Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಂಗಾರು : ರಸಗೊಬ್ಬರ ದಾಸ್ತಾನು ಮತ್ತು ಪೂರೈಕೆ ಸಮರ್ಪಕವಾಗಿರಲಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಂಗಾರು : ರಸಗೊಬ್ಬರ ದಾಸ್ತಾನು ಮತ್ತು ಪೂರೈಕೆ ಸಮರ್ಪಕವಾಗಿರಲಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ*

ಮಾರ್ಚ್ 17, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.17 NEWS DESK : ಜಿಲ್ಲೆಯ ರಸಗೊಬ್ಬರ ಕಂಪನಿ ಪ್ರತಿನಿಧಿಗಳು, ಸಹಕಾರ ಸಂಘಗಳು, ಕೃಷಿ ಪರಿಕರ ಮಾರಾಟ ಸಹಕಾರ ಸಂಘ ಪ್ರತಿನಿಧಿಗಳ ಜೊತೆ ಮುಂಗಾರು ಸಂದರ್ಭದಲ್ಲಿ ರಸಗೊಬ್ಬರ ದಾಸ್ತಾನು ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಗೆ ಪೂರೈಕೆಯಾಗುವ ರಸಗೊಬ್ಬರ ದಾಸ್ತಾನು ಮಾಡುವುದರ ಜೊತೆಗೆ, ಹೊರ ಜಿಲ್ಲೆಗೆ ರಸಗೊಬ್ಬರ ಸಾಗಾಣಿಕೆ ಮಾಡದಂತೆ ಚೆಕ್‍ಪೋಸ್ಟ್‍ಗಳಲ್ಲಿ ಅಗತ್ಯ ತಪಾಸಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸಲಹೆ ಮಾಡಿದರು. ಮಾರುಕಟ್ಟೆ ಫೆಡರೇಷನ್ ಮತ್ತು ಬೀಜ ನಿಗಮದಿಂದ ರಸಗೊಬ್ಬರ ಹಾಗೂ ಬಿತ್ತನೆ ಬೀಜವನ್ನು ದಾಸ್ತಾನು ಮಾಡಿಕೊಳ್ಳುವುದು. ಪ್ರಮುಖವಾಗಿ ಯೂರಿಯಾ ಮತ್ತು ಡಿಐಪಿ ರಸಗೊಬ್ಬರವನ್ನು ಬೇಡಿಕೆಯಂತೆ ದಾಸ್ತಾನು ಮಾಡಿಕೊಳ್ಳುವುದು, ಪ್ರತೀ ತಿಂಗಳು ಪೂರೈಕೆಯಾಗುವ ರಸಗೊಬ್ಬರ ಸಂಬಂಧ ಕಾಲ ಕಾಲಕ್ಕೆ ರಸಗೊಬ್ಬರ ಮಾರಾಟಗಾರರು ಹಾಗೂ ಕಂಪನಿ ಮತ