Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ಸ್ಮಶಾನ’ ಜಾಗದ ಕೊರತೆ : ಮೃತರ ಗೌರವಯುತ ಸಂಸ್ಕಾರ ಅಸಾಧ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ಸ್ಮಶಾನ’ ಜಾಗದ ಕೊರತೆ : ಮೃತರ ಗೌರವಯುತ ಸಂಸ್ಕಾರ ಅಸಾಧ್ಯ*

ಫೆಬ್ರವರಿ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.12 NEWS DESK : ಕಾವೇರಿ ನದಿ ಪಾತ್ರದ ನೆಲ್ಯಹುದಿಕೇರಿಯಲ್ಲಿ ಹಿಂದೂ ಸಮುದಾಯಕ್ಕೆ ಸೇರಿದ ಬಡವರು, ಕೂಲಿ ಕಾರ್ಮಿಕರಿಗೆ ‘ಸ್ಮಶಾನ’ ಜಾಗವಿಲ್ಲದೆ, ಮೃತರ ಗೌರವಯುತ ಸಂಸ್ಕಾರ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಮಶಾನ ಹೋರಾಟ ಸಮಿತಿಯ ಪ್ರಮುಖರಾದ ಪಿ.ಆರ್.ಭರತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ಹಿಂದೂ ಧರ್ಮಕ್ಕೆ ಸೇರಿದ ಮಲೆಯಾಳಿ, ತಮಿಳು ಬಾಂಧವರು, ವಿವಿಧ ಜಾತಿ ಜನಾಂಗದ ಬಡ ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಸುಮಾರು ಹದಿನೈದು ಸಾವಿರ ಮಂದಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಇವರ ಕುಟುಂಬದಲ್ಲಿ ಸಂಭವಿಸುವ ಯಾವುದೇ ‘ಸಾವು’ ತೀವ್ರ ಆತಂಕವನ್ನು ಹುಟ್ಟು ಹಾಕುತ್ತದೆ. ಕಾರಣ, ಮೃತ ವ್ಯಕ್ತಿಗೆ ಗೌರವಯುತವಾಗಿ ಸಂಸ್ಕಾರಗಳನ್ನು ಮಾಡುವ ವ್ಯವಸ್ಥೆ ಗ್ರಾಮದಲ್ಲಿ ಇಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ಕಾವೇರಿ ನದಿ ಪಾತ್ರದಲ್ಲಿ ಸುಮಾರು ಅರ್ಧ ಏಕರೆ ಜಾಗ ಸ್ಮಶಾನವಾಗಿ ಪ್ರಸ್ತುತ ಬಳಕೆಯಾಗುತ್ತಿದೆ. ವರ್ಷಂಪ್ರತಿ ಮಳೆಗಾಲದಲ್ಲಿ ಸ್ಮಶಾನದ ಜಾಗದ ಮಣ್ಣು ಕೊಚ್ಚಿ ಹೋಗುವುದರೊಂದಿಗೆ, ಅಲ್ಲಿ ದಫನ ಮಾಡಿದವರ ಅಸ್ಥಿಗಳು ನದಿಯಲ್ಲಿ ಕೊಚ್ಚಿ ಹೋಗುವ ಭೀಕರ ಸ್ಥಿತಿ ಇದೆ. ಲಭ್ಯ ಸಣ್ಣ ಜಾಗದಲ್ಲಿ ಮೃತ ವ್ಯಕ್ತಿಯನ್ನು ದಫನ ಮಾಡುವ ಹಂತದಲ್ಲಿ ಹಲವಾರು ಬಾರಿ, ಅದಾಗಲೆ ದಫನ ಮಾಡಲ್ಪಟ್ಟವರ ಅಸ್ಥಿಗಳು ಸಿಗುತ್ತವೆ ಮತ್ತು ಅದರ ಮೇಲೆಯೇ ಮತ್ತೆ ಸಂಸ್ಕಾರಾದಿಗಳನ್ನು ಮಾಡುವ ಶೋಚನೀಯ ಪರಿಸ್ಥಿತಿ ಇರುವುದಾಗಿ ಹೇಳಿದರು. ದಾಖಲೆಗಳನ್ನು ಈ ಹಿಂದೆ ಪರಿಶೀಲಿಸಿದಾಗ ಗ್ರಾಮ ವ್ಯಾಪ್ತಿಯಲ್ಲಿ ಸ್ಮಶಾನಕ್ಕೆಂದು ಕಾಯ್ದಿರಿಸಿದ 1.08 ಏಕರೆ ಜಾಗ ಕಂಡು ಬಂದಿತ್ತು. ಆದರೆ, ಈ ಜಾಗವನ್ನು ಸ್ಮಶಾನವಾಗಿ ಪರಿವರ್ತಿಸಬಾರದು ಎಂದು ಪಂಚಾಯ್ತಿಯಾದಿಯಾಗಿ ಗ್ರಾಮದ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಬದಲಿ ಜಾಗವನ್ನು ಗುರುತಿಸಿ ಸ್ಮಶಾನಕ್ಕೆ ಒದಗಿಸಲು ನಾವು 3 ತಿಂಗಳ ಗಡುವನ್ನು ನೀಡಿದ್ದೆವು. ಅದರಂತೆ ಕಂದಾಯ ಇಲಾಖೆ ಬೆಟ್ಟದಕಾಡು ಎಂಬಲ್ಲಿ 1 ಏಕರೆ ಜಾಗವನ್ನು ಗುರುತಿಸಿದ್ದು, ಈ ಜಾಗ ಕೂಡ ಒತ್ತುವರಿಯಾಗಿದೆ ಎಂದು ಆರೋಪಿಸಿದರು. ನೆಲ್ಯಹುದಿಕೇರಿ ಗ್ರಾಮಸ್ಥರಿಗೆ ಈಗಾಗಲೆ ಸ್ಮಶಾನವೆಂದು ಗುರುತಿಸಲ್ಪಟ್ಟ ಜಾಗವನ್ನು ನೀಡಬೇಕು. ಇಲ್ಲವೆ, ಇದಕ್ಕೆ ಬದಲಿಯಾಗಿ ಕಂದಾಯ ಇಲಾಖೆ ಸೂಚಿಸಿರುವ ಜಾಗಕ್ಕೆ ಆರ್‍ಟಿಸಿ ಮಾಡಿ ನೀಡಬೇಕೆಂದು ಆಗ್ರಹಿಸಿದ ಭರತ್, ತಮ್ಮ ಬೇಡಿಕೆ ಈಡೇರಿಕೆಗೆ ಮಾರ್ಚ್ ಅಂತ್ಯದವರೆಗೆ ಕಾಲಾವಕಾಶ ನೀಡಲಾಗುವುದು. ಇದಕ್ಕೆ ಸೂಕ್ತ ಸ್ಪಂದನ ದೊರಕದಿದ್ದಲ್ಲಿ ಮಾರ್ಚ್ ಅಂತ್ಯಕ್ಕೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸ್ಮಶಾನ ಹೋರಾಟ ಸಮಿತಿಯ ಪ್ರಮುಖರಾದ ಪಿ.ಜಿ.ಸುರೇಶ್, ಪಿ.ಬಿ.ಅಂತಪ್ಪ, ಟಿ.ಟಿ.ಉದಯಕುಮಾರ್ ಹಾಗೂ ಎನ್.ನಾರಾಯಣ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK : ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. 2014…

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.