Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಚಾರಕ್ಕಾಗಿ ಮಾಜಿ ಶಾಸಕರ ವಿರುದ್ಧ ಪ್ರಕಾಶ್ ಆಚಾರ್ಯ ಹೇಳಿಕೆ : ಬಿಜೆಪಿ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಚಾರಕ್ಕಾಗಿ ಮಾಜಿ ಶಾಸಕರ ವಿರುದ್ಧ ಪ್ರಕಾಶ್ ಆಚಾರ್ಯ ಹೇಳಿಕೆ : ಬಿಜೆಪಿ ಅಸಮಾಧಾನ*

ಫೆಬ್ರವರಿ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.18 NEWS DESK : ಕಾಂಗ್ರೆಸ್ ಪಕ್ಷದಲ್ಲಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ಮಡಿಕೇರಿ ಕ್ಷೇತ್ರದ ಶಾಸಕರನ್ನು ಹೊಗಳುವ ಭರದಲ್ಲಿ ಈ ಹಿಂದಿನ ಶಾಸಕರು ನಗರದ ಅಭಿವೃದ್ಧಿಗೆ ದೊಡ್ಡ ಮೊತ್ತದ ಅನುದಾನ ತರಲಿಲ್ಲವೆಂದು ನಗರ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಅವರು ನೀಡಿರುವ ಹೇಳಿಕೆ ಖಂಡನೀಯವೆಂದು ಬಿಜೆಪಿ ಎಸ್‍ಸಿ ಮೋಚಾದ ನಗರಾಧ್ಯಕ್ಷ ಹೆಚ್.ಜಿ.ಮುಕುಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಿನ ಶಾಸಕರು 3 ಕೋಟಿ ರೂ. ನೀಡಿದರು ಎನ್ನುವ ವಿಚಾರವನ್ನೇ ದೊಡ್ಡದು ಮಾಡಿ ಪ್ರಚಾರಕ್ಕಾಗಿ ಹೇಳಿಕೆ ನೀಡಿರುವ ಪ್ರಕಾಶ್ ಆಚಾರ್ಯ ಅವರು, ಮೊದಲು ದಸರಾ ಅನುದಾನವನ್ನು ದಸರಾ ಸಮಿತಿಗಳಿಗೆ ಬಿಡುಗಡೆ ಮಾಡಿಸಿಕೊಡಲಿ ಎಂದು ಸವಾಲು ಹಾಕಿದ್ದಾರೆ. ಶಾಸಕರ ಪರ ಪ್ರಚಾರ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ, ಆದರೆ ಮಾಜಿ ಶಾಸಕರು ಹೆಚ್ಚಿನ ಅನುದಾನ ತರಲಿಲ್ಲ ಎಂದು ಸುಳ್ಳು ಆರೋಪ ಮಾಡುವುದನ್ನು ಬಿಜೆಪಿ ಸಹಿಸುವುದಿಲ್ಲ. ಮಡಿಕೇರಿ ನಗರದ ಅಭಿವೃದ್ಧಿಗೆ ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಅವರು ತಮ್ಮ ಅಧಿಕಾರವಧಿಯಲ್ಲಿ ದಾಖಲೆ ಮೊತ್ತದ ಅನುದಾನವನ್ನು ತಂದಿದ್ದಾರೆ. ಇಂದು ನಗರ ಕುಡಿಯುವ ನೀರಿನ ಸಮಸ್ಯೆಯಿಂದ ಮುಕ್ತವಾಗಿರುವುದಕ್ಕೆ ಕುಂಡಾಮೇಸ್ತ್ರಿ ಯೋಜನೆಯೇ ಕಾರಣವಾಗಿದೆ. ಈ ಯೋಜನೆಗಾಗಿ ಸುಮಾರು 45 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದ್ದು, ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ ಅಪ್ಪಚ್ಚುರಂಜನ್ ಅವರುಗಳ ಪ್ರಯತ್ನದ ಫಲದಿಂದ ಇದು ಆಗಿದೆ. ಅಮೃತ್ ಯೋಜನೆಯಡಿ ಕುಡಿಯುವ ನೀರಿಗಾಗಿ 50 ಕೋಟಿ ರೂ.ಗಳನ್ನು ತಂದಿರುವ ಹೆಗ್ಗಳಿಕೆ ಅಪ್ಪಚ್ಚುರಂಜನ್ ಅವರಿಗೆ ಸಲ್ಲಬೇಕು. ನಗರೋತ್ಥಾನ ಕಾರ್ಯಕ್ರಮದಡಿ ವಿವಿಧ ಹಂತಗಳಲ್ಲಿ 40 ಕೋಟಿ ರೂ.ಗಳನ್ನು ಮಂಜೂರು ಮಾಡಿಸಿದ್ದಾರೆ. ರಸ್ತೆಗಳು ಮತ್ತು ವಿವಿಧ ಜಲಮೂಲಗಳ ಅಭಿವೃದ್ಧಿಯನ್ನು ಮಾಡಿದ್ದಾರೆ. ಮಡಿಕೇರಿ ನಗರ ಪ್ರವಾಸೋದ್ಯಮದ ಮೂಲಕವೂ ಪ್ರಗತಿ ಸಾಧಿಸಲಿ ಎನ್ನುವ ಕಾರಣಕ್ಕೆ ಗ್ರೇಟರ್ ರಾಜಾಸೀಟ್ ಯೋಜನೆಯನ್ನು ರೂಪಿಸಿ ಉದ್ಯಾನವನವನ್ನು ಕೋಟ್ಯಾಂತರ ಹಣದಲ್ಲಿ ಅತ್ಯಾಕರ್ಷಕಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಅಭಿವೃದ್ಧಿಯ ಕುರಿತು ಹೆಚ್ಚು ಆಸಕ್ತಿ ಹೊಂದಿದ್ದ ಅಪ್ಪಚ್ಚುರಂಜನ್ ಅವರು ದಾಖಲೆಯ ಮೊತ್ತದ ಅನುದಾನ ತಂದಿದ್ದರೂ ಪ್ರಕಾಶ್ ಆಚಾರ್ಯ ಅವರು ಸುಳ್ಳು ಆರೋಪಗಳನ್ನು ಮಾಡಿ ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ದಸರಾ ಸಮಿತಿಯ ಕಾರ್ಯಾಧ್ಯಕ್ಷರೂ ಆಗಿರುವ ಪ್ರಕಾಶ್ ಆಚಾರ್ಯ ಅವರು ದಸರಾ ಕಳೆದು 4 ತಿಂಗಳಾಗಿದ್ದರೂ ಅನುದಾವನ್ನು ಬಿಡುಗಡೆ ಮಾಡಿಸಿಕೊಡುವಲ್ಲಿ ಯಾಕೆ ವಿಫಲರಾಗಿದ್ದಾರೆ ಎಂದು ಹೆಚ್.ಜಿ.ಮುಕುಂದ ಪ್ರಶ್ನಿಸಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ ಕೊಡಗು ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಂಜೂರು ಮಾಡಿಸಿದ ಕೊಡಗು ವಿಶ್ವ ವಿದ್ಯಾಲಯವನ್ನು ಸರ್ಕಾರ ಮುಚ್ಚುವ ನಿರ್ಧಾರ ಕೈಗೊಂಡಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೊದಲು ಇದನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಶಾಸಕರ ಮೂಲಕ ಮಾಡಿಸಲಿ. ಕಾಂಗ್ರೆಸ್ ಪಕ್ಷದಲ್ಲಿ ತಮ್ಮ ನೆಲೆಯನ್ನು ಭದ್ರಪಡಿಸಿಕೊಳ್ಳುವುದಕ್ಕಾಗಿ ಸುಳ್ಳು ಆರೋಪಗಳನ್ನು ಮಾಡುವುದನ್ನು ಮತ್ತು ಮಾಜಿ ಶಾಸಕರುಗಳ ಕಾರ್ಯವೈಖರಿಯ ಕುರಿತು ಟೀಕೆ ಮಾಡುವುದನ್ನು ಮೊದಲು ಬಿಡಲಿ ಎಂದು ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.