Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ರೋಟರಿ ಮಿಸ್ಟಿ ಹಿಲ್ಸ್ ತಂಡಕ್ಕೆ ಕಬ್ಬಡಿ ಚಾಂಪಿಯನ್ ಗರಿ*
Uncategorized

*ರೋಟರಿ ಮಿಸ್ಟಿ ಹಿಲ್ಸ್ ತಂಡಕ್ಕೆ ಕಬ್ಬಡಿ ಚಾಂಪಿಯನ್ ಗರಿ*

February 24, 20252 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಫೆ.24 NEWS DESK  : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ರೋಟರಿ ಜಿಲ್ಲಾ ಮಟ್ಟದ ಪ್ರಥಮ ವಷ೯ದ ಕಬ್ಬಡಿ ಪಂದ್ಯಾವಳಿಯಲ್ಲಿ ಮಿಸ್ಟಿ ಹಿಲ್ಸ್ ತಂಡವು ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ನಗರದ ಗಾಂಧಿ ಮೈದಾನದಲ್ಲಿ ಆಯೋಜಿತ ರೋಟರಿ ಜಿಲ್ಲೆ 3181 ನ ರೋಟರಿ ಸದಸ್ಯರಿಗಾಗಿನ ಕಬ್ಬಡಿ ಪಂದ್ಯಾಟದಲ್ಲಿ ಮಿಸ್ಟಿ ಹಿಲ್ಸ್ ತಂಡವು ತಂಡದನಾಯಕ ಕಪಿಲ್ ನೇತೖತ್ವದಲ್ಲಿ ಪಿರಿಯಾಪಟ್ಟಣ ಮಿಡ್ ಟೌನ್ ತಂಡವನ್ನು ಮಣಿಸಿ ಕಬ್ಬಡಿ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. 25 ಸಾವಿರ ನಗದು ಮತ್ತು ಟ್ಪೋಫಿಯನ್ನು ಮಿಸ್ಟಿ ಹಿಲ್ಸ್ ಪಡೆದುಕೊಂಡಿದೆ. ದ್ವಿತೀಯ ಬಹುಮಾನವನ್ನು ಪಿರಿಯಾಪಟ್ಟಣ ಮಿಡ್ ಟೌನ್ ತಂಡ ಪಡೆದುಕೊಂಡು 15 ಸಾವಿರ ರು. ನಗದು ಮತ್ತು ಟ್ರೋಫಿಯನ್ನು ಪಡೆದರೆ, ಸೆಂಟ್ರಲ್ ಪುತ್ತೂರು ತಂಡವು ತೖತೀಯ ಮತ್ತು ಹುಣಸೂರು ರೋಟರಿ ತಂಡವು ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಮಡಿಕೇರಿ ರೋಟರಿ ವುಡ್ಸ್ ತಂಡವು ಅತ್ಯಂತ ಶಿಸ್ತು ಬದ್ದ ತಂಡಕ್ಕಾಗಿನ ಪ್ರಶಸ್ತಿ ಪಡೆಯಿತು. ಆಲ್ ರೌಂಡರ್ ಆಟಗಾರ ಪ್ರಶಸ್ತಿಯನ್ನು ಪಿರಿಯಾಪಟ್ಟಣ ಮಿಡ್ ನ ಸುನೀಲ್ ಪಡೆದುಕೊಂಡರೆ, ಅತ್ಯುತ್ತಮ ಕ್ಯಾಚ್ ಪ್ರಶಸ್ತಿಯನ್ನು ಕುಲ್ಲೇಟಿರ ಅಜಿತ್ ನಾಣಯ್ಯ ತಮ್ಮದಾಗಿಸಿಕೊಂಡರು ಬೆಸ್ಟ್ ರೈಡರ್ ಪ್ರಶಸ್ತಿಯನ್ನು ಮಿಸ್ಟಿ ಹಿಲ್ಸ್ ತಂಡದ ನಾಯಕ ದುಗ್ಗಳ ಕಪಿಲ್ ಪಡೆದುಕೊಂಡರು. ನಗರದ ಕೊಡವ ಸಮಾಜದ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಬಹುಮಾನಗಳನ್ನು ರೋಟರಿ ಜಿಲ್ಲಾ ಗವನ೯ರ್ ವಿಕ್ರಂದತ್ತ ಮತ್ತು ನಿಯೋಜಿತ ಗವನ೯ರ್ ಸತೀಶ್ ಬೋಳಾರ್ ವಿತರಿಸಿದರು. ಈ ಸಂದಭ೯ ಮಾತನಾಡಿದ ವಿಕ್ರಂದತ್ತ, ಇದೇ ಮೊದಲ ಬಾರಿಗೆ ರೋಟರಿ ಜಿಲ್ಲೆಯಲ್ಲಿ ಆಯೋಜಿತ ಕಬ್ಬಡಿ ಪಂದ್ಯಾಟವನ್ನು ಮಿಸ್ಟಿ ಹಿಲ್ಸ್ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಿದೆ. ಮುಂದಿನ ವಷ೯ ಬಂಟ್ವಾಳ ರೋಟರಿ ಕ್ಲಬ್ ವತಿಯಿಂದ ಕಬ್ಬಡಿ ಪಂದ್ಯಾಟ ಆಯೋಜಿಸಲಾಗುತ್ತಿದೆ. ಅಂತರರಾಷ್ಟ್ರೀಯ ರೋಟರಿ ಸಂಸ್ಥೆಗೆ 120 ವಷ೯ಗಳು ತುಂಬಿರುವ ಈ ಸಂದಭ೯ ಕಬ್ಬಡಿಯ ಮೂಲಕ ಮತ್ತಷ್ಟು ಸಂಭ್ರಮ ಲಭಿಸಿದೆ ಎಂದು ಶ್ಲಾಘಿಸಿದರು. ರೋಟರಿ ಸದಸ್ಯರು ಪ್ರತೀ ವಷ೯ ನೀಡುವ ದೇಣಿಗೆಯು ವಿಶ್ವವ್ಯಾಪಿ ಸಾಮಾಜಿಕ ಸೇವಾ ಕಾಯ೯ಗಳ ಮೂಲಕ ಅತ್ಯುತ್ತಮ ಕಾಯ೯ಗಳಿಗೆ ವಿಶ್ವವ್ಯಾಪಿ ವಿನಿಯೋಗವಾಗುತ್ತಿದೆ ಎಂದರು. ಸಮಾಜದ ಸಂತೋಷವನ್ನು ಮಾತ್ರ ನೋಡಿ ಎಲ್ಲರೂ ಖುಷಿಯಾಗಿದ್ದಾರೆ ಎಂದು ನಂಬುವ ಬದಲಿಗೆ, ಸಮಾಜದಲ್ಲಿ ಇನ್ನೂ ಸಂತೋಷವನ್ನೇ ಕಾಣದೇ ಸಂಕಷ್ಟದಲ್ಲಿಯೇ ಇರುವ ಅನೇಕರ ಜೀವನದಲ್ಲಿ ರೋಟರಿ ಸದಸ್ಯರು ಬದಲಾವಣೆ ತರುವ ನಿಟ್ಟಿನಲ್ಲಿ ಕಾಯೋ೯ನ್ಮುಖರಾಗಬೇಕೆಂದು ವಿಕ್ರಂದತ್ತ ಸಲಹೆ ಮಾಡಿದರು. ನಾವು ಮತ್ತು ನಮ್ಮ ಕುಟುಂಬ ನೆಮ್ಮದಿಯಿಂದ ಇದ್ದ ಮಾತ್ರಕ್ಕೇ ಎಲ್ಲರೂ ನೆಮ್ಮದಿಯಿಂದ ಇದ್ದಾರೆ ಎಂದು ತಿಳಿಯುವ ಬದಲಿಗೆ ನೆಮ್ಮದಿಯಿಂದ ಇರದ ಜನರ ನೆಮ್ಮದಿಗೂ ಕಾರಣವಾಗುವಂತ ಕಾಯ೯ಯೋಜನೆ ಹಮ್ಮಿಕೊಂಡಾಗ ಅದುವೇ ನಿಜವಾದ ನೆಮ್ಮದಿಯಾಗಲಿದೆ ಎಂದರು. ಕಾಯ೯ಕ್ರಮದಲ್ಲಿ ರೋಟರಿ ಸಹಾಯಕ ಗವನ೯ರ್ ದೇವಣಿರ ಕಿರಣ್, ವಲಯ ಸೇನಾನಿ ಅನಿತಾ ಪೂವಯ್ಯ ಹಾಜರಿದ್ದರು. ಎಸ್ . ಎಂ. ಚೇತನ್ ಸಂಪಾದಕತ್ವದಲ್ಲಿ ಪ್ರಕಟಿತ ರೋಟೋ ಮಿಸ್ಟ್ ವಾತಾ೯ಸಂಚಿಕೆಯನ್ನು ಈ ಸಂದಭ೯ ಬಿಡುಗಡೆಗೊಳಿಸಲಾಯಿತು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ಸ್ವಾಗತಿಸಿ, ಕಾಯ೯ದಶಿ೯ ಕಟ್ಟೆಮನೆ ಸೋನಜಿತ್ ವಂದಿಸಿದ ಕಾಯ೯ಕ್ರಮವನ್ನು ಮಿಸ್ಟಿ ಹಿಲ್ಸ್ ನಿದೇ೯ಶಕ ಅನಿಲ್ ಹೆಚ್.ಟಿ. ಬಹುಮಾನ ಪ್ರಕಟಿಸಿದರು. ಕಬ್ಬಡಿ ಆಯೋಜನಾ ಸಮಿತಿ ಸಂಚಾಲಕ ಜಯಂತ್ ಪೂಜಾರಿ, ಸಹಸಂಚಾಲಕ ದುಗ್ಗಳ ಕಪಿಲ್, ರೋಟರಿ ಜಿಲ್ಲಾ ಕಾಯ೯ದಶಿ೯ ರಿತೇಶ್ ಬಾಳಿಗ, ರೋಟರಿ ವಲಯ 6 ರ ವಿವಿಧ ರೋಟರಿ ಸಂಸ್ಥೆಗಳಿಂದ ಸದಸ್ಯರು ಪಾಲ್ಗೊಂಡಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆಯಲ್ಲಿ ರಕ್ತದಾನ ಶಿಬಿರ : ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿ : ಶಾಸಕ ಎ.ಎಸ್.ಪೊನ್ನಣ್ಣ*
Next Article *ಮಕ್ಕಳ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷರುಗಳ ನೇಮಕ*

Related Posts

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

ಮೈಸೂರು, NEWS DESK ಫೆ. 11: ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಹೊರಹೊಮ್ಮುತ್ತಿದೆ. ಇಲ್ಲಿಂದ…

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.