


ಸಿದ್ದಾಪುರ ಮಾ.5 NEWS DESK : ಗುಹ್ಯ ಗ್ರಾಮದ ತೋಟವೊಂದರ ಲೈನ್ ಮನೆಯಲ್ಲಿದ್ದ ನಾಗರಹಾವನ್ನು ಉರಗ ರಕ್ಷಕ ಸುರೇಶ್ ಪೂಜಾರಿ ರಕ್ಷಿಸಿದ್ದಾರೆ. ತೋಟದ ರೈಟರ್ ದೇವಯ್ಯ ಹಾವು ಇರುವ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ಸುರೇಶ್ ಪೂಜಾರಿ ಐದು ಅಡಿ ಉದ್ದದ ನಾಗರಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಮಾಲ್ದಾರೆ ಅರಣ್ಯಕ್ಕೆ ಬಿಟ್ಟರು. ಯಾರು ಕೂಡ ಹಾವುಗಳನ್ನು ಕೊಲ್ಲಬೇಡಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ನೀರು ಅರಸಿ ಮನೆಯ ಹತ್ತಿರ ಹಾವುಗಳು ಬರುತ್ತವೆ ಹಾವು ಕಂಡುಬಂದಲ್ಲಿ ತಕ್ಷಣವೇ ಉರಗ ರಕ್ಷಕರಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.