ಮಡಿಕೇರಿ ಮಾ.7 NEWS DESK : ಮಡಿಕೇರಿ-ಪಾಣತ್ತೂರು (ಕೇರಳ ಗಡಿ) ಮಾರ್ಗದಲ್ಲಿ ಬಾಕಿ ಉಳಿದಿರುವ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲೆಯ ಕುಂದಚೇರಿ, ಭಾಗಮಂಡಲ ಹೋಬಳಿ ಪ್ರದೇಶಗಳಲ್ಲಿ ನಡೆಯುತ್ತಿರುವ ಕಾಮಗಾರಿ ವಿಳಂಬ ವಾಗುತ್ತಿರುವುದರಿಂದ ಸ್ಥಳೀಯ ಪ್ರಯಾಣಿಕರಿಗೆ ಮತ್ತು ಅಂತರರಾಜ್ಯ ಪ್ರಯಾಣಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ನಿರ್ಮಾಣ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮತ್ತು ಅದನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತೀನ್ ಗಡ್ಕರಿ ಅವರಿಗೆ ಸಂಸದ ಯದುವೀರ್ ಮನವಿ ಸಲ್ಲಿಸಿದ್ದಾರೆ.











