![](https://newsdeskkannada.com/wp-content/uploads/2025/02/Z-ND-ADVT-16.jpg)
![](https://newsdeskkannada.com/wp-content/uploads/2025/02/Z-ADVT-TEACHERS-10.jpg)
![](https://newsdeskkannada.com/wp-content/uploads/2025/02/Z-SRI-SAI-INSURENCE-8.jpg)
ಮಡಿಕೇರಿ ಫೆ.15 NEWS DESK : ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸೇವಾಭಾರತಿ ಸಂಸ್ಥೆಯ ವತಿಯಿಂದ ಮಡಿಕೇರಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ ಮತ್ತು ಗಾಲಿಕುರ್ಚಿ ಜಾಥಾ ನಡೆಯಿತು. ಮಡಿಕೇರಿಯ ವಿಕಾಸ್ ಜನ ಸೇವಾ ಟ್ರಸ್ಟ್ ಆಶ್ರಮ, ಸ್ವಾಮಿ ವಿವೇಕಾನಂದ ಯೂತ್ ಮೂಮ್ ಮೆಂಟ್ ಕೊಡಗು ಶಾಖೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋದಕ ಆಸ್ಪತ್ರೆಯ ಸಹಯೋಗದಲ್ಲಿ ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ಮೂರು ದಿನಗಳ ಕಾಲ ಶಿಬಿರ ನಡೆಸಲಾಗಿದ್ದು, ಜನ ಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಅರಿವು ಮೂಡಿಸಲು ಮತ್ತು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದಾಗಿ ಗಾಲಿಕುರ್ಚಿ ಜಾಥಾವನ್ನು ನಡೆಸಲಾಯಿತು. ಈ ಸಂದರ್ಭ ಸೇವಾ ಭಾರತಿ ಖಜಾಂಚಿ ಹಾಗೂ ಸೇವಾ ಧಾಮ ಸಂಸ್ಥೆಯ ಸ್ಥಾಪಕ ಕೆ.ವಿನಾಯಕ ರಾವ್, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸ್ಥಾಯಿ ಸಮಿತಿ ಸದಸ್ಯ ಅಜಯ್ ಸೂದ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.