Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯ ಬಜೆಟ್ : ಕೊಡಗಿನ ಮೂಲಭೂತ ಸೌಕರ್ಯಗಳಿಗೆ ಆದ್ಯತೆ : ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಲ : ಎಸ್‍ಡಿಪಿಐ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜ್ಯ ಬಜೆಟ್ : ಕೊಡಗಿನ ಮೂಲಭೂತ ಸೌಕರ್ಯಗಳಿಗೆ ಆದ್ಯತೆ : ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಲ : ಎಸ್‍ಡಿಪಿಐ ಆಗ್ರಹ*

ಮಾರ್ಚ್ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.1 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಮಾ.7 ರಂದು ಮಂಡಿಸುವ ಬಜೆಟ್ ನಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಲ ತುಂಬಬೇಕು ಹಾಗೂ ಕೊಡಗಿನ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ‘ಕೊಡಗು ಜಿಲ್ಲೆಯ ಜನತಾ ಬಜೆಟ್-2025’ ಎಂಬ ಎಸ್‍ಡಿಪಿಐಯ ಕೈಪಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್, ‘ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್-2025’ ಎನ್ನುವ ಬೇಡಿಕೆಗಳ ಕೈಪಿಡಿಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಬಿಡುಗಡೆ ಮಾಡಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದೆ ಎಂದರು.
:: ಕೊಡಗು ವಿವಿ ಉಳಿಸಿ ::  ಕೊಡಗು ವಿಶ್ವ ವಿದ್ಯಾಲಯ ಸೇರಿದಂತೆ ರಾಜ್ಯದ ಒಟ್ಟು 9 ನೂತನ ವಿವಿಗಳನ್ನು ಮುಚ್ಚುವ ದೂರದೃಷ್ಟಿ ರಹಿತವಾದ ಚಿಂತನೆಯನ್ನು ಸರ್ಕಾರ ಮಾಡಿದೆ. ಶಿಕ್ಷಣ ಕ್ಷೇತ್ರದ ಪ್ರಗತಿಯ ಮೂಲಕ ಅಭಿವೃದ್ಧಿಯ ಪಥದಲ್ಲಿ ಸಾಗಬೇಕಾದ ಸರ್ಕಾರ ವಿವಿಗಳನ್ನು ಮುಚ್ಚುವ ನಿರ್ಧಾರಕ್ಕೆ ಬಂದಿರುವುದು ಸರಿಯಲ್ಲ. ಕೊಡಗು ವಿವಿ ರದ್ದುಗೊಳಿಸುವ ಸಚಿವ ಸಂಪುಟ ಸಮಿತಿಯ ಪ್ರಸ್ತಾಪವನ್ನು ಕೈಬಿಡಬೇಕೆಂದು ಆಗ್ರಹಿಸಿದರು.
:: ಕಾನೂನು ಕಾಲೇಜು ಬೇಕು ::  ಕೊಡಗಿನ ಆಸಕ್ತ ವಿದ್ಯಾರ್ಥಿಗಳು ಕಾನೂನಿನ ಶಿಕ್ಷಣವನ್ನು ಪಡೆಯುವ ಸಲುವಾಗಿ ದೂರದೂರುಗಳನ್ನು ಅವಲಂಬಿಸಬೇಕಾಗಿದೆ. ಆದ್ದರಿಂದ ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಜೆಟ್‍ನಲ್ಲಿ ಕೊಡಗಿಗೊಂದು ಕಾನೂನು ಕಾಲೇಜು ಘೋಷಿಸಬೇಕು. ಐಪಿಎಸ್, ಐಎಎಸ್ ಮತ್ತು ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರಿ ತರಬೇತಿ ಕೇಂದ್ರವನ್ನು ಪ್ರಾರಂಭಿಸಬೇಕೆಂದು ಒತ್ತಾಯಿಸಿದರು. ಈ ಹಿಂದಿನ ಬಜೆಟ್‍ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಶೇ.4 ಹಣಕಾಸನ್ನು ಮೀಸಲಿಡಲಾಗಿತ್ತು, ಪ್ರಸ್ತುತ ಶೇ.15 ರಷ್ಟು ಹಣವನ್ನು ಒದಗಿಸಬೇಕು. ಮಡಿಕೇರಿಯಲ್ಲಿ ನೂತನ ಎಂಆರ್‍ಐ ಸ್ಕ್ಯಾನಿಂಗ್ ಅಳವಡಿಸಿದ್ದರು, ರೋಗಿಗಳು ಸೌಲಭ್ಯಕ್ಕಾಗಿ ಮೂರು ನಾಲ್ಕು ವಾರಗಳ ಕಾಲ ಕಾಯಬೇಕಾದ ಪರಿಸ್ಥಿತಿ ಇದೆ. ಇಲ್ಲಿನ ಸಮಸ್ಯೆಗೆ ಪರಿಹಾರ ಒದಗಿಸುವ ಅಗತ್ಯವಿದೆ. ಕೊಡಗು ಜಿಲ್ಲೆಯಲ್ಲಿ ಕ್ಯಾನ್ಸರ್ ಸೆಂಟರ್ ತೆರೆಯಲು ಬಜೆಟ್‍ನಲ್ಲಿ ಅಗತ್ಯ ಅನುದಾನ ಒದಗಿಸಬೇಕು. ಇತ್ತೀಚಿನ ದಿನಗಳಲ್ಲಿ ನವಜಾತ ಶಿಶುಗಳ ಮರಣ ಪ್ರಕರಣಗಳು ರಾಜ್ಯದ ವಿವಿಧೆಡೆ ಹೆಚ್ಚಾಗುತ್ತಿದೆ. ಇಂತಹ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ ‘ಶಿಶು ಪಾಲನಾ ಕೇಂದ್ರ’ವನ್ನು ಕೊಡಗಿನಲ್ಲಿ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹೃದಯಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಗೆ ದೂರದ ಬೆಂಗಳೂರು ಮೊದಲಾದ ನಗರ ಪ್ರದೇಶಗಳನ್ನು ಕೊಡಗಿನ ಜನತೆ ಅವಲಂಬಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೋಗಗಳಿಗೂ ಸೂಕ್ತ ಚಿಕಿತ್ಸೆ ದೊರಕುವಂತಹ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಜಿಲ್ಲೆಗೊಂದು ಏರ್ ಅಂಬ್ಯುಲೆನ್ಸ್ ಕಲ್ಪಿಸಬೇಕೆಂದು ಅಮಿನ್ ಮೊಹಿಸಿನ್ ಆಗ್ರಹಿಸಿದರು.
:: ಭೂ ಗುತ್ತಿಗೆ ರದ್ದು ಮಾಡಿ ::  ಜಿಲ್ಲೆಯ ಭೂ ಮಾಲೀಕರು ಒತ್ತುವರಿ ಮಾಡಿದ ಭೂಮಿಯನ್ನು, ಭೂ ಗುತ್ತಿಗೆಯ ಆಧಾರದಲ್ಲಿ ನೀಡುವ ಆದೇಶವನ್ನು ರದ್ದು ಪಡಿಸಿ, ಆ ಭೂಮಿಯನ್ನು ಭೂ ರಹಿತರಿಗೆ ವಿತರಿಸಬೇಕು. ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಈ ಹಿಂದಿನಿಂದಲು ಕೊಡಗಿಗೆ ರೈಲ್ವೆ ಸಂಪರ್ಕದ ಪ್ರಸ್ತಾಪಗಳಾಗುತ್ತಿದ್ದರು ಅವು ಕಾರ್ಯಗತವಾಗಿಲ್ಲ. ಈ ಹಿನ್ನೆಲೆ ರೈಲ್ವೆ ಸಂಪರ್ಕಕ್ಕೆ ಒತ್ತು ನೀಡಲು ರಾಜ್ಯ ಸರ್ಕಾರ ಮುಂದಾಗಬೇಕು. ಕಾಡಾನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ, ಮುಂಗಾರಿನ ಅನಾಹುತಗಳ ತಡೆಗೆ ನದಿ ತೊರೆಗಳ ಹೂಳೆತ್ತಲು ಕ್ರಮ, ಕೊಡಗಿನ ಪ್ರವಾಸೋದ್ಯಮದ ಅಭಿವೃದ್ಧಿಗೆ 5 ಸಾವಿರ ಕೊಟಿ ರೂ.ಗಳನ್ನು ಮೀಸಲಿಡಬೇಕು. ಜಿಲ್ಲೆಯ ತಾಲ್ಲೂಕು ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು, ಮಸೀದಿಯ ಇಮಾಮ್, ಮೋಝಿನ್‍ಗಳ ಮಾಸಾಶನ ಹೆಚ್ಚಿಸಬೇಕೆಂದು ಒತ್ತಾಯಿಸಿದರು.
:: ಸಂಸತ್-ಮೂರು ವಿಧಾನ ಸಭಾ ಕ್ಷೇತ್ರ ಒದಗಿಸಿ ::  ಕೊಡಗಿಗೆ ಪ್ರತ್ಯೇಕವಾದ ಸಂಸತ್ ಸ್ಥಾನವನ್ನು ಒದಗಿಸಲು ರಾಜ್ಯ ಸರ್ಕಾರ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಮತ್ತು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳನ್ನು ಈ ಹಿಂದಿನಂತೆ ಮೂರು ವಿಧಾನಸಭಾ ಕ್ಷೇತ್ರಗಳನ್ನಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದರು. ಸುದ್ದಿಗೋಷ್ಠಿಯಲ್ಲಿ ಎಸ್‍ಡಿಪಿಐ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ, ಉಪಾಧ್ಯಕ್ಷ ಎಂ.ಕೆ.ಮನ್ಸೂರ್ ಆಲಿ, ಮಾಜಿ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕಾರ್ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ಮೇರಿ ವೇಗಸ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.