Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*
  • *ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*
  • *ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*
  • *ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*
  • *ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*
  • *ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*
  • *ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೂಕ್ಷ್ಮ ವಲಯದಲ್ಲಿ ರಸ್ತೆ ನಿರ್ಮಾಣದ ಪ್ರಯತ್ನ : ಕೊಡಗು ವನ್ಯಜೀವಿ ಸಂರಕ್ಷಣಾ ಸಂಘ ಆಕ್ಷೇಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೂಕ್ಷ್ಮ ವಲಯದಲ್ಲಿ ರಸ್ತೆ ನಿರ್ಮಾಣದ ಪ್ರಯತ್ನ : ಕೊಡಗು ವನ್ಯಜೀವಿ ಸಂರಕ್ಷಣಾ ಸಂಘ ಆಕ್ಷೇಪ*

ಜನವರಿ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.25 : ಜೀವನದಿ ಕಾವೇರಿ ಉಗಮ ಸ್ಥಾನವಾದ ತಲಕಾವೇರಿ ವ್ಯಾಪ್ತಿಯಲ್ಲಿನ ರಕ್ಷಿತಾರಣ್ಯ, ವನ್ಯಜೀವಿ ಅಭಯಾರಣ್ಯವೆಂದು ಗುರುತಿಸಲ್ಪಟ್ಟ ಪರಿಸರ ಸೂಕ್ಷ್ಮ ವಲಯದಲ್ಲಿ ಪ್ರಭಾವಿ ವ್ಯಕ್ತಿಗೆ ಸೇರಿದ ಸಂಸ್ಥೆಯೊಂದು ರಸ್ತೆ ನಿರ್ಮಾಣದ ಪ್ರಯತ್ನಕ್ಕೆ ಮುಂದಾಗುವ ಆಘಾತಕಾರಿ ಬೆಳವಣಿಗೆ ಕಂಡು ಬಂದಿದ್ದು, ಇದನ್ನು ತೀವ್ರವಾಗಿ ವಿರೋಧಿಸುವುದಾಗಿ ಕೊಡಗು ವನ್ಯಜೀವಿ ಸಂರಕ್ಷಣಾ ಸಂಘ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವನ್ಯಜೀವು ಸಂರಕ್ಷಣಾ ಸಂಘದ ಅಧ್ಯಕ್ಷರಾದ ಕೆ.ಎನ್.ಮಾದಪ್ಪ, ಕೇರಳದ ಗಡಿಯಲ್ಲಿ ಬರುವ, ಭಾಗಮಂಡಲ ಗ್ರಾಮ ಪಂಚಾಯ್ತಿಗೆ ಒಳಪಟ್ಟ ಮುಂಡ್ರೋಟ್‌ನಲ್ಲಿ ಪ್ರಭಾವಿ ವ್ಯಕ್ತಿಯೊಬ್ಬರು ಜಾಗಕ್ಕೆ ಸಂಪರ್ಕ ಕಲ್ಪಿಸಿಕೊಳ್ಳುವ ಹಿನ್ನೆಲೆಯಲ್ಲಿ, ಮುಂಡ್ರೋಟ್‌ನಿಂದ ಸರಿ ಸುಮಾರು 24 ಕಿ.ಮೀ. ರಸ್ತೆಯನ್ನು ತಲಕಾವೇರಿ ರಕ್ಷಿತಾರಣ್ಯ ಪ್ರದೇಶದಲ್ಲಿ ನಿರ್ಮಾಣ ಮಾಡುವ ಪ್ರಯತ್ನಗಳಿಗೆ ಇಳಿದಿರುವುದಾಗಿ ಆರೋಪಿಸಿದರು. ತಲಕಾವೇರಿ ಕ್ಷೇತ್ರಕ್ಕೆ ತೆರಳುವ ಪ್ರವೇಶ ದ್ವಾರದಿಂದ ಬಲ ಬದಿಗಾಗಿ ಅರಣ್ಯ ಇಲಾಖೆಯ ವಾಚರ್‌ಗಳ ಕಾಲು ಹಾದಿ ಇದೆ. ಈ ಹಾದಿಯನ್ನು ರಸ್ತೆಯಾಗಿ ಪರಿವರ್ತಿಸಿಕೊಳ್ಳುವ ಇರಾದೆ ಪ್ರಭಾವಿ ವ್ಯಕ್ತಿಗಳ ಸಂಸ್ಥೆಯದ್ದಾಗಿದೆ. ಇಂತಹ ಪ್ರಯತ್ನ ಕಾವೇರಿಯ ಜಲ ಮೂಲ ಸೇರಿದಂತೆ ಅಲ್ಲಿನ ಪರಿಸರಕ್ಕೆ ಅಪಾರ ಹಾನಿಯನ್ನು ಉಂಟುಮಾಡುವುದರಲ್ಲಿ ಯಾವುದೇ ಸಂದೇಹವೆಲ್ಲವೆಂದು ಆತಂಕ ವ್ಯಕ್ತಪಡಿಸಿದರು. ತಲಕಾವೇರಿ ರಕ್ಷಿತಾರಣ್ಯ ಪ್ರದೇಶ ಅತ್ಯಂತ ದಟ್ಟ ಅರಣ್ಯ ಪ್ರದೇಶವಾಗಿದ್ದು, ಯುನೆಸ್ಕೋದಿಂದ ವಿಶ್ವ ಪಾರಂಪರಿಕ ತಾಣವಾಗಿ ಗುರುತಿಸಲಟ್ಟಿರುವುದಲ್ಲದೆ, ವನ್ಯಜೀವಿ ಅಭಯಾರಣ್ಯವು ಆಗಿದೆ. ನಿತ್ಯ ಹರಿದ್ವರ್ಣದ ಈ ಭಾಗದ ಅರಣ್ಯದಲ್ಲಿ ಆನೆಗಳ ಕಾರಿಡಾರ್‌ನ್ನು ಗುರುತಿಸಲಾಗಿದ್ದರೆ, ವಿವಿಧ ಜೀವ ಸಂಕುಲಗಳ ಆವಾಸ ಸ್ಥಾನವಾಗಿದೆ. ಇಂತಹ ಸೂಕ್ಷ್ಮ ಪ್ರದೇಶದಲ್ಲಿ ರಸ್ತೆ ನಿರ್ಮಾಣವಾದಲ್ಲಿ ಒಟ್ಟು ಪರಿಸರಕ್ಕೆ ಧಕ್ಕೆಯುಂಟಾಗಲಿದೆ ಎಂದರು. ಮುಂಡ್ರೋಟ್ ವಿಭಾಗದಲ್ಲಿ ಪ್ರಭಾವಿ ವ್ಯಕ್ತಿಯ ಸಂಸ್ಥೆ ಖರೀದಿಸಿರುವ ಜಾಗಕ್ಕೆ ಇತರೆ ಸಂಪರ್ಕ ರಸ್ತೆಗಳು ಇವೆ. ಆದರೆ, ತಲಕಾವೇರಿಯ ಮೂಲಕ ಸಮೀಪದ ಹಾದಿಯನ್ನು ಕಂಡು ಕೊಳ್ಳುವ ಪ್ರಯತ್ನ ಅವರದ್ದಾಗಿದೆ. ತಲಕಾವೇರಿ ಅಭಯಾರಣ್ಯದಲ್ಲಿ ರಸ್ತೆಗೆಂದು ಉದ್ದೇಶಿಸಿರುವ ಪ್ರದೇಶ ಅತ್ಯಂತ ಕಡಿದಾದ ಬೆಟ್ಟ ಗುಡ್ಡಗಳನ್ನು ಹೊಂದಿರುವ ಪ್ರದೇಶವಾಗಿರುವುದಲ್ಲದೆ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆ ನಡೆಸಿದ ಸರ್ವೇಯಲ್ಲಿ ಭೂ ಕುಸಿತದ ಆತಂಕದ ಪ್ರದೇಶವೆಂದು ಗುರುತಿಸಲಾಗಿದೆಯೆ ಎಂದು ತಿಳಿಸಿದರು. ಇಂತಹ ಸೂಕ್ಷ್ಮ ಪ್ರದೇಶವನ್ನು ಯಾವುದೇ ಕಾರಣಕ್ಕೂ ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡಬಾರದೆಂದು ಈಗಾಗಲೆ ಕೊಡಗು ವನ್ಯ ಜೀವಿ ಸಂರಕ್ಷಣಾ ಸಂಘವು ಅರಣ್ಯ ಸಚಿವರು, ರಾಜ್ಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಮಾಡಿದೆ. ರಸ್ತೆ ನಿರ್ಮಾಣವಾಗಕೂಡದೆನ್ನುವ ನಿಟ್ಟಿನ ನಮ್ಮ ಈ ಪ್ರಯತ್ನಗಳ ನಡುವೆ ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡಲು ಮುಂದಾದಲ್ಲಿ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಕೆ.ಎಸ್.ಮಾದಪ್ಪ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಕೊಡಗು ವನ್ಯ ಜೀವಿ ಸಂರಕ್ಷಣಾ ಸಂಘದ ಮಾಜಿ ಅಧ್ಯಕ್ಷರಾದ ಕೆ.ಎ.ಚಂಗಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಸಿ.ಪಿ.ಅಯ್ಯಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*

ಆಗಷ್ಟ್ 20, 2026

*ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 20, 2026

*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*

ಆಗಷ್ಟ್ 20, 2026

*ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.20 NEWS DESK : ಡಿ.ದೇವರಾಜ ಅರಸು ಅವರು ರಾಜ್ಯದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಿ ರಾಜ್ಯದ ಅಭಿವೃದ್ಧಿಗೆ ತಮ್ಮದೇ…

*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*

ಆಗಷ್ಟ್ 20, 2026

*ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*

ಆಗಷ್ಟ್ 20, 2026

*ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*

ಆಗಷ್ಟ್ 20, 2026

*ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*

ಆಗಷ್ಟ್ 20, 2026

*ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಆಗಷ್ಟ್ 20, 2026

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.