Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*
  • *ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರಪತಿಗಳ ಕುರಿತು ಹೇಳಿಕೆ ಖಂಡನೀಯ : ಕ್ಷಮೆಯಾಚಿಸಲು ಕೊಡಗು ಬಿಜೆಪಿ ಎಸ್‌ಟಿ ಮೋರ್ಚಾ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಷ್ಟ್ರಪತಿಗಳ ಕುರಿತು ಹೇಳಿಕೆ ಖಂಡನೀಯ : ಕ್ಷಮೆಯಾಚಿಸಲು ಕೊಡಗು ಬಿಜೆಪಿ ಎಸ್‌ಟಿ ಮೋರ್ಚಾ ಆಗ್ರಹ*

ಫೆಬ್ರವರಿ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.2 : ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟçಪತಿ ದ್ರೌಪದಿ ಮುರ್ಮು ಅವರ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ನೀಡಿರುವ “ಬಡಪಾಯಿ ಮಹಿಳೆ” ಎಂಬ ಹೇಳಿಕೆ ಖಂಡನೀಯ ಮತ್ತು ಇದು ಬುಡಕಟ್ಟು ಸಮುದಾಯಕ್ಕೆ ಮಾಡಿದ ಅಪಮಾನವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪರಿಶಿಷ್ಟರ ಮತಬ್ಯಾಂಕ್ ನಿಂದ ಶ್ರೀಮಂತ ರಾಜಕಾರಣ ಮಾಡಿ ದೇಶದ ಎಲ್ಲಾ ಅಧಿಕಾರವನ್ನು ಅನುಭವಿಸಿದ ಕಾಂಗ್ರೆಸ್ಸಿಗರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಂದ ಆರಂಭಗೊಂಡು ಇಲ್ಲಿಯವರೆಗೆ ಪರಿಶಿಷ್ಟ ಸಮುದಾಯವನ್ನು ಅಪಮಾನಿಸುತ್ತಲೇ ಬಂದಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷ ಪರಿಶಿಷ್ಟರನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ರಾಷ್ಟ್ರಪತಿಗಳ ಕುರಿತು ಸೋನಿಯಾಗಾಂಧಿ ಅವರು ನೀಡಿರುವ ಕೀಳು ಅಭಿರುಚಿಯ ಹೇಳಿಕೆಯೇ ಸಾಕ್ಷಿಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ಕಾಂಗ್ರೆಸ್ಸಿಗರ ಮತಬ್ಯಾಂಕ್ ರಾಜಕಾರಣದ ಬಣ್ಣ ಬಯಲಾಗುತ್ತಿದ್ದು, ಪರಿಶಿಷ್ಟರು ಜಾಗೃತರಾಗುತ್ತಿದ್ದಾರೆ. ದೇಶದ ಉನ್ನತ ಹುದ್ದೆಯನ್ನು ಶ್ರೀಮಂತರು ಹಾಗೂ ಮೇಲ್ವರ್ಗದವರು ಮಾತ್ರ ಅಲಂಕರಿಸಬೇಕೆ, ಪರಿಶಿಷ್ಟರು ಅಥವಾ ಬಡವರು ಅಧಿಕಾರದಲ್ಲಿ ಇರಬಾರದೇ ಎಂದು ಪ್ರಶ್ನಿಸಿದ್ದಾರೆ. ಸೋನಿಯಾಗಾಂಧಿ ಅವರ ಹೇಳಿಕೆಯನ್ನು ಇಡೀ ದೇಶವೇ ವಿರೋಧಿಸುತ್ತಿದೆ. ಕಾಂಗ್ರೆಸ್ ಪಕ್ಷ ತಕ್ಷಣ ಬುಡಕಟ್ಟು ಸಮುದಾಯ ಹಾಗೂ ದೇಶದ ಜನರ ಕ್ಷಮೆಯಾಚಿಸಬೇಕೆಂದು ಎಂ.ಎಂ.ಪರಮೇಶ್ವರ ಒತ್ತಾಯಿಸಿದ್ದಾರೆ. *ಖರ್ಗೆ ಹೇಳಿಕೆ ಖಂಡನೀಯ* ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡುವುದು ಹಿಂದೂ ಧಾರ್ಮಿಕ ನಂಬಿಕೆಯಾಗಿದೆ. ಆದರೆ ಈ ನಂಬಿಕೆಯನ್ನೇ ಅವಮಾನಿಸುವ ರೀತಿಯಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಂಗಾ ನದಿಯಲ್ಲಿ ಸ್ನಾನ ಮಾಡುವುದರಿಂದ ಬಡತನ ನಿರ್ಮೂಲನೆಯಾಗುತ್ತದೆಯೇ, ಹಸಿದವರಿಗೆ ಆಹಾರ, ಯುವಕರಿಗೆ ಉದ್ಯೋಗ ಸಿಗುತ್ತದೆಯೇ ಎಂದೆಲ್ಲಾ ಪ್ರಶ್ನೆ ಮಾಡಿದ್ದಾರೆ. ಇದು ಹಿಂದೂಗಳ ಭಾವನೆಗೆ ದಕ್ಕೆ ತಂದ ಹೇಳಿಕೆಯಾಗಿತ್ತು ಇದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡದ ಮಲ್ಲಿಕಾರ್ಜುನ ಖರ್ಗೆ ಅವರು ಸುದೀರ್ಘ ಕಾಲ ದೇಶದ ರಾಜಕಾರಣದಲ್ಲಿದ್ದು, ಬಡತನ ನಿರ್ಮೂಲನೆ ಮಾಡಿದ್ದಾರೆಯೇ, ಹಸಿದವರಿಗೆ ಅನ್ನ, ನಿರುದ್ಯೋಗಿಗಳಿಗೆ ಉದ್ಯೋಗ ನೀಡಿದ್ದಾರೆಯೇ, 70 ವರ್ಷಗಳಿಗೂ ಅಧಿಕ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷ ಯಾಕೆ ಬಡತನ ನಿರ್ಮೂಲನೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ. *ಹಿಂದೂಗಳಿಗೆ ಒಂದೇ ದೇಶ* ಹಿಂದೂ ಸಮಾಜಕ್ಕೆ ಇರುವುದು ಒಂದೇ ದೇಶ, ಅದು ಭಾರತ. ಭಾರತವನ್ನು ಹಿಂದೂ ದೇಶ ಎಂದು ಕರೆಯುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಹಿಂದೂ ದೇಶ”ದ ಬೇಡಿಕೆಗೆ ಪ್ರತಿ ಬಾರಿ ಆಕ್ಷೇಪ ವ್ಯಕ್ತಪಡಿಸುತ್ತಲೇ ಬರುತ್ತಿದ್ದಾರೆ. ಭಾರತ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ ಎಂದು ಭಾಗಮಂಡಲದಲ್ಲಿ ಅವರು ನೀಡುತ್ತಿರುವ ಹೇಳಿಕೆ ಖಂಡನೀಯವೆಂದು ಎಂ.ಎಂ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. *ಉತ್ತಮ ಬಜೆಟ್* ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ಉತ್ತಮವಾಗಿದ್ದು, ಜನಸಾಮಾನ್ಯರು, ಮಧ್ಯಮವರ್ಗ ಹಾಗೂ ರೈತಪರವಾಗಿದೆ. ತೆರಿಗೆ ವಿನಾಯಿತಿಯನ್ನು 12 ಲಕ್ಷ ರೂ.ಗಳಿಗೆ ಏರಿಕೆ ಮಾಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಕೃಷಿ ಕ್ಷೇತ್ರಕ್ಕೆ ಹೆಚ್ಚು ಉತ್ತೇಜನ ನೀಡಿದ್ದು, 100 ಕೃಷಿ ಜಿಲ್ಲೆಗಳನ್ನು ಆಯ್ಕೆ ಮಾಡಿ ರೈತರಿಗೆ ಪ್ರೋತ್ಸಾಹ ನೀಡುವ ಯೋಜನೆ ಅತ್ಯುತ್ತಮವಾಗಿದೆ. ಔಷಧಿಗಳ ಬೆಲೆ ಕಡಿಮೆ ಮಾಡಲಾಗಿದೆ, ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶ ಕೇಂದ್ರ ಸರಕಾರಕ್ಕಿರುವ ಜನಪರ ಕಾಳಜಿಯನ್ನು ತೋರುತ್ತದೆ. ಸ್ವದೇಶಿ ಬಟ್ಟೆಗಳು, ಟಿವಿ, ಮೊಬೈಲ್ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಿ ಮಧ್ಯಮ ವರ್ಗಕ್ಕೆ ಸಹಾಯ ಮಾಡಲಾಗಿದೆ. ಕೇಂದ್ರ ಜನಪರ ಕಾಳಜಿಯಿಂದ ಉತ್ತಮ ಬಜೆಟ್ ನ್ನು ಮಂಡಿಸಿದ್ದರೂ ವಿರೋಧ ಪಕ್ಷಗಳು ಮೊಸರನ್ನದಲ್ಲಿ ಕಲ್ಲು ಹುಡುಕುತ್ತಿವೆ ಎಂದು ಟೀಕಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK :  ಮಡಿಕೇರಿ ನಗರ ಠಾಣೆ ವೃತ್ತ ನಿರೀಕ್ಷರಾಗಿದ್ದ ಟಿ.ಕೆ.ರಾಜು ಅವರಿಗೆ ಆತ್ಮೀಯ ಬೀಳ್ಕೊಡುಗೆ…

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.