



ಮಡಿಕೇರಿ NEWS DESK ಫೆ.16 : ಇತ್ತೀಚೆಗೆ ಜಾರ್ಖಂಡ್ ರಾಜ್ಯದ ರಾಂಚಿಯಲ್ಲಿ ನಡೆದ 2025ನೇ ಸಾಲಿನ ಅಖಿಲ ಭಾರತ ಪೊಲೀಸ್ ಕರ್ತವ್ಯ ಕೂಟದ ಮಾದಕ ದ್ರವ್ಯ ಪತ್ತೆ ವಿಭಾಗದಲ್ಲಿ ಕೊಡಗು ಜಿಲ್ಲೆಯ ಶ್ವಾನದಳದ ಎಆರ್ ಎಸ್ಐ ಜಿತೇಂದ್ರ ರೈ ಅವರ ತಂಡ ಪಾಲ್ಗೊಂಡು ಬೆಳ್ಳಿ ಪದಕ ಪಡೆದುಕೊಂಡಿದೆ. ಪದಕ ವಿಜೇತ ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘಿಸಿದ್ದಾರೆ.