Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ : ವಿದ್ಯಾರ್ಥಿಗಳು ರಾಷ್ಟಪ್ರೇಮ ಬೆಳೆಸಿಕೊಳ್ಳಲು ಜೇಸಿ ತೇಜ ದಿನೇಶ್ ಕರೆ*
ಇತ್ತೀಚಿನ ಸುದ್ದಿಗಳು

*ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ : ವಿದ್ಯಾರ್ಥಿಗಳು ರಾಷ್ಟಪ್ರೇಮ ಬೆಳೆಸಿಕೊಳ್ಳಲು ಜೇಸಿ ತೇಜ ದಿನೇಶ್ ಕರೆ*

January 27, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಜ.27 NEWS DESK : ಶಾಲಾ- ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರ ನಾಯಕರ ಆದರ್ಶ ವ್ಯಕ್ತಿತ್ವ ಹಾಗೂ ರಾಷ್ಟಪ್ರೇಮ ಬೆಳೆಸಿಕೊಳ್ಳಲು ದೇಶದ ಐಕ್ಯತೆ, ಸಮಗ್ರತೆಗೆ ಪಣ ತೊಡಬೇಕು ಎಂದು 2004 ರಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಗಾಡ್ ಆಫ್ ಆನರ್ ( ಪಥ ಸಂಚಲನದಲ್ಲಿ ಅತಿಥಿಗಳಿಗೆ ಗೌರವ ಸಲ್ಲಿಸುವ ಪ್ರಕ್ರಿಯೆ) ನಲ್ಲಿ ಕರ್ನಾಟಕ – ಗೋವಾ ಎನ್.ಸಿ.ಸಿ.ವತಿಯಿಂದ ಎನ್.ಸಿ.ಸಿ.ಕೆಡೆಟ್ ಆಗಿ ಪಾಲ್ಗೊಂಡಿದ್ದ ಕುಶಾಲನಗರ ಜೆ.ಸಿ.ಐ.ಕಾವೇರಿ ಸಂಸ್ಥೆಯ ಅಧ್ಯಕ್ಷ ಹಾಗೂ ಜೇಸಿ ತಂಬಂಡ  ತೇಜ ದಿನೇಶ್  ಕರೆ ನೀಡಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು( ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ. ಎನ್.ಎಸ್.ಎಸ್.ಘಟಕದ ವತಿಯಿಂದ ಭಾನುವಾರ ( ಜ.26 ರಂದು ) ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಸಹಯೋಗದೊಂದಿಗೆ ಸಂಭ್ರಮ, ಸಾಗರದಿಂದ ಏರ್ಪಡಿಸಿದ್ದ 76 ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದ ಪ್ರತಿಯೊಬ್ಬ ಪ್ರಜೆಯು ಸ್ವಾವಲಂಬಿ, ಸ್ವಾಭಿಮಾನಿ, ಗೌರವಯುತ ಜೀವನವನ್ನು ನಡೆಸಬೇಕು ಎಂದು ನಮ್ಮ ದೇಶದ ಅನೇಕ ಮಹನೀಯರು ಕಂಡಿದ್ದ ಕನಸನ್ನು ನನಸು ಮಾಡಲು ನಮ್ಮ ದೇಶದ ಸಂವಿಧಾನ ಸಹಕಾರಿಯಾಗಿದೆ ಎಂದರು. 2004 ರಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಗಾಡ್ ಆಫ್ ಆನರ್ ( ಪಥ ಸಂಚಲನದಲ್ಲಿ ಅತಿಥಿಗಳಿಗೆ ಗೌರವ ಸಲ್ಲಿಸುವ ಪ್ರಕ್ರಿಯೆ) ನಲ್ಲಿ ಕರ್ನಾಟಕ – ಗೋವಾ ಎನ್.ಸಿ.ಸಿ.ವತಿಯಿಂದ ಎನ್.ಸಿ.ಸಿ.ಕೆಡೆಟ್ ಆಗಿ ತಾವು ಪಾಲ್ಗೊಂಡಿದ್ದ ಅನುಭವದ ಬಗ್ಗೆ ತೇಜ ದಿನೇಶ್ ಅವರು, ವಿದ್ಯಾರ್ಥಿಗಳೊಂದಿಗೆ ತಮ್ಮ ಅನುಭವವನ್ನು ಹಂಚಿಕೊಂಡರು.
ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಹೊಂದುವ ಮೂಲಕ ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದೊಂದಿಗೆ ಜೀವನದಲ್ಲಿ ಉತ್ತಮ ಸಾಧನೆ ಹೊಂದಬೇಕು ಎಂದು ಸಲಹೆ ನೀಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕರೂ ಆದ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್,  ಜ.26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನವು ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮ, ದೇಶಭಕ್ತಿಗಳಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ ಆಚರಿಸುತ್ತೇವೆ. ಜ.26 1950 ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಿದ ದಿನ. ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನ. ಈ ದಿನವು ಭಾರತೀಯರ ಪಾಲಿಗೆ ಅತ್ಯಂತ ಮಹತ್ವ ದಿನ ಎಂದು ಬಣ್ಣಿಸಿದರು. ಧ್ವಜಾರೋಹಣ ನೆರವೇರಿಸಿದ ಶಾಲಾ ಎಸ್. ಡಿ ಎಂ ಸಿ ಅಧ್ಯಕ್ಷ ಕೆ.ಕೆ.ಹರೀಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಕೆ.ವಿ.ಅರುಣ್, ಕಾರ್ಯದರ್ಶಿ ಎಂ.ಎಸ್.ಗಣೇಶ್, ಕುಶಾಲನಗರ ಕಾವೇರಿ ಜೆಸಿಐ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಜಗದೀಶ್, ಮಾಜಿ ಅಧ್ಯಕ್ಷ ಎಂ.ಜೆ.ರಜನಿಕಾಂತ್,
ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಎ.ಎಂ.ಜವರಯ್ಯ ಮಾತನಾಡಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಶಿಕ್ಷಕರಾದ ಬಿ.ಡಿ.ರಮ್ಯ, ಕೆ.ಗೋಪಾಲಕೃಷ್ಣ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ, ಶಾಲಾ ನಾಯಕ ಎಂ.ಗೌತಮ್, ಉಪ ನಾಯಕಿ ಸ್ಪಂದನ, ವಿದ್ಯಾರ್ಥಿಗಳು ಇದ್ದರು. ವಿದ್ಯಾರ್ಥಿಗಳು ಗಣರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ಇದಕ್ಕೂ ಮೊದಲು ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ ಅವರ ಮಾರ್ಗದರ್ಶನದಲ್ಲಿ ಶಾಲಾ ಮಕ್ಕಳು ನಡೆಸಿಕೊಟ್ಟ ದೈಹಿಕ ಕಸರತ್ತು ವ್ಯಾಯಾಮ ಪ್ರದರ್ಶನ ಹಾಗೂ ರಾಷ್ಟ್ರದ ಸಾರ್ವಭೌಮತ್ವವನ್ನು ಪ್ರತಿಬಿಂಬಿಸುವ ಪಿರಾಮಿಡ್ ರಚಿಸಿ ರಾಷ್ಟ್ರೀಯ ಧ್ವಜವನ್ನು ಎತ್ತಿ ಹಿಡಿದು ಗಮನ ಸೆಳೆದರು.

Share. Facebook Twitter Pinterest LinkedIn Tumblr Email WhatsApp
Previous Article*ಮೇಕೇರಿಯಲ್ಲಿ ಎಂ.ಕೆ.ಎಲ್ ಕ್ರಿಕೆಟ್ ಪಂದ್ಯಾವಳಿ : ಕ್ರೀಡೆ ಒಗ್ಗಟ್ಟನ್ನು ಮೂಡಿಸಲು ಸಹಕಾರಿ : ಶಾಸಕ ಎ.ಎಸ್.ಪೊನ್ನಣ್ಣ*
Next Article *ನಿಧನ ಸುದ್ದಿ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.