Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿರುನಾಣಿಯಲ್ಲಿ ಕಸಾಪ ದತ್ತಿ ಕಾರ್ಯಕ್ರಮ : ಜ್ಞಾನ ಯಾರೂ ಕದಿಯದ ಸಂಪತ್ತು : ಉಳುವಂಗಡ ಕಾವೇರಿ ಉದಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿರುನಾಣಿಯಲ್ಲಿ ಕಸಾಪ ದತ್ತಿ ಕಾರ್ಯಕ್ರಮ : ಜ್ಞಾನ ಯಾರೂ ಕದಿಯದ ಸಂಪತ್ತು : ಉಳುವಂಗಡ ಕಾವೇರಿ ಉದಯ*

ಫೆಬ್ರವರಿ 25, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.25 NEWS DESK : ಜ್ಞಾನವನ್ನು ಕದಿಯಲು ಯಾರಿಗೂ ಸಾಧ್ಯವಿಲ್ಲ. ಅದು ಶಿಕ್ಷಣದಿಂದ ಬರುತ್ತದೆ. ಪ್ರೌಢಶಾಲಾ ಹಂತದಲ್ಲಿ ಉತ್ತಮ ಶಿಕ್ಷಣ ಸಿಕ್ಕಿ ಅಭ್ಯರ್ಥಿಗಳು ಮನಸ್ಸು ಮಾಡಿದರೆ ಯಾವ ಸಾಧನೆ ಬೇಕಾದರೂ ಮಾಡಬಹುದು ಎಂದು ಸಾಹಿತಿ, ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಉಳುವಂಗಡ ಕಾವೇರಿ ಉದಯ ನುಡಿದರು. ಬಿರುನಾಣಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕೈಬುಲಿರ ಪಾರ್ವತಿ ಬೋಪಯ್ಯ ದತ್ತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. 2023-24ನೇ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ನಡೆದ ಹತ್ತನೇ ತರಗತಿಯ ಕನ್ನಡ ಮಾಧ್ಯಮ ಪರಿಕ್ಷೆಯಲ್ಲಿ ಮೊದಲಿಗಳಾಗಿ ಬಂದ ಯು.ಅದವಿಯಾ ಸಾಕ್ಷಿ ಎಂದರು. ಮಾದಾಪುರದಂತಹ ಗ್ರಾಮೀಣ ಪ್ರದೇಶದ ಶ್ರೀಮತಿ ಚೆನ್ನಮ್ಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಜಿಲ್ಲೆಗೆ ಪ್ರಥಮ ಬಂದದ್ದು ನಿಜಕ್ಕೂ ಸಾಧನೆಯೇ ಸರಿ, ಇದು ಎಲ್ಲ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕು ಎಂದರು. ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸದ ಅವಶ್ಯಕತೆ ಕುರಿತು ಉಪನ್ಯಾಸ ನೀಡಿದರು. ದತ್ತಿದಾನಿಗಳ ಆಶಯದಂತೆ 2023-24ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ 10ನೇ ತರಗತಿಯ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಮಾದಾಪುರದ ಶ್ರೀಮತಿ ಚೆನ್ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅದವಿಯಾ ಯು. ಮೂಡಬಿದರೆಯ ಕಾಲೇಜಿನಲ್ಲಿ ಮುಂದಿನ ಶಿಕ್ಷಣ ಪಡೆಯುತಿದ್ದು, ಅವರ ಪರವಾಗಿ ಅವರ ಸಂಬಂದಿ , ಶಿಕ್ಷಕಿ ಕೆ.ಎ.