
ವಿರಾಜಪೇಟೆ ಮಾ.4 NEWS DESK : ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಹಾಗೂ ಅಲ್ಪಸಂಖ್ಯಾತರ ಸಮಿತಿ ವತಿಯಿಂದ ‘ಅಲ್ಪಸಂಖ್ಯಾತರ ಕಲ್ಯಾಣವನ್ನು ಉತ್ತೇಜಿಸುವುದು’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೊಡಗು ಜಿಲ್ಲೆ ಅಲ್ಪಸಂಖ್ಯಾತರ ಸಮಿತಿಯ ಅಧ್ಯಕ್ಷ ಹನೀಫ್ ಮಾತನಾಡಿ, ವಿದ್ಯಾರ್ಥಿಗಳು ಅಲ್ಪಸಂಖ್ಯಾತರಿಗಿರುವ ವಿಶೇಷ ಪ್ರೋತ್ಸಾಹ ಧನವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಸಮಿತಿಯ ಸಂಚಾಲಕ ಸುಮಯ ತಬಸುಮ್ ಹಾಗೂ ಐಕ್ಯೂಎಸಿ ಸಹ ಚಂಚಾಲಕ ಡಾ.ಕೆ.ಬಸವರಾಜು, ಕಾರ್ಯಕ್ರಮ ನಿರ್ವಹಿಸಿದ ವಿದ್ಯಾರ್ಥಿಗಳಾದ ಸುಹೈರ, ನಿಶಾನ್ ಜೋಸೆಫ್, ಸಾದಿಯ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಾದ ಕೆ.ಎಸ್. ಕಾರ್ಯಪ್ಪ, ಕೆ.ಜಿ.ಧನ್ಯ ಹಾಗೂ ಉಪನ್ಯಾಸಕರು ಪಾಲ್ಗೊಂಡಿದ್ದರು.









