
ಮಡಿಕೇರಿ ಮಾ.7 NEWS DESK : ಬಿದ್ದು ಸಿಕ್ಕಿದ ಪರ್ಸ್ ಅನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಡಿಎಆರ್ ಸಿಬ್ಬಂದಿ ನದಾಫ್ ಪ್ರಮಾಣಿಕತೆ ಮೆರೆದಿದ್ದಾರೆ. ಕಟ್ಟೆಮಾಡು ದೇವಾಲಯಕ್ಕೆ ದೇವರ ದರ್ಶನಕ್ಕೆ ಭೇಟಿ ನೀಡಿದ ಮಹಿಳೆಯೊಬ್ಬರು ಮೊಬೈಲ್ ಮತ್ತು ಹಣ ಇದ್ದ ಪರ್ಸ್ ಕಳೆದುಕೊಂಡಿದ್ದರು. ಇದೇ ಸಂದರ್ಭ ಕರ್ತವ್ಯದಲ್ಲಿದ್ದ ಡಿಎಆರ್ ಸಿಬ್ಬಂದಿ ನದಾಫ್ ಅವರಿಗೆ ದೇವಾಲಯದ ಆವರಣದಲ್ಲಿ ಪರ್ಸ್ ದೊರೆತ್ತಿದ್ದು, ಮಹಿಳೆಯನ್ನು ಹುಡುಕಿ ಪರ್ಸ್ ಹಿಂದಿರುಗಿಸಿದರು. ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.









