Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಚೆನ್ನಯ್ಯನಕೋಟೆ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ :  ಗಮನಸೆಳೆದ ವಿದ್ಯಾರ್ಥಿಗಳ ನೃತ್ಯೋತ್ಸವ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
ಇತ್ತೀಚಿನ ಸುದ್ದಿಗಳು

*ಚೆನ್ನಯ್ಯನಕೋಟೆ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ :  ಗಮನಸೆಳೆದ ವಿದ್ಯಾರ್ಥಿಗಳ ನೃತ್ಯೋತ್ಸವ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

February 1, 20252 Mins Read
Share
Facebook Twitter LinkedIn Pinterest WhatsApp Email

ಸಿದ್ದಾಪುರ ಫೆ.1 NEWS DESK : ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಣ ಅತ್ಯವಶ್ಯಕವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನ ಶಾಲೆಗೆ ಕಳಿಸುವ ಮೂಲಕ ಉತ್ತಮ ಪ್ರಜೆಗಳಾಗಿ ಗುರುತಿಸಿಕೊಳ್ಳಲು ಸಹಕಾರ ನೀಡಬೇಕಾಗಿದೆ ಎಂದು ಚೆನ್ನಯ್ಯಕೋಟೆ ಗ್ರಾ.ಪಂ ಅಧ್ಯಕ್ಷ ಮೇಕೇರಿರ ಅರುಣ್ ಕುಮಾರ್ ಅಭಿಪ್ರಾಯಪಟ್ಟರು ಚೆನ್ನಯ್ಯನ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಅವರು,  ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಯಾವುದೇ ಕೊರತೆ ಇಲ್ಲದೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.  ಇದರ ಸದುಪಯೋಗಪಡಿಸಿಕೊಂಡು ಶಿಕ್ಷಣದೊಂದಿಗೆ ಸಮಾಜದ ಮುಖ್ಯವಾಹಿನಿಗೆ ಬಂದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದ  ಅವರು, ಗ್ರಾಮ ಪಂಚಾಯಿತಿ ಮೂಲಕ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಲಾಗುವುದು ಎಂದರು. ಮಾಜಿ ತಾಲ್ಲೂಕು ಅಧ್ಯಕ್ಷೆ ರಾಣಿ ನಾರಾಯಣ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಕಲಿತ ಅದೆಷ್ಟು ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಂಡು ಮುನ್ನಡೆದಿದ್ದಾರೆ.  ಈಗಿನ ಶಿಕ್ಷಣ ವ್ಯವಸ್ಥೆ ಸಾಕಷ್ಟು ಬದಲಾವಣೆಯಾಗಿದೆ.  ಸರ್ಕಾರಗಳ ಹಲವಾರು ಸೌಲಭ್ಯಗಳು ಮಕ್ಕಳ ಭವಿಷ್ಯಕ್ಕೆ ಸಹಕಾರಿಯಾಗಲಿದೆ  ಎಂದರು. ದುಶ್ಚಟ ಹಾಗೂ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದು ಓದಿನತ್ತ ಹೆಚ್ಚು ಗಮನ ಹರಿಸುವ ಮೂಲಕ ಪ್ರತಿಭಾನ್ವಿತರಾಗಿ ಮುಖ್ಯ ವಾಹಿನಿಗೆ ಬಂದಲ್ಲಿ ಯಶಸ್ಸು ಕಾಣಲು ಸಾಧ್ಯವಾಗಲಿದೆ.  ಶಿಕ್ಷಕರುಗಳ ಪರಿಶ್ರಮದಿಂದ ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ವಿವಿಧ ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಜ್ಯಮಟ್ಟದಲ್ಲೂ ಸಾಧನೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ನಿವೃತ್ತ ಯೋಧ ಲೋಕೇಶ್ ಮಾತನಾಡಿ,  ವಿದ್ಯಾರ್ಥಿಗಳು ಯಶಸ್ಸು ಕಾಣಲು ಶಿಕ್ಷಣದಿಂದ ಮಾತ್ರ ಸಾಧ್ಯವಾಗಲಿದೆ. ಶಿಕ್ಷಣ ಕಲಿತ ವಿದ್ಯಾರ್ಥಿಗಳು ದೇಶ ಸೇವೆಯೊಂದಿಗೆ ಸೇನೆಗೆ ಸೇರ್ಪಡೆಗೊಂಡು ಸೇವಾ ಮನೋಭಾವದ ಸಾಧನೆಯೊಂದಿಗೆ ಮುನ್ನಡೆಯಬೇಕಾಗಿದೆ ಎಂದು ಹೇಳಿದ ಅವರು
