


ಮಡಿಕೇರಿ ಮಾ.17 NEWS DESK : ವಿರಾಜಪೇಟೆ ನಗರ ಮತ್ತು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಬಸ್ ಮಾಲೀಕರು, ಚಾಲಕರು, ಏಜೆಂಟರು ಹಾಗೂ ನಗರದ ಆಟೋ ಮಾಲೀಕರು, ಚಾಲಕರುಗಳ ಸಭೆ ನಡೆಯಿತು. ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಾಹನ ಮಾಲೀಕರು ಮತ್ತು ಚಾಲಕರಿಗೆ ಸಂಚಾರ ಸುರಕ್ಷತೆ, ಸುರಕ್ಷಿತ ವಾಹನ ಚಾಲನೆ ಮತ್ತು ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದರು.