
ಮಡಿಕೇರಿ ಮಾ.3 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಡಗು ಜಿಲ್ಲಾ ಕಾರಾಗೃಹದ ಸಂದರ್ಶಕರ ಸಮಿತಿಯ ನಾಮ ನಿರ್ದೇಶಿತ ಸದಸ್ಯರನ್ನಾಗಿ ಹನೀಫ್ ಕೊರ್ತಿ, ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಕೆ.ಆರ್ ಹಾಗೂ ವಿಮಲ ಹೆಚ್.ಬಿ ಅವರನ್ನು ಆಯ್ಕೆ ಮಾಡಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಆದೇಶಿಸಿದ್ದಾರೆ. ಹಿರಿಯ ಕಾಂಗ್ರೆಸ್ಸಿಗ ಹನೀಫ್ ಕೊರ್ತಿ ಅವರು 5ನೇ ಬಾರಿಗೆ ನಾಮ ನಿರ್ದೇಶಿತ ಸದಸ್ಯರಾಗಿದ್ದಾರೆ.