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಸೈಬರ್ ವಂಚಕರ ದಾಳಿ ಮುಂದುವರೆದಿದ್ದು,  ಸಾರ್ವಜನಿಕರು ಎಚ್ಚರವಹಿಸಬೇಕಾಗಿದೆ. ವಿದ್ಯಾರ್ಥಿಗಳು ಶಿಕ್ಷಣ ಹಾಗು ಕ್ರೀಡೆಯೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದರು.
ಶಾಲಾ ಮುಖ್ಯ ಶಿಕ್ಷಕಿ ಎಚ್.ಎ.ರಾಜಮ್ಮ ಮಾತನಾಡಿ, ಇಲಾಖೆ ಹಾಗೂ ದಾನಿಗಳ ಸಹಕಾರದಿಂದ ಶಾಲೆ ಮುಂದುವರಿಯುತ್ತಿದ್ದು,  ಶಿಕ್ಷಣ ಹಾಗೂ ಕ್ರೀಡೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಜಿಲ್ಲೆ ರಾಜ್ಯಮಟ್ಟದಲ್ಲೂ ಗುರುತಿಸಿಕೊಂಡು ಹಲವು ಪ್ರಶಸ್ತಿಗಳೊಂದಿಗೆ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಲು ಶಿಕ್ಷಕರಗಳು ಮುಂದಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸುವ ಮೂಲಕ
ಉತ್ತಮ ಭವಿಷ್ಯ ರೂಪಿಸಲು ಸಹಕಾರ ನೀಡಬೇಕಾಗಿದೆ ಎಂದರು. ಇದೇ ಸಂದರ್ಭ ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾದಳ ಹಾಗೂ ಶಾಲಾ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಗಮನಸೆಳೆಯಿತು. ಸಮಾರಂಭದಲ್ಲಿ ದೇಶ ಸೇವೆ ಸಲ್ಲಿಸಿ ನಿವೃತ್ತ ಯೋಧ ಲೋಕೇಶ್ ಅವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾದಳ ಗಾಗೂ ಶಾಲೆಯ ವಿದ್ಯಾರ್ಥಿಗಳು ತಾಲ್ಲೂಕು, ಜಿಲ್ಲೆ, ರಾಜ್ಯ ಮಟ್ಟದ ವಿವಿಧ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಂಕರ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ವಿಜು, ಠವಿ,ಶಿವಲಿಂಗ, ಕಾಫಿ ಬೆಳೆಗಾರ ವಾಟೇರಿರ ಸುರೇಶ್, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಕಾವೇರಮ್ಮ, ಇಸಿಓ ಕವೀತಾ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಮಣಿಕಂಠ, ಸದಸ್ಯ ಉದಯ, ಪಾಲಿಬೆಟ್ಟ ಸಿ.ಆರ್.ಪಿ ಕರುಂಬಯ್ಯ,ಸಾಗರ್ ಸಂಘದ ಅಧ್ಯಕ್ಷ ರತೀಸ್ ಸೇರಿದಂತೆ ಶಾಲಾ ಶಿಕ್ಷಕರುಗಳು,ಪೋಷಕರು,ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಕೂಡಿಗೆ ಡಯಟ್ ಗೆ ಹಿರಿಯ ಉಪನ್ಯಾಸಕಿಯಾಗಿ ಮುಂಬಡ್ತಿ ಹೊಂದಿದ ಬಿ.ಎನ್.ಪುಷ್ಪ* 
Next Article *ಕಾಜೂರು ಕರ್ಣ ಕಾಡಾನೆ ಸೆರೆ : ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ, ಪರಿಶೀಲನೆ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.