Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೆಸರೆ ಗ್ರಾಮದ ಅವೈಜ್ಞಾನಿಕ ಘನತ್ಯಾಜ್ಯ ಘಟಕದಿಂದ ಜನರಿಗೆ, ಪರಿಸರಕ್ಕೆ ತೊಂದರೆ : ತ್ಯಾಜ್ಯ ಸುಡುತ್ತಿರುವುದರಿಂದ ವರುಣಾ ನಾಲಾ ಪಿಲ್ಲರ್ ಗಳಿಗೆ ಹಾನಿ : ತೆರವುಗೊಳಿಸಲು ಸಂಸದ ಯದುವೀರ್ ಆಗ್ರಹ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಕೆಸರೆ ಗ್ರಾಮದ ಅವೈಜ್ಞಾನಿಕ ಘನತ್ಯಾಜ್ಯ ಘಟಕದಿಂದ ಜನರಿಗೆ, ಪರಿಸರಕ್ಕೆ ತೊಂದರೆ : ತ್ಯಾಜ್ಯ ಸುಡುತ್ತಿರುವುದರಿಂದ ವರುಣಾ ನಾಲಾ ಪಿಲ್ಲರ್ ಗಳಿಗೆ ಹಾನಿ : ತೆರವುಗೊಳಿಸಲು ಸಂಸದ ಯದುವೀರ್ ಆಗ್ರಹ*

ಫೆಬ್ರವರಿ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನವದೆಹಲಿ ಫೆ.7 NEWS DESK :  ಮೈಸೂರು ಸಮೀಪದ ಸಿದ್ಧಲಿಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ಕೆಸರೆ ಗ್ರಾಮದಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ ನಿರ್ಮಾಣ ಹಾಗೂ ಈ ಪ್ರದೇಶದಲ್ಲಿ ಕೆಲವರು ತ್ಯಾಜ್ಯವನ್ನು ಸುಡುತ್ತಿರುವುದರಿಂದ ವರುಣಾ ನಾಲಾ ಪಿಲ್ಲರ್ ಗಳಿಗೆ ಭಾರಿ ಅನಾಹತವಾಗಲಿದೆ ಕೂಡಲೇ ಇದನ್ನು ತೆರವುಗೊಳಿಸಿ ಪರಿಸರವನ್ನು ಹಾಗೂ ಜನರನ್ನು ರಕ್ಷಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದರು, ಜನರಿಗೆ ಹಾಗೂ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿರುವುದರಿಂದ ಪರಿಸರಕ್ಕೆ ಆಗುತ್ತಿರುವ ತೊಂದರೆಗಳ ಬಗ್ಗೆ ಸಂಸತ್ತಿನ ಗಮನಕ್ಕೆ ತರಲಾಗುವುದು ಎಂದರು. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಸಚಿವರ ಗಮನಕ್ಕೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದೂ ವಿವರಿಸಿದ್ದಾರೆ. ಈ ಪ್ರದೇಶದಲ್ಲಿ ಕೆಲವು ವ್ಯಕ್ತಿಗಳು ಶೆಡ್‌ ಗಳನ್ನು ಕಟ್ಟಿಕೊಂಡು ತ್ಯಾಜ್ಯವನ್ನು ಸುಡುತ್ತಿದ್ದಾರೆ. ವರುಣಾ ನಾಲೆಯ ಸಮೀಪವೇ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದರಿಂದ ಪಿಲ್ಲರ್‌ ಗಳಿಗೆ ಭಾರಿ ತೊಂದರೆ ಆಗುವ ಸಂಭವವಿದೆ. ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಲೇ ಸಮಸ್ಯೆ ಬೃಹದಾಕಾರಾವಾಗಿ ಬೆಳೆದಿದೆ ಎಂದು ಆರೋಪಿಸಿದ್ದಾರೆ. ಮೈಸೂರು ಮಹಾ ನಗರ ಪಾಲಿಕೆಯು ಮೈಸೂರು ಸಮೀಪದ ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಸಬಾ ಹೋಬಳಿ ಹಳೆ ಕೆಸರೆ ಗ್ರಾಮದಲ್ಲಿ ಘನ ತ್ಯಾಜ್ಯ ನಿರ್ವಹಣೆ ಘಟಕವನ್ನು ಸ್ಥಾಪಿಸಿತ್ತು. ಆದರೆ ಇದರ ನಿರ್ಮಾಣ ಸಂದರ್ಭದಲ್ಲಿ ಕಾನೂನು ಬದ್ಧ ರೀತಿಯಲ್ಲಿ ಅನುಮತಿಗಳನ್ನು ಪಡೆದುಕೊಂಡಿಲ್ಲ. ಯಾವುದೇ ನೀತಿ ನಿಯಮಗಳನ್ನು ಪಾಲಿಸಿಲ್ಲ. ಕೇಂದ್ರ ಸರ್ಕಾರದ ರಾಷ್ಟ್ರೀಯ ಘನ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಜಾರಿಯಲ್ಲಿರುವ ನೀತಿ ನಿಯಮಗಳನ್ನು ಪಾಲಿಸದೇ ಘನ ತ್ಯಾಜ್ಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಯದುವೀರ್ ಹೇಳಿದ್ದಾರೆ.

