Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗುಮ್ಮನಕೊಲ್ಲಿಯಲ್ಲಿ ಉಪನ್ಯಾಸ ಕಾರ್ಯಕ್ರಮ : ಜಾನಪದ ಅತ್ಯಂತ ಶ್ರೀಮಂತ ಸಂಸ್ಕೃತಿ : ಹಂಡ್ರಂಗಿ ನಾಗರಾಜ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗುಮ್ಮನಕೊಲ್ಲಿಯಲ್ಲಿ ಉಪನ್ಯಾಸ ಕಾರ್ಯಕ್ರಮ : ಜಾನಪದ ಅತ್ಯಂತ ಶ್ರೀಮಂತ ಸಂಸ್ಕೃತಿ : ಹಂಡ್ರಂಗಿ ನಾಗರಾಜ್*

ಫೆಬ್ರವರಿ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಫೆ.28 NEWS DESK : ಜಾನಪದ ಗೀತೆಗಳನ್ನು ರಚಿಸಿದವರು ಯಾರೆಂದು ಎಲ್ಲೂ ಉಲ್ಲೇಖವಾಗಿರುವುದಿಲ್ಲ. ವಿಶ್ವದಲ್ಲೇ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ ಎಂದು ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಂಡ್ರಂಗಿ ನಾಗರಾಜ್ ತಿಳಿಸಿದರು. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ  ಕುಶಾಲನಗರ ಸಮೀಪದ ಗುಮ್ಮನಕೊಲ್ಲಿಯ ಬೃಂದಾವನ ಬಡಾವಣೆಯಲ್ಲಿ ಆಯೋಜಿಸಿದ್ದ ಚೆರಿಯಮನೆ ದಿವಂಗತ ಕೃಷ್ಣಪ್ಪ ಮರಗೋಡು ದತ್ತಿ ಕಾರ್ಯಕ್ರಮದ ಅಂಗವಾಗಿ ಜಾನಪದ ಕುರಿತು ಉಪನ್ಯಾಸ ನೀಡಿ ಮಾತನಾಡಿದ ಅವರು, ಜಾನಪದವನ್ನು ಈಗಲೂ ಗ್ರಾಮೀಣ ಭಾಗಗಳಲ್ಲಿ ಕೇಳಬಹುದು. ಇದನ್ನು ಮನುಷ್ಯ ಜೀವನದ ಎಲ್ಲ ಘಟ್ಟಗಳಲ್ಲೂ ಬಳಸುತ್ತಾರೆ. ಸುಖ, ದುಃಖಗಳ ಸಂದರ್ಭಗಳ ಅನುಸಾರ ಸ್ಥಳದಲ್ಲೇ ಗೀತೆಗಳನ್ನು ರಚಿಸಿ ಹಾಡುವ ಅದ್ಬುತ ಜ್ಞಾನ ಹೊಂದಿರುವ ಜನರನ್ನು ಕಾಣಬಹುದು. ಜಾನಪದ ಗೀತೆಗಳನ್ನು ಹೆಚ್ಚಾಗಿ ಗ್ರಾಮೀಣ ಜನರು ಬಳಸಿ, ತಾನು ಮಾಡುವ ಕೆಲಸಗಳಲ್ಲಿ ತನ್ಮಯತೆ ಮತ್ತು ಶಕ್ತಿ ಪಡೆಯುತ್ತಾರೆ ಅಂತಹ ಶ್ರೇಷ್ಠ ಶಕ್ತಿಯಿದೆ ಎಂದರು.