ನಸೀಮ ಗೌರವ ಸ್ವೀಕರಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ಕೊಡಗು ಜಿಲ್ಲೆಯಲ್ಲಿ ಈಗಾಗಲೇ 35 ದತ್ತಿನಿದಿಗಳು ಸ್ಥಾಪಿತವಾಗಿದೆ ಎಲ್ಲ ದತ್ತಿ ಸ್ಥಾಪನೆಗಳ ಉದ್ದೇಶ ವಿದ್ಯಾರ್ಥಿಗಳಿಗೆ ಸಾಹಿತ್ಯಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ವಿಚಾರಗಳ ಪರಿಚಯ ಮಾಡುವುದಾಗಿದೆ. ಜಾನಪದ ಕಲೆಗಳ ಕುರಿತು, ಜಾನಪದ ಸಾಹಿತ್ಯದ ಕುರಿತು, ಕನ್ನಡ ಸಾಹಿತ್ಯದ ಬೆಳವಣಿಗೆ ಕುರಿತು, ಕನ್ನಡ ಮತ್ತು ಕೊಡವ ಭಾಷಾ ಸಂಬಂಧದ ಕುರಿತು, ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ಕುರಿತು, ಫೀಲ್ಡ್ ಮಾರ್ಷಲ್ ಕಾರಿಯಪ್ಪ, ಜನರಲ್ ತಿಮ್ಮಯ್ಯ ರವರ ಸಾಧನೆಗಳ ಕುರಿತು ಶೈಕ್ಷಣಿಕವಾಗಿ ಸಾಧನೆ ಮಾಡಿದ ಪ್ರೌಢಶಾಲೆ ಮತ್ತು ಪದವಿ ಪೂರ್ವ ವಿದ್ಯಾರ್ಥಿ ಸಾಧಕರ ಕುರಿತು ಉಪನ್ಯಾಸಗಳಿವೆ. ಕೈಬುಲಿರ ಪಾರ್ವತಿ ಬೋಪಯ್ಯ ಈಗಾಗಲೇ ಒಂದು ದತ್ತಿ ಸ್ಥಾಪಿಸಿದ್ದು, 10ನೇ ತರಗತಿಯಲ್ಲಿ ಕೊಡಗು ಜಿಲ್ಲೆಯ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಯನ್ನು ಗೌರವಿಸುವುದಾಗಿದೆ. ಅಲ್ಲದೇ ಇನ್ನೂ ಎರಡು 50,000 ರೂಗಳ ದತ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿಗೆ ಅರ್ಪಿಸಿದ್ದಾರೆ ಅವರಿಗೆ ಅಭಿನಂದನೆಗಳು ಎಂದರು.  ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿರುನಾಣಿ ಗ್ರಾ.ಪಂ ಅಧ್ಯಕ್ಷರಾದ ಅಮ್ಮತ್ತಿರ ರಾಜೇಶ್  ನಮ್ಮ ಗ್ರಾಮದಲ್ಲಿ ಸಾಹಿತ್ಯ ಪರಿಷತ್ತು ಕಾರ್ಯಕ್ರಮ ಏರ್ಪಡಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು. ಮುಂದಿನ ದಿನಗಳಲ್ಲಿ ಇಲ್ಲಿ ಕಾರ್ಯಕ್ರಮ ನಡೆಸುವ ಸಂದರ್ಭ ಪಂಚಾಯಿತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ನುಡಿದರು. ಪೊನ್ನಂಪೇಟೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಎ.ಬಿ.ಲಾಲ ಅಪ್ಪಣ್ಣ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯ ಸಣ್ಣ ಸಣ್ಣ ಹಳ್ಳಿಗಳಿಗೂ ಭೇಟಿ ನೀಡಿ ಕಾರ್ಯಕ್ರಮ ನೀಡುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳಲ್ಲಿ ಕನ್ನಡ ನಾಡು ನುಡಿಯ ಆಚಾರ ವಿಚಾರಗಳ ಸಂಸ್ಕೃತಿಯ ಅರಿವು ಮೂಡಿಸುತ್ತಿರುವುದು ಅಭಿನಂದನೆಯ ಎಂದರು.  ದತ್ತಿ ದಾನಿಗಳಾದ ಶ್ರೀಮತಿ ಕೈಬುಲಿರ ಪಾರ್ವತಿ ಬೋಪಯ್ಯ ಎರಡು ನೂತನ ದತ್ತಿ ಸ್ಥಾಪನೆ ಮಾಡಿದಕ್ಕಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಕೊಡಗು ಜಿಲ್ಲೆಯಲ್ಲಿ ಸಾಹಿತ್ಯ ಸೇವೆ ಮತ್ತು ಕ್ರೀಡಾ ಸಾಧಕರನ್ನು ಗುರುತಿಸಿ ಗೌರವಿಸುವ ಕುರಿತು ಈ ದತ್ತಿ ಸ್ಥಾಪನೆ ಮಾಡಿರುವುದಾಗಿ ತಿಳಿಸಿದರು.
ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ಕನ್ನಡ ನಾಡು ನುಡಿ ಕನ್ನಡ ಧ್ವಜದ ಇತಿಹಾಸದ ಕುರಿತು ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಬಿ.ಬಿ ಸರಸ್ವತಿ ಈ ಕಾರ್ಯಕ್ರಮದ ನೆನಪಿಗೆ ನಡೆಸಿದ ಪ್ರಬಂದ ಸ್ಪರ್ಧೆ ಮತ್ತು ಗೀತ ಗಾಯನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು. ವೇದಿಕೆಯಲ್ಲಿ ಶ್ರೀ ಭಗವತಿ ದೇವಸ್ಥಾನ ಸಮಿತಿಯ ಅಧ್ಯಕ್ಷರು ಮಾಜಿ ಸೈನಿಕರೂ ಆದ ಕಾಳಿಮಾಡ ಮುತ್ತಣ್ಣ, ತಾಲೂಕು ಪಂಚಾಯತಿಯ ಮಾಜಿ ಸದಸ್ಯರಾದ ಬೊಳ್ಳೆರ ಪೊನ್ನಪ್ಪ, ಹುದಿಕೇರಿ ಹೋಬಳಿ ಗೌರವ ಕಾರ್ಯದರ್ಶಿಗಳಾದ ಕುಪ್ಪಣ್ಣಮಾಡ ನಂಜಮ್ಮ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಾನಂಗಡ ಅರುಣ್ ರವರು ಮಾತನಾಡುತ್ತ ಮುಂದಿನ ದಿನಗಳಲ್ಲಿ ಹುದಿಕೇರಿ ಹೋಬಳಿ ವ್ಯಾಪ್ತಿಯಲ್ಲಿ ಗ್ರಾಮಸಿರಿ ಕಾರ್ಯಕ್ರಮ ಮಾಡುವ ಮೂಲಕ ಜಿಲ್ಲೆಯ ಜಾನಪದ, ಕೃಷಿಕ ವರ್ಗದ ಆಚರಣೆ, ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದು, ಸಾಧಕರನ್ನು ಗೌರವಿಸುವುದು ಮತ್ತು ಸಮಾಜದಲ್ಲಿ ಸೇವೆ ಸಲ್ಲಿಸಿ ಕಣ್ಮರೆಯಾದವರನ್ನು ನೆನಪಿಸಿಕೊಳ್ಳುವ ಕಾರ್ಯಕ್ರಮವನ್ನು ಮಾಡುವುದಾಗಿ ತಿಳಿಸಿದರು. ಪ್ರಬಂಧ ಸ್ಪರ್ಧೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿನಿ ಸೌಮ್ಯ ಪಿ.ಎಸ್.ಪ್ರಥಮ ಸ್ಥಾನ ಪಡೆದರೆ, 6ನೇ ತರಗತಿಯ ಜಿ.ಜ್ಯೋತಿ ದ್ವಿತೀಯ ಸ್ಥಾನ ಪಡೆದರು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ
ಪ್ರಬಂಧ ಸ್ಪರ್ಧೆಯಲ್ಲಿ ತಾರುಣ್ಯ ಪ್ರಥಮ, ತಾನಿಯ ದ್ವಿತೀಯ ಪಡೆದರು. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನಡೆದ ಕನ್ನಡ ಗೀತೆ ಸ್ಪರ್ಧೆಯಲ್ಲಿ ಸುಜ್ಯೋತಿ ಶಾಲೆಯ ಮೋಕ್ಷ ಹೆಚ್. ಸಿ. ಪ್ರಥಮ, ಪೂವಮ್ಮ ದ್ವಿತೀಯ ಪಡೆದರು. ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನಡೆದ
ಕನ್ನಡ ಗೀತೆ ಸ್ಪರ್ಧೆಯಲ್ಲಿ ಸುಜ್ಯೋತಿ ಶಾಲೆಯ ಪೊನ್ನಣ್ಣ ಪ್ರಥಮ ಸ್ಥಾನ, ಸ. ಹಿ. ಪ್ರಾಥಮಿಕ ಶಾಲೆ ಬಿರುನಾಣಿಯ ತನುಜಾ ದ್ವಿತೀಯ ಸ್ಥಾನ ಪಡೆದರು.
