


ಮಡಿಕೇರಿ NEWS DESK ಮಾ.15 : ಮಡಿಕೇರಿ ನಗರದ ಶ್ರೀಕೋದಂಡ ರಾಮೋತ್ಸವ ಸಮಿತಿಯ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಅಭಿಯಂತರ ವಿ.ಎಸ್.ವಿನೋದ್ ಕುಮಾರ್ ಅವರು ನೇಮಕಗೊಂಡಿದ್ದಾರೆ. ಮಲ್ಲಿಕಾರ್ಜುನ ನಗರ ಬಡಾವಣೆಯ ಶ್ರೀಕೋದಂಡ ರಾಮ ದೇವಾಲಯದಲ್ಲಿ ರಾಮೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲು ಸಿದ್ಧತೆ ನಡೆದಿದೆ. ಏ.5 ಮತ್ತು 6ರಂದು ರಾಮೋತ್ಸವ ಅದ್ದೂರಿಯಾಗಿ ಜರುಗಲಿದ್ದು, ವಿಜೃಂಭಣೆಯ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮವನ್ನು ಕೂಡ ಆಯೋಜಿಸಲಾಗಿದೆ.