ಜನಪದ ಮತ್ತು ಜಾನಪದ ಎನ್ನುವ ಎರಡು ವಿಧವನ್ನು ವಿವರಿಸಿದರು. ಇದು ಸಂಪ್ರದಾಯದ ಘೋಷಣೆಯಿಲ್ಲದೆ ತನ್ನಿಂದ ತಾನೆ ಹರಿದು ಬಂದು, ಮಣ್ಣಿನ ಸಂಸ್ಕೃತಿಯ ಸಾರವನ್ನು ಜಾನಪದ ಶೈಲಿಯಲ್ಲಿ ವಿವರಿಸುತ್ತಾರೆ ಎಂದು ವಿವರಿಸಿದರು. ನಿವೃತ್ತ ಶಿಕ್ಷಕಿ ಉಮಾದೇವಿ ಸೋಮಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕರ್ನಾಟಕದಲ್ಲಿ ಜನಸಿದ ಜಾನಪದ ಸಂಸ್ಕೃತಿ ವಿಶ್ವದ ಅನೇಕ ಭಾಷೆಗಳಿಗೆ ಭಾಷಾಂತರವಾಗಿ ಎಲ್ಲರ ಗಮನ ಸೆಳೆಯುವ ಅಗಾಧ ಶಕ್ತಿಯಿದೆ. ಅನಕ್ಷಸ್ಥರು ರಚಿಸಿ, ಹಾಡುವ ಗೀತೆಗಳಲ್ಲಿ ಅನೇಕ ಅರ್ಥಗಳು ಇರುತ್ತವೆ. ಹುಟ್ಟಿನಿಂದ ಸಾವಿನ ತನಕ ಮನುಷ್ಯ ಜೀವನವನ್ನು ಕೇವಲ 2 ರಿಂದ 3 ಪದ್ಯಗಳಲ್ಲಿ ವಿವರಿಸುವ ತಾಕತ್ತು ಇರುತ್ತದೆ ಎಂದು ಶ್ಲಾಘಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ  ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್  ಕನ್ನಡ ಸಾರಸತ್ವ ಲೋಕದಲ್ಲಿ ಜಾನಪದಕ್ಕೆ ವಿಶೇಷ ಸ್ಥಾನಮಾನವಿದೆ. ಇಲ್ಲಿಯ ಆಚಾರ ವಿಚಾರಗಳನ್ನು ವಿಶ್ವಕ್ಕೆ ಪರಿಚಯಿಸಿದ ಹೆಗ್ಗಳಿಕೆಯಿದೆ. ಕನ್ನಡ ಭಾಷೆಯ ಶ್ರೇಷ್ಠತೆಯನ್ನು ಗಮನಿಸಿದ ಹಲವು ವಿದೇಶಿಯರು ಅಧ್ಯಯನ ಮಾಡಿರುವ ಹಲವು ಉದಾಹರಣೆಗಳು ಇವೆ. ಇಲ್ಲಿಯ ಶ್ರೇಷ್ಠತೆಗಾಗಿ ಸಾಹಿತ್ಯ ಲೋಕದ ಅತ್ಯುನ್ನತ 8 ಜ್ಞಾನಪೀಠ ಪ್ರಶಸ್ತಿ ಲಾಭಿಸಿರುವುದೇ ಸಾಕ್ಷಿ ಎಂದು ಕೊಂಡಾಡಿದರು. ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ.ಎನ್.ದೇವರಾಜ್ ಪಾಲ್ಗೊಂಡಿದ್ದರು. ಕಾರ್ಯಕ್ರಮ ಅಂಗವಾಗಿ ಬಡಾವಣೆ ನಿವಾಸಿಗಳಾದ ಉಮಾವತಿ, ವನಿತಾ, ರಾಣಿ, ಲೀಲಾ ಜಾನಪದ ಗೀತೆಗಳನ್ನು ಪ್ರಸ್ತುತಪಡಿಸಿದರು. ಯುವ ಪೀಳಿಗೆಯ ಕೆಲವರು ಜಾನಪದ ನೃತ್ಯಗಳನ್ನು ಪ್ರದರ್ಶನ ನೀಡಿದರು.  ಅನುಸೂಯ ಶಿವಣ್ಣ, ಮೀನಾಕ್ಷಿ, ಪೂವಯ್ಯ ಮತ್ತು ಕಲ್ಲೂರು ನಾಣಯ್ಯ ಅವರುಗಳು ತಮ್ಮ ಮನೆಯಲ್ಲಿ ಇದ್ದ ಪುರಾತನ ಕಾಲದ ಪರಿಕರಗಳ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.  ಭತ್ತ, ರಾಗಿ, ಸಗಣಿಯ ರಾಶಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ತಂದಿತ್ತು. ಎಂ.ಎನ್.ಕಾಳಪ್ಪ, ಜಗನ್ನಾಥ್, ಮಹೇಂದ್ರ, ಆಕಾಶ್, ಕಸಾಪ ಪ್ರಧಾನ ಕಾರ್ಯದರ್ಶಿ ಶೈಲಾ, ಖಜಾಂಚಿ ಕೆ.ವಿ.ಉಮೇಶ್, ನಿರ್ದೇಶಕಿ ಬಿ.ಬಿ.ಹೇಮಲತಾ, ಹೆಬ್ಬಾಲೆ ಹೋಬಳಿ ಘಟಕದ ಅಧ್ಯಕ್ಷ ಎಂ.ಎನ್.ಮೂರ್ತಿ, ಕಾರ್ಯದರ್ಶಿ ಸುಬ್ರಮಣಿ ಇತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.