ಕಾನೂನು ಉಲ್ಲಂಘನೆ ::  ಘನತ್ಯಾಜ್ಯ ನಿರ್ಮಾಣಕ್ಕೆ ಪಡೆಯಬೇಕಾಗಿದ್ದ ಕಾನೂನುರೀತ್ಯ ಅನುಮತಿಗಳನ್ನು ಪಡೆದಿಲ್ಲ. ಅತ್ಯಂತ ಅವೈಜ್ಞಾನಿಕ ರೀತಿಯಲ್ಲಿ ಇದನ್ನು ನಿರ್ಮಾಣ ಮಾಡಲಾಗಿದೆ. ಇದರಿಂದ ಸುತ್ತಮುತ್ತಲ ಹಳ್ಳಿಗಳಲ್ಲಿರುವ ಸಾವಿರಾರು ಜನರು ಇದರಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ತ್ಯಾಜ್ಯದಿಂದ ಹೊರಹೊಮ್ಮುತ್ತಿರುವ ದುರ್ವಾಸನೆಯಿಂದ ಸುತ್ತಮುತ್ತಲ ಗ್ರಾಮದ ಸಾವಿರಾರು ಮಂದಿ ಹಿರಿಯರು, ಕಿರಿಯರು, ಮಕ್ಕಳು, ಮಹಿಳೆಯರು ತೀವ್ರ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಯಾವುದನ್ನೂ ಪಾಲಿಸದೇ ಘನತ್ಯಾಜ್ಯ ನಿರ್ವಹಣಾ ಘಟಕವನ್ನು ಸ್ಥಾಪಿಸಿರುವುದು ಅಕ್ಷಮ್ಯ. ಇದರಿಂದ ಪರಿಸರಕ್ಕೂ ಹಾಗೂ ಜನರಿಗೂ ತೊಂದರೆ ಆಗುತ್ತಿದೆ ಎಂದು ಯದುವೀರ್ ಹೇಳಿದ್ದಾರೆ.

ಪ್ರತಿಭಟನೆ ಮಾಡಿದರೂ ಸ್ಪಂದಿಸಿಲ್ಲ ::  ಇಲ್ಲಿನ ಹಲವಾರು ಗ್ರಾಮಗಳ ಸಾವಿರಾರು ಮಂದಿ ಪ್ರತಿಭಟನೆ ನಡೆಸಿ, ಸಂಬಂಧಪಟ್ಟವರಿಗೆ ಮನವಿಗಳನ್ನು ಸಲ್ಲಿಸಿದರೂ ಸಂಪೂರ್ಣ ನಿರ್ಲಕ್ಷ್ಯ ತೋರುತ್ತಿರುವುದು ಕಂಡುಬಂದಿದೆ. ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರದ ಈ ನಿರ್ಲಕ್ಷ್ಯ ಸರಿಯಲ್ಲ. ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುವುದು ಸರಿಯಲ್ಲ ಎಂದು ಸಂಸದರು ಸ್ಪಷ್ಟಪಡಿಸಿದ್ದಾರೆ. ರಾಜ್ಯ ಸರ್ಕಾರದಿಂದ ಆಗಿರುವ ಸಮಸ್ಯೆಯನ್ನು ಕೇಂದ್ರ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಗಮನಕ್ಕೆ ತರುತ್ತೇನೆ. ಈ ವಿಷಯವನ್ನು ಅತ್ಯಂತ ತ್ವರಿತವಾಗಿ ಗಮನಹರಿಸಬೇಕಾಗಿದೆ. ಘನತ್ಯಾಜ್ಯ ಘಟಕವನ್ನು ತೆರವುಗೊಳಿಸಿ, ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ. ಈ ಜಾಗದ ಬಳಿಯೇ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ ಜಾಗವಿದ್ದು, ಇಲ್ಲಿಯೂ ಅವೈಜ್ಞಾನಿಕವಾಗಿ ತ್ಯಾಜ್ಯವನ್ನು ಸುಡಲಾಗುತ್ತಿದೆ. ಈ ಅವೈಜ್ಞಾನಿಕ ಘಟಕಗಳನ್ನು ಹಾಗೂ ಇಲ್ಲಿ ತಲೆ ಎತ್ತಿರುವ ಅಕ್ರಮ ಶೆಡ್ಗಳನ್ನು ಕೂಡಲೇ ತೆರವುಗೊಳಿಸಬೇಕು. ನಮ್ಮ ಮೈಸೂರಿನ ಸಿದ್ದಲಿಂಗಪುರ ಕಸಬಾ ಹೋಬಳಿಯ ಕೆಸರೆ ಗ್ರಾಮ ಹಾಗೂ ಸುತ್ತಮುತ್ತಲ ಜನರನ್ನು ರಕ್ಷಿಸಬೇಕು ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.