಗಲಿದೆ. ದಂತ ವೈಧ್ಯಕೀಯದಲ್ಲಿ ಹಲವಾರು ವಿಭಾಗ ಇದ್ದು ಅದರಲ್ಲಿ ನಿಮಗೆ ಬೇಕಾದದ್ದನ್ನು ಆರಿಸಿಕೊಂಡು ಅದರಲ್ಲಿ ಪರಿಣಿತಿ ಹೊಂದಿ ತಜ್ಞ ವೈದ್ಯರಾಗುವ ಆಯ್ಕೆ ಮಾಡಿಕೊಳ್ಳಿ. ಚಿಕಿತ್ಸಾ ವಿಧಾನದಲ್ಲಿ ಬದಲಾವಣೆ ತಂದುಕೊಂಡು ಮುಂದೆ ಬರುವ ಆಧುನಿಕ ಚಿಕಿತ್ಸಾ ಪದ್ದತಿಯನ್ನು ಸಹ ಅಳವಡಿಸಿಕೊಳ್ಳಬೇಕು ಎಂದರು. ತಾಲೂಕಿನಲ್ಲಿ ದಂತ ವೈದ್ಯಕೀಯ ಕಾಲೇಜು ಪ್ರಾರಂಭಗೊಂಡಾಗ ಒಂದು ಹಂತದಲ್ಲಿ ಸಾಗಿತ್ತು. ಇದೀಗ ದಂತ ವೈದ್ಯಕೀಯ ಕಾಲೇಜಿನ ಕೀರ್ತಿ ವಿಶ್ವ ವಿಖ್ಯಾಥಿಯನ್ನು ಪಡೆದುಕೊಂಡಿದೆ. ಇದು ನಮ್ಮ ಕೊಡಗಿಗೆ ಹೆಮ್ಮೆ ತರುವ ವಿಚಾರ ಎಂದು ಶ್ಲಾಘಿಸಿದರಲ್ಲದೆ ಈ ಕಾಲೇಜು ಪ್ರತಿಯೊಂದು ಸಂಸ್ಥೆಗೂ ಮಾದರಿಯಾಗಲಿ, ಸಂಸ್ಥೆ ವತಿಯಿಂದ ಇನ್ನಷ್ಟು ಸಮಾಜಮುಖಿ ಕಾರ್ಯ ಹೊರಹೊಮ್ಮಲಿ, ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆದು ನಮ್ಮ ನಾಡಿನ ಕೀರ್ತಿ ಎಲ್ಲೆಡೆ ಪಸರಿಸುವಂತಾಗಲಿ ಎಂದು ಆಶಿಸಿದರು. ಕೊಡಗು ದಂತ ಮಹಾವಿದ್ಯಾಲಯದ ಡೀನ್ ಡಾ.ಸುನೀಲ್ ಮುದ್ದಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ದಂತ ಕಾಲೇಜಿನಲ್ಲಿ ಬೆಳ್ಳಿ ಮಹೋತ್ಸವ ನಡೆಯುತ್ತಿರುವುದು ಉತ್ತಮ ವಿಚಾರ. ದಂತ ಸಂಸ್ಥೆಯು ಅಗತ್ಯ ಅಡಿಪಾಯ ಹಾಕಿಕೊಟ್ಟಿದೆ ಮುಂದೆ ಕಾಲ ಕಾಲಕ್ಕೆ ಬರುವ ತಂತ್ರಜ್ಞಾನದ ಆವಿಷ್ಕಾರಗಳನ್ನು ಅಳವಡಿಸಿಕೊಂಡು ವೃತ್ತಿ ಪರಿಣಿತಿಯನ್ನು ಹೆಚ್ಚಿಸಿಕೊಳ್ಳುವಂತಾಗಬೇಕು. ದಂತ ವೈದ್ಯಕೀಯ ಕಾಲೇಜು ಅನೇಕ ಉತ್ತಮ ವೈದ್ಯರನ್ನು ವೈಧ್ಯಕೀಯ ಲೋಕಕ್ಕೆ ನೀಡುತ್ತಿದ್ದು, ದಂತ ಆರೋಗ್ಯ ಕಾಪಾಡಲು ಜನರಿಗೆ ಸದಾ ನುರಿತ ವೈದ್ಯರ ಅಗತ್ಯವಿದೆ. ನಮ್ಮ ದಂತ ವೈಧ್ಯಕೀಯ ಮಹಾವಿದ್ಯಾಲಯ ವಿಶ್ವದಲ್ಲಿನ ದಂತ ವೈಧ್ಯಕೀಯ ಕಾಲೇಜುಗಳ ಸಮಕಾಲೀನತೆಯಲ್ಲಿ ಇದೆ. ವಿದೇಶದ ದಂತ ವೈಧ್ಯಕೀಯ ಕಾಲೇಜಿನ ಜೊತೆ ಅನ್‍ಲೈನ್ ಮೂಲಕ ಸಂವಾದ ಸಂಶೋಧನೆಗಳನ್ನು ಹಂಚಿಕೊಂಡು ವಿದ್ಯಾರ್ಥಿಗಳಿಗೆ ಆಧುನಿಕ ದಂತ ವೈಧ್ಯಕೀಯದ ಪರಿಚಯ ಮಾಡಿ ಜ್ಞಾನ ಹೆಚ್ಚಿಸಲಾಗುತ್ತಿದೆ. ವೈಧ್ಯಕೀಯ ಕಲಿಕೆಯಲ್ಲಿ ಸಂಶೋಧನೆ ಅತಿ ಮುಖ್ಯವಾಗಿರುತ್ತದೆ, ಕೌಶಲ್ಯಗಳ ಮೂಲಕ ಉತ್ತಮ ವೈದ್ಯರಾಗಿ ಮುಂದೆ ಜನರ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಹೇಳಿದರಲ್ಲದೆ ಕಾಲೆಜು ನಡೆದು ಬಂದ ಹಾದಿಯ ಬಗ್ಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಕಾಲೇಜು ವತಿಯಿಂದ ಶಾಸಕ ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಮೈಸೂರು ಕೊಡವ ಸಮಾಜದ ವತಿಯಿಂದ ಸಂಸ್ಥೆಯು ಬೆಳ್ಳಿ ಮಹೋತ್ಸವ ಆಚರಿಸುತ್ತಿರುವ ಹಿನ್ನಲೆಯಲ್ಲಿ ಡೀನ್ ಡಾ. ಸುನೀಲ್ ಮುದ್ದಯ್ಯ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸ್ವೀಡನ್‍ನ ಉಪ್ಪ್ಸಲ ಯುನಿವರ್ಸಿಟಿ ಹಾಸ್ಪಿಟಲ್‍ನ ಹೆಡ್ ಆಫ್ ರಿಸರ್ಚ್ ಬೋರ್ಡ್, ಪ್ಲಾಸ್ಟಿಕ್ ಅಂಡ್ ಮ್ಯಾಕ್ಷಿಲೋಪೇಸಿಯಲ್ ಸರ್ಜನ್ ಪ್ರೋ. ಡಾ. ಅಂಡ್ರಿಯಾಸ್ ತೋರ್, ದಂತ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ಸಿ ಪೆÇನ್ನಪ್ಪ, ದಂತ ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಜಿತೇಶ್ ಜೈನಿ, ಡಾ. ಅನ್ಹ್‍ಮೋಲ್ ಕಲ್ಹಾ, ಹಾಗೂ ದಂತ ಮಹಾವಿದ್ಯಾಲಯದ ಉಪನ್ಯಾಸಕ ವೃಂದದವರು ಸೇರಿದಂತೆ ದಂತ ವೈದ್ಯಕೀಯ ಕಾಲೇಜುಗಳ ಪದವೀಧರರು ಇದ್ದರು. ಸಭಾ ಕಾರ್ಯಕ್ರಮದ ಬಳಿಕ ಕಾಲೇಜು ವಿದ್ಯಾರ್ಥಿಗಳಿಂದ ವೈವಿದ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು  ಮೇ, 13 ರಂದು ಬೆಳಗ್ಗೆ…

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.