
ಸುಂಡಿಕೊಪ್ಪ ಫೆ.27 NEWS DESK : ಮಹಾ ಶಿವರಾತ್ರಿ ಪ್ರಯುಕ್ತ ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ, ಆರಾಧನೆ ನಡೆಯಿತು. ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಸಂಜೆ ಬೈತೂರಪ್ಪ ಭಜನಾ ಮಂಡಳಿಯಿಂದ 3 ಗಂಟೆಗಳ ಕಾಲ ಭಕ್ತಿಗೀತೆ ಮತ್ತು ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿಯ ಮಹಾಪೂಜೆಯ ಬಳಿಕ ನೇರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಪೂಜಾ ಧಾರ್ಮಿಕ ವಿಧಿ ವಿಧಾನಗಳನ್ನು ಪ್ರಧಾನ ಅರ್ಚಕ ರಾಘವೇಂದ್ರಭಟ್ ಮತ್ತು ಸಹಾಯಕರಾಗಿ ನರಸಿಂಹಭಟ್ ನೇರವೇರಿಸಿದರು. ದೇವಾಲಯ ಟ್ರಸ್ಟ್ ಅಧ್ಯಕ್ಷ ಕೊಕ್ಕಲೆರ ಪೂಣ್ಣಚ್ಚ, ಕಾರ್ಯದರ್ಶಿ ಬಿ.ಸಿ.ದಿನೇಶ್, ಟ್ರಸ್ಟಿ ಕೆ.ಎಸ್.ಮಂಜುನಾಥ್, ಪಾರುಪಾತ್ಯದಾರರಾದ ಅಕ್ಕಪಂಡ ಎ.ರಾಜೇಂದ್ರ, ಮುಕ್ಕಾಟಿ ಅಡಿಕೇರ ಸುಭಾಷ್, ಮಂಡುವಂಡ ಪುನೀತ್ ಪೂಣ್ಣಚ್ಚ ಸೇರಿದಂತೆ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸಮೀಪದ ಕಂಬಿಬಾಣೆ ಮ್ಯಾಗಡೂರ್ ವಿಶ್ವನಾಥ ದೇವಾಲಯ, ನಾಕೂರು ಶಿವ ದೇವಾಲಯ, ಕೆದಕಲ್ ಭದ್ರಕಾಳಿ ದೇವಾಲಯಗಳಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನಡೆದವು.









