Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಆರ್ಥಿಕವಾಗಿ ಸಧೃಢವಾಗಿರುವ ಸಂಘಗಳು ದವಸ ಭಂಡಾರಗಳ ಅಭಿವೃದ್ಧಿಗೆ ಕೈಜೋಡಿಸಬೇಕು : ಜಿ.ಎಸ್.ಕಿಲನ್ ಗಣಪತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಆರ್ಥಿಕವಾಗಿ ಸಧೃಢವಾಗಿರುವ ಸಂಘಗಳು ದವಸ ಭಂಡಾರಗಳ ಅಭಿವೃದ್ಧಿಗೆ ಕೈಜೋಡಿಸಬೇಕು : ಜಿ.ಎಸ್.ಕಿಲನ್ ಗಣಪತಿ*

ಫೆಬ್ರವರಿ 20, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.20 NEWS DESK : ಶಿಕ್ಷಣ, ತರಬೇತಿ ಎಂಬುದು ಎಲ್ಲಾ ಸಂಘ ಸಂಸ್ಥೆಗಳ ಉಳಿವು, ಅಭಿವೃದ್ಧಿಗೆ ಅಗತ್ಯವಾಗಿ ಬೇಕಾಗಿದೆ. ನಮ್ಮ ಪೂರ್ವಜರು ಸ್ಥಾಪಿಸಿ ಬೆಳೆಸಿರುವ ದವಸ ಭಂಡಾರಗಳಲ್ಲಿ ಶೇ.50 ರಷ್ಟು ಸಂಘಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಬಡ್ಡಿ ಸಹಾಯಧನ ಅಥವಾ ಇತರ ಯಾವುದೇ ಅನುದಾನಗಳು ಇಲ್ಲದೆ ಇರುವುದರಿಂದ ಹಿರಿಯರು ಸ್ಥಾಪಿಸಿದ ದವಸ ಭಂಡಾರಗಳು ನಷ್ಟದಲ್ಲಿವೆ. ಆದುದರಿಂದ ಆರ್ಥಿಕವಾಗಿ ಸದೃಢವಾಗಿರುವ ಸಂಸ್ಥೆಗಳು ದವಸ ಭಂಡಾರಗಳ ಅಭಿವೃದ್ಧಿಗೆ ಕೈಜೋಡಿಸಿದಲ್ಲಿ ಅವನತಿಯತ್ತ ಸಾಗುತ್ತಿರುವ ದವಸ ಭಂಡಾರಗಳನ್ನು ಉಳಿಸಬಹುದಾಗಿದೆ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಕಿಲನ್ ಗಣಪತಿ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ, ಹಾಗೂ ಕೊಡಗು ಉಪಾಧ್ಯಾಯರ ಸಹಕಾರ ಸ್ಟೋರ್ಸ್ ಮತ್ತು ಮುದ್ರಣಾಲಯ ನಿ., ವಿರಾಜಪೇಟೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಸಹಕಾರ ದವಸ ಭಂಡಾರಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಕಾರ್ಯದರ್ಶಿಗಳಿಗೆ ಸಹಕಾರ ಕಾಯ್ದೆ ಕಾನೂನು, ಲೆಕ್ಕಪರಿಶೋಧನೆ ಹಾಗೂ ಲೆಕ್ಕಪತ್ರ ನಿರ್ವಹಣೆ ಕುರಿತು ವಿರಾಜಪೇಟೆಯ ಕೊಡಗು ಉಪಾಧ್ಯಾಯರ ಸಹಕಾರ ಸ್ಟೋರ್ಸ್ ಮತ್ತು ಮುದ್ರಣಾಲಯದ ಸಭಾಂಗಣದಲ್ಲಿ ಏರ್ಪಡಿಸಲಾದ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಬ್ಯಾಂಕ್‍ನಿಂದ ದವಸ ಭಂಡಾರಗಳ ಕಾರ್ಯನಿರ್ವಹಣೆಗೆ ಬಹುಮಾನ ನೀಡಲಾಗುತ್ತದೆ. ಆದರೆ ಸಕಾಲದಲ್ಲಿ ಲೆಕ್ಕಪರಿಶೋಧನೆಯನ್ನು ನಡೆಸಲಾರದ ದವಸ ಭಂಡಾರಗಳು ಬಹುಮಾನದಿಂದ ವಂಚಿತರಾಗುತ್ತಿವೆ. ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ತಮ್ಮ ಸ್ವಂತ ಹಣದಿಂದ ಇಲಾಖೆಗಳಿಗೆ ಪದೇಪದೇ ಅಲೆದಾಡಿ ಸಂಘವನ್ನು ಕಾನೂನು ಚೌಕಟ್ಟಿನೊಳಗೆ ತರಲು ಬಹಳ ಪರಿಶ್ರಮ ಪಡುತ್ತಿದ್ದಾರೆ. ಡಿ.ಸಿ.ಸಿ. ಬ್ಯಾಂಕ್‍ನಿಂದ ಒಂದು ಹಂತದವರೆಗೆ ಮಾತ್ರ ನೆರವು ನೀಡಬಹುದಾಗಿದ್ದು ಸರ್ಕಾರದ ನೆರವಿನೊಂದಿಗೆ ಮಾತ್ರ ನಷ್ಟವನ್ನು ನೀಗಬಹುದಾಗಿದ್ದು ಈ ಕುರಿತು ಎಲ್ಲರೂ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಎ.ಕೆ.ಮನು ಮುತ್ತಪ್ಪ, ಕೊಡಗಿನ ದವಸ ಭಂಡಾರಗಳು ಭವ್ಯ ಇತಿಹಾಸ ಹೊಂದಿವೆ. ಆಡಳಿತ ನಿರ್ವಹಣೆ, ಸಿಬ್ಬಂದಿ ನೇಮಕಾತಿ, ಕಾಯ್ದೆ-ಕಾನೂನು, ಲೆಕ್ಕಪರಿಶೋಧನೆ ಇತ್ಯಾದಿ ಕುರಿತು ಜಿಲ್ಲೆಯ ಸಹಕಾರ ಸಂಘಗಳಿಗೆ ನಿರಂತರ ತರಬೇತಿ ನೀಡುತ್ತಿದ್ದು, ಅದರಲ್ಲಿ ಒಂದು ಕಾರ್ಯಕ್ರಮವನ್ನು ದವಸಭಂಡಾರಗಳಿಗೆ ನೀಡಲಾಗುತ್ತಿದೆ. ಕೊಡಗು ಅಭಿವೃದ್ಧಿಯತ್ತ ಸಾಗಲು ದವಸ ಭಂಡಾರಗಳ ಸ್ಥಾಪನೆ ಹಾಗೂ ಸಹಕಾರ ತತ್ವವೇ ಕಾರಣ ಎಂದು ಹೇಳಿದರು. ಅಂದು ಆರ್ಥಿಕ ಶಕ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ದವಸ ಭಂಡಾರಗಳು ಆಹಾರ ದವಸ ದಾನ್ಯಗಳನ್ನು ಸಾಲ ನೀಡುವ ಉದ್ದೇಶದಿಂದ ಸ್ಥಾಪಿಸಲ್ಪಟ್ಟಿವೆ. ಭತ್ತವನ್ನು ಸಾಲದ ರೂಪದಲ್ಲಿ ನೀಡಲು ಸ್ಥಾಪಿಸಿದ್ದ 100 ಕ್ಕೂ ಮಿಗಿಲಾದ ದವಸ ಭಂಡಾರಗಳು ಕ್ರಮೇಣ 95 ಕ್ಕೆ ಇಳಿದು, 76 ಕ್ರಿಯಾಶೀಲವಾಗಿದ್ದರೂ 54 ಮಾತ್ರ ಲಾಭದಲ್ಲಿವೆ. ಆದರೂ ಸುಮಾರು 25 ಕ್ಕೂ ಹೆಚ್ಚು ಸಂಸ್ಥೆಗಳು ಸ್ವತಂತ್ರ ಪೂರ್ವದಲ್ಲೇ ಸ್ಥಾಪನೆಗೊಂಡು ಇಂದು ಶತಮಾನೋತ್ಸವಕ್ಕೆ ಅರ್ಹವಾಗಿರುವುದು ಹೆಮ್ಮೆಯ ವಿಷಯವಾಗಿದೆ. ಕೆಲಸಗಾರರ ಕೊರತೆ, ಶುಂಠಿ ಕೃಷಿ, ಇತರೆ ಕಾರಣಗಳಿದ್ದರೂ ಸಹ ಇಂದು ತಾಂತ್ರಿಕತೆಯಿಂದಾಗಿ ಭತ್ತವು ನಷ್ಟದ ಬೆಳೆಯಲ್ಲ ಎಂದು ಪರಿಗಣಿಸಲ್ಪಟ್ಟಿದೆ. ಕಾಫಿಗೆ ಬಂಪರ್ ಬೆಲೆ ಬಂದಿದ್ದರೂ ಸಹ ಅದು ಶಾಶ್ವತ ಎಂದು ನಾವು ತಿಳಿಯಬಾರದು. ದರ ಏರಿದ್ದರೂ ಎಚ್ಚರಿಕೆಯ ಹೆಜ್ಜೆ ಅಗತ್ಯವಾಗಿದೆ. ಇದರೊಂದಿಗೆ ಇತರ ಪದಾರ್ಥಗಳ ಬೆಲೆ ಏರಿಕೆಯಾಗಿರುವುದನ್ನು ನಾವು ಅರಿಯಬೇಕು. ಇಂದು ದವಸ ಭಂಡಾರಗಳನ್ನು ಜೀವಂತವನ್ನಾಗಿರಿಸಲು, ಸಕ್ರೀಯವಾಗಿರಿಸಲು ಯೂನಿಯನ್‍ನಲ್ಲಿ ಹಲವು ಚಿಂತನೆಗಳನ್ನು ಮಾಡಲಾಗಿರುತ್ತದೆ. ಇಂದು ಅವೈಜ್ಞಾನಿಕ ರಸಗೊಬ್ಬರ ಬಳಕೆಯಿಂದ ಬಹಳಷ್ಟು ಜನರು ಕ್ಯಾನ್ಸರ್‍ನಂತರ ಮಾರಕ ಖಾಯಿಲೆಗೀಡಾಗುತ್ತಿದ್ದಾರೆ. ಸಾವಯವ ಕೃಷಿ ಇದಕ್ಕೆ ಪರ್ಯಾಯವಾಗಬಲ್ಲದು ಎಂದು ಅಭಿಪ್ರಾಯ ಹೊಂದಲಾಗಿದೆ. ಸಾವಯವ ಕೃಷಿಯ ಉತ್ಪನ್ನಗಳಿಗೆ ಅಂತರರಾಷ್ಟ್ರೀಯ ಮಾನ್ಯತೆಯನ್ನು ಹೊಂದಿದೆ. ಕರ್ನಾಟಕವು ಹಾಲು ಉತ್ಪಾದನೆಯನ್ನು ಅಗ್ರ ಸ್ಥಾನದಲ್ಲಿದ್ದರೂ ಕೊಡಗು ಜಿಲ್ಲೆ ಮಾತ್ರ ಹಾಲು ಖರೀದಿ ಜಿಲ್ಲೆಯಾಗಿದೆ. ಗೋಮೂತ್ರ, ಸಗಣಿ ಗೊಬ್ಬರಕ್ಕೆ ಹೆಚ್ಚಿನ ಬೆಲೆ ಇದೆ. ಆದುದರಿಂದ ಈ ನಿಟ್ಟಿನಲ್ಲಿ ಹೈನುಗಾರಿಕೆ, ದವಸ ಭಂಡಾರಗಳಿಗೆ ವರದಾನವಾಗಬಲ್ಲದು. ಆರ್ಥಿಕವಾಗಿ ಸದೃಢವಾಗಿರುವ ಸಂಘಗಳಲ್ಲಿ ವಿಶೇಷವಾಗಿ ಡಿ.ಸಿ.ಸಿ. ಬ್ಯಾಂಕ್‍ನಲ್ಲಿ ದವಸ ಭಂಡಾರಗಳಿಗೆ ಪ್ರಾತಿನಿಧ್ಯ ಹೆಚ್ಚಾಗಬೇಕು. ಯಾವುದೇ ಕಾರಣಕ್ಕೂ ದವಸ ಭಂಡಾರಗಳು ನಿಷ್ಟ್ರೀಯವಾಗಬಾರದೆಂದು ಲೆಕ್ಕಪರಿಶೋಧನಾ ಉಪನಿರ್ದೇಶಕರಲ್ಲಿ ಕೋರಿದರು. ದವಸ ಪದ್ಧತಿಯ ಲೆಕ್ಕ ಬಲ್ಲವರಿಂದ ಸಕಾಲದಲ್ಲಿ ಲೆಕ್ಕಪರಿಶೋಧನೆ ನಡೆಸಿಕೊಡಬೇಕಾಗಿ ಈ ಸಂದರ್ಭದಲ್ಲಿ ಇಂದ್ರಕುಮಾರ್, ಮಾಚಯ್ಯ ಕೋರಿದರು. ಲೆಕ್ಕಪರಿಶೋಧನೆ ಕುರಿತು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕಿ ಎಂ.ಎನ್. ಹೇಮಾವತಿ, ಲೆಕ್ಕಪತ್ರ ನಿರ್ವಹಣೆ ಕುರಿತು ಲೆಕ್ಕಪರಿಶೋಧನಾ ಹಿರಿಯ ಲೆಕ್ಕಪರಿಶೋಧಕರಾದ ವೇಣುಗೋಪಾಲ್, ಹಾಗೂ ಸಹಕಾರ ಕಾಯ್ದೆ-ಕಾನೂನು ಕುರಿತು ಕೆ.ಐ.ಸಿ.ಎಂ. ಉಪನ್ಯಾಸಕರಾದ ಎಸ್. ಮಹದೇವಪ್ಪರವರು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಯೂನಿಯನ್ ಉಪಾಧ್ಯಕ್ಷರಾದ ಪಿ.ಸಿ.ಮನು ರಾಮಚಂದ್ರ, ನಿರ್ದೇಶಕರಾದ ಕೆ.ಎಂ.ತಮ್ಮಯ್ಯ, ಪಿ.ಬಿ.ಯತೀಶ್, ಎ.ಎಸ್.ಶ್ಯಾಮ್‍ಚಂದ್ರ, ಯೂನಿಯನ್‍ನ ಮಾಜಿ ನಿರ್ದೇಶಕ ಕೆ.ಕೆ.ಮಂದಣ್ಣ, ಕೊಡಗು ಉಪಾಧ್ಯಾಯರ ಸಹಕಾರ ಸ್ಟೋರ್ಸ್‍ನ ಉಪಾಧ್ಯಕ್ಷ ಎ.ವಿ.ಮಂಜುನಾಥ್ ಉಪಸ್ಥಿತರಿದ್ದರು. ಕಗ್ಗೋಡ್ಲು ದವಸ ಭಂಡಾರದ ಕಾರ್ಯದರ್ಶಿ ಇಂದ್ರಕುಮಾರ್ ಪ್ರಾರ್ಥಿಸಿದರು. ಯೂನಿಯನ್ ವ್ಯವಸ್ಥಾಪಕಿ ಆರ್.ಮಂಜುಳ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ನಿರೂಪಿಸಿ ವಂದಿಸಿದರು. ಯೂನಿಯನ್ ಸಿಬ್ಬಂದಿ ಬಿ.ಸಿ. ಅರುಣ್ ಕುಮಾರ್ ಹಾಗೂ ಕೆ.ಎಸ್.ಸುರೇಶ್ ಕಾರ್ಯಕ್ರಮ ನಿರ್ವಹಣೆಗೆ ಸಹಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.