ಶನಿವಾರಸಂತೆ ಫೆ.3 NEWS DESK : ಗುಡುಗಳಲೆಯ ಜಾತ್ರಾ ಸಮಾರೋಪದಲ್ಲಿ ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ಮಹಿಳಾ ಘಟಕದ ವತಿಯಿಂದ ನಡೆಸಿಕೊಟ್ಟ ಶಿವತಾಂಡವ ನೃತ್ಯ ರೂಪಕ ನೋಡುಗರ ಗಮನ ಸೆಳೆಯಿತು. ಕೊಡ್ಲಿಪೇಟೆಯ ಕಿರಿಕೊಡ್ಲಿಮಠ ಹಾಗೂ ಅಂಕನಹಳ್ಳಿ ಮನೆಹಳ್ಳಿ ಮಠದ ಶ್ರೀಗಳು ಸಾನಿಧ್ಯ ವಹಿಸಿದ್ದರು. ವೀರಶೈವ ಮಹಾಸಭಾದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ದೀಪಿಕಾ ಕರುಣ, ಪ್ರಧಾನ ಕಾರ್ಯದರ್ಶಿ ಲೇಖನಾ ಧರ್ಮೇಂದ್ರ, ಜಿಲ್ಲಾ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಂದೀಶ್, ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಪಿ.ಮಹದೇವಪ್ಪ, ಶಿಕ್ಷಕರಾದ ಶಿವಲಿಂಗ, ಬಸವರಾಜು, ವಿದ್ಯಾ ಸೇರಿದಂತೆ ಇತರರು ಇದ್ದರು.