ಸಮೂಹ ರೈತ ಗೀತಾ ಸ್ಪರ್ಧೆಯಲ್ಲಿ ಸುಜ್ಯೋತಿ ಶಾಲೆಯ ವಿದ್ಯಾರ್ಥಿಗಳಾದ ರಿಜಮ್ ಮೇದಪ್ಪ, ಪ್ರಚಿತ್, ಧನಿಕ್ ಪೊನ್ನಣ್ಣ ಪ್ರಥಮ ಸ್ಥಾನ ಪಡೆದರೆ
ಸ. ಹಿ. ಪ್ರಾಥಮಿಕ ಶಾಲೆ ಬಿರುನಾಣಿ ಶಾಲೆಯ ವಿದ್ಯಾರ್ಥಿಗಳಾದ ತನುಜಾ, ಸೌಮ್ಯ, ಜ್ಯೋತಿ , ದಿವ್ಯ ದ್ವಿತೀಯ ಸ್ಥಾನ ಪಡೆದರು. ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ತಾಲ್ಲೂಕು ಕೆಸಪ್ಪ ನಿರ್ದೇಶಕರಾದ ಬುಟ್ಟಿಯಂಡ ಸುನಿತ ಗಣಪತಿಹುದಿಕೇರಿ ಹೋಬಳಿ ಕಸಾಪ ಗೌರವ ಕೋಶಾಧಿಕಾರಿ ಶ್ರೀಮತಿಅಣ್ಣಳಮಾಡ ಭವ್ಯ, ಸಂಘಟನಾ ಕಾರ್ಯದರ್ಶಿ ಶ್ರೀಮತಿ ಕರ್ತಮಾಡ ಪಾರ್ವತಿ ವಿಜಯ, ಸದಸ್ಯರುಗಳಾದ ಬುಟ್ಟಿಯಂಡ ರೋಹಿಣಿ, ಧರಣಿ, ಸಬಿತಾ, ಸದಕುಮಾರ್, ಅರುವತ್ತೊಕ್ಲುವಿನ ಕೆ.ಪಿ ಅಶ್ರಫ್, ಶಾಲಾ ಅದ್ಯಾಪಕರು, ಸಾರ್ವಜನಿಕರು ಉಪಸ್ಥಿತರಿದ್ದರು. ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ನಾಡಗೀತೆ ಮತ್ತು ರೈತ ಗೀತೆ ಗಾಯನ ಹಾಗೂ ಸುಜ್ಯೋತಿ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ಏರ್ಪಡಿಸಲಾಗಿತ್ತು
ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ, ಕುಪ್ಪಣಮಾಡ ನಂಜಮ್ಮ ದೇವಯ್ಯ ಸ್ವಾಗತಿಸಿದರು. ಅದ್ಯಾಪಕಿ ಶ್ರಿಮತಿ ಚೇನಂಡ ಅಮಿತ್ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.