Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಹೋರಾತ್ರಿ ಧರಣಿ ಆರಂಭಿಸಿದ ಕೊಡಗು ಜಿಲ್ಲಾ ಬಿಜೆಪಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಹೋರಾತ್ರಿ ಧರಣಿ ಆರಂಭಿಸಿದ ಕೊಡಗು ಜಿಲ್ಲಾ ಬಿಜೆಪಿ*

ಮಾರ್ಚ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.6 NEWS DESK : ಕೊಡಗು ವಿಶ್ವ ವಿದ್ಯಾನಿಲಯವನ್ನು ರದ್ದುಗೊಳಿಸಬಾರದು, ಸಿ ಮತ್ತು ಡಿ ಭೂಮಿಯ ಗೊಂದಲ ನಿವಾರಿಸಬೇಕು, ಪರಿಶಿಷ್ಟರ ಅನುದಾನವನ್ನು ಉಚಿತ ಭಾಗ್ಯಗಳಿಗೆ ಬಳಸಬಾರದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದೆ. ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ಧರಣಿ ಸತ್ಯಾಗ್ರಹ ಆರಂಭಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಮೂರು ಪ್ರಮುಖ ಬೇಡಿಕೆಗಳು ಸೇರಿದಂತೆ ಕೊಡಗಿನ ಜ್ವಲಂತ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ತನ್ನ ಬಜೆಟ್ ಅಧಿವೇಶನದಲ್ಲೇ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕೊಡಗು ವಿವಿ ಎನ್ನುವುದು ಒಂದೆರಡು ದಿನಗಳಲ್ಲಿ ದೊರಕಿದ್ದಲ್ಲ. ಕಳೆದ ಎರಡು ದಶಕಗಳ ನಿರಂತರ ಪ್ರಯತ್ನಗಳಿಂದ, ಜಿಲ್ಲೆಯ ಬಡ ಮಕ್ಕಳ ಉನ್ನತ ವ್ಯಾಸಂಗದ ಕನಸನ್ನು ನನಸುಗೊಳಿಸುವ ನಿಟ್ಟಿನಲ್ಲಿ ದೊರೆತ ಫಲವೇ ಆಗಿದೆ. ಯಾವುದೇ ಕಾರಣಕ್ಕೂ ಕೊಡಗು ವಿವಿಯನ್ನು ರದ್ದುಗೊಳಿಸಲು ಬಿಡುವುದಿಲ್ಲ ಎಂದರು. ಅಧಿವೇಶನದಲ್ಲಿ ಸರ್ಕಾರ ಕೊಡಗಿನ ಸಮಸ್ಯೆಗಳಿಗೆ ಪರಿಹಾರ ಘೋಷಿಸಬೇಕು, ಇಲ್ಲವಾದಲ್ಲಿ ಮಾ.11 ರಂದು ಕೊಡಗು ಬಂದ್ ಗೆ ಕರೆ ಕೊಡಲು ನಿರ್ಧರಿಸಲಾಗಿದೆ. ಇದಕ್ಕೆ ಸರ್ಕಾರ ಜಗ್ಗದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಹೋರಾಟಕ್ಕೂ ಮುಂದಾಗುವುದಾಗಿ ಎಚ್ಚರಿಕೆ ನೀಡಿದರು. ಭಿಕ್ಷೆ ಬೇಡಿಯಾದರು ಕೊಡಗು ವಿವಿಯನ್ನು ನಡೆಸುತ್ತೇವೆ. ಕೊಡಗು ವಿವಿಯನ್ನು ಒಂದೊಮ್ಮೆ ಮುಚ್ಚಲು ಬಿಟ್ಟರೆ ಮುಂದಿನ ದಿನಗಳಲ್ಲಿ ಈ ಸರ್ಕಾರ ಕೊಡಗಿನಲ್ಲಿರುವ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜು, ಸೈನಿಕ ಶಾಲೆಗಳನ್ನು ಮುಚ್ಚಿ ಬಿಡಬಹುದೆಂದು ಆರೋಪಿಸಿದರು. ಕೊಡಗಿನ ಸಿ ಅಂಡ್ ಡಿ ಜಮೀನಿನಲ್ಲಿ ಬಡ ಮಂದಿ ಸಣ್ಣ ಪುಟ್ಟ ಕೃಷಿ ಚಟುವಟಿಕೆಯೊಂದಿಗೆ, ಮನೆಗಳನ್ನು ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಈ ಸಿ ಮತ್ತು ಡಿ ಪ್ರದೇಶವನ್ನು 1991-92 ರಲ್ಲಿ ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಸಂದರ್ಭ, ಅಗತ್ಯ ಸಂದರ್ಭಗಳಲ್ಲಿ ಇದನ್ನು ಮರಳಿ ಪಡೆಯುವ ನಿಬಂಧನೆಯನ್ನು ಹಾಕಲಾಗಿದೆ. ಹೀಗಿದ್ದೂ ಇದೀಗ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ಕಂದಾಯ ಇಲಾಖೆಯನ್ನು ಕಡೆಗಣಿಸಿ, ಸಿ ಮತ್ತು ಡಿ ಜಮೀನನ್ನು ಅರಣ್ಯಕ್ಕೆ ಒಳಪಡಿಸುವ ಪ್ರಯತ್ನಕ್ಕೆ ಮುಂದಾಗಿರುವುದು ಖಂಡನೀಯವೆಂದು ಅಪ್ಪಚ್ಚು ರಂಜನ್ ಅಸಮಾಧಾನ ವ್ಯಕ್ತಪಡಿಸಿದರು. ಹವಾಮಾನ ವೈಫರೀತ್ಯಗಳಿಂದ ಕೊಡಗಿನ ಕಾಫಿ ಬೆಳೆಗಾರ ಫಸಲು ನಷ್ಟಕ್ಕೆ ಒಳಗಾಗಿದ್ದರು ಸರ್ಕಾರ ಪರಿಹಾರ ಒದಗಿಸಿಲ್ಲ. ಕೊಡಗನ್ನು ಸರ್ಕಾರ ಕಡೆಗಣಿಸಿದೆಯೆಂದು ಟೀಕಿಸಿದ ಅವರು, ಬೇಡಿಕೆಗಳನ್ನು ಪರಿಗಣಿಸದಿದ್ದಲ್ಲಿ ಹಳ್ಳಿ ಹಳ್ಳಿಗಳಲ್ಲಿ ಹೋರಾಟ ನಡೆಸುವುದಾಗಿ ತಿಳಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ ಕೊಡಗು ವಿವಿ ನಮ್ಮ ಸ್ವಾಭಿಮಾನದ ಹೆಗ್ಗುರುತಾಗಿದ್ದು, ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು. ಈ ಸಮಸ್ಯೆಗೆ ಮುಖ್ಯಮಂತ್ರಿಗಳು ಅಧಿವೇಶನದಲ್ಲಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಪರಶಿಷ್ಟರಿಗೆ ಮೀಸಲಾದ ಹಣವನ್ನು ಉಚಿತ ಭಾಗ್ಯಗಳಿಗೆ ಬಳಸಲಾಗಿದ್ದು, ಇದನ್ನು ಪರಿಶಿಷ್ಟರ ಕಲ್ಯಾಣಕ್ಕಾಗಿಯೇ ಬಳಸಬೇಕು, ಸಿ ಮತ್ತು ಡಿ ಜಾಗವನ್ನು ಅರಣ್ಯವೆಂದು ಪರಿವರ್ತಿಸುವ ಪ್ರಯತ್ನವನ್ನು ಕೈಬಿಡಬೇಕೆಂದು ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ನೆಲ್ಲೀರ ಚಲನ್, ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ, ಪಕ್ಷದ ಮುಖಂಡರಾದ ಕೋಡಿ ಪೊನ್ನಪ್ಪ, ಶಾಂತೆಯಂಡ ರವಿ ಕುಶಾಲಪ್ಪ, ಸುನೀಲ್ ಸುಬ್ರಮಣಿ, ತೇಲಪಂಡ ಶಿವಕುಮಾರ್ ನಾಣಯ್ಯ, ಕಾಂಗೀರ ಸತೀಶ್, ಕನ್ನಂಡ ಸಂಪತ್, ಕಾಂತಿ ಸತೀಶ್, ಅನಿತಾ ಪೂವಯ್ಯ, ಲೋಕೇಶ್ವರಿ ಗೋಪಾಲ್, ಬಿ.ಕೆ.ಜಗದೀಶ್, ಜಿ.ಎಂ.ಸತೀಶ್ ಪೈ, ಡೀನ್ ಬೋಪಣ್ಣ, ಪಿ.ಎಂ.ರವಿ, ಬಿ.ಬಿ.ಶಿವಪ್ಪ, ಬಿ.ಎ.ಹರೀಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿಯ ಧರಣಿ ಸತ್ಯಾಗ್ರಹ ಮಾ.7ರ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.