


ಸುಂಟಿಕೊಪ್ಪ ಮಾ.8 NEWS DESK : ಗ್ರಾಮ ದೇವರ ಸಮಿತಿ ವತಿಯಿಂದ ಗ್ರಾಮ ದೇವರ 6ನೇ ವಾರ್ಷಿಕ ಪೂಜಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಅರ್ಚಕ ಮಂಜುನಾಥ್ ಶರ್ಮಾಬ ಅವರ ನೇತೃತ್ವದಲ್ಲಿ ಬೆಳಿಗ್ಗೆ ಸ್ಥಳ ಶುದ್ಧಿ ಕಲಶ ಪೂಜೆ ನಡೆಯಿತು. ನಂತರ ಗ್ರಾಮ ದೇವತೆಗೆ ಎಳನೀರು, ಹಾಲು, ಕುಂಕುಮ, ಜೇನು, ಗಂಧ, ತುಪ್ಪದ ಅಭಿಷೇಕ ನೆರವೇರಿತು. ಆ ಬಳಿಕ ದೇವರಿಗೆ ವಸ್ತ್ದಲಂಕಾರ ಮತ್ತು ಹೂವಿನ ಅಲಂಕಾರ ಪೂಜೆ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ನಂತರ ಗ್ರಾಮ ದೇವತೆಗೆ ಅರ್ಪಣೆ ನಡೆದು, ಮದ್ಯಾಹ್ನದ ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಸ್ಥಾನ ಸಮಿತಿ, ಶ್ರೀ ರಾಮ ಸೇವಾ ಸಮಿತಿ, ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರ ಸಮಿತಿ, ಗೌರಿ ಗಣೇಶೋತ್ಸವ ಸಮಿತಿ, ಮಸಣಿಕಮ್ಮ ದೇವಸ್ಥಾನ ಸಮಿತಿ, ವೃಕ್ಷೋದ್ಭವ ಮಹಾಗಣಪತಿ ದೇವಾಲಯ ಸಮಿತಿ, ಟಿಸಿಎಲ್ ಚಾಮುಂಡೇಶ್ವರಿ ದೇವಸ್ಥಾನ ಸಮಿತಿ, ಶ್ರೀ ದೇವಿಯ ಅಣ್ಣಪ್ಪ ದೇವಸ್ಥಾನ ಸಮಿತಿ, ಬಾಳೆಕಾಡು ಮುತ್ತಪ್ಪ ದೇವಸ್ಥಾನ, ಗದ್ದೆಹಳ್ಳ ಕೊಡಂಗಲ್ಲೂರು ಶ್ರೀ ಕುರುಂಬ ಭಗವತಿ ದೇವಾಲಯ, ಮದುರಮ್ಮ ಬಡಾವಣೆಯ ನಾಗದೇವತೆ, ಮಳೂರು ಬೆಳ್ಳಾರಿಕಮ್ಮ ದೇವಾಲಯ ಸಮಿತಿ, ಗದ್ದೆಹಳ್ಳದ ಬಸವೇಶ್ವರ ದೇವಾಲಯ ಸಮಿತಿಗಳ ಸಹಭಾಗಿತ್ವದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ದೇವಾಲಯವನ್ನು ವಿವಿಧ ಬಗೆಯ ಹೂವು ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಸಮಿತಿಯ ಅಧ್ಯಕ್ಷ ಎ.ಶ್ರೀಧರ್ ಕುಮಾರ್, ಕಾರ್ಯದರ್ಶಿ ಸುರೇಶ್ ಗೋಪಿ, ಖಜಾಂಚಿ ದಿನು ದೇವಯ್ಯ, ಉಪಾಧ್ಯಕ್ಷ ಬಿ.ಡಿ.ರಾಜು ರೈ, ಜೆ.ಎನ್.ಚಂದ್ರಶೇಖರ್, ಸಲಹಾ ಸಮಿತಿಯ ಎ.ಲೋಕೇಶ್ ಕುಮಾರ್, ಶಾಂತರಾಮ್ ಕಾಮತ್,ಬಸವರಾಜು, ಅಶೋಕ್ ಶೇಟ್, ಸಂಘಟನಾ ಕಾರ್ಯದರ್ಶಿಗಳಾದ ಧನು ಕಾವೇರಪ್ಪ, ಸುನಿಲ್, ಸಹ ಕಾರ್ಯದರ್ಶಿ ಎ.ಶ್ರೀಧರನ್, ಅಯ್ಯಪ್ಪ, ಪಟ್ಟೆಮನೆ ಕುಟುಂಬಸ್ಥರಾದ ಪಿ.ಪಿ.ಉದಯಕುಮಾರ್, ಪಟ್ಟೆಮನೆ ಸದಾಶಿವ, ಸದಾಶಿವ ರೈ, ಸಂತೋಷ್, ರವಿ, ಶಿವಕುಮಾರ್, ಸಿ.ಸಿ.ಸುನಿಲ್, ಎಂ.ಆರ್.ಶಶಿಕುಮಾರ್, ಬಿ.ಕೆ.ಪ್ರಶಾಂತ್ ಸೇರಿದಂತೆ ವಿವಿಧ ದೇವಾಲಯ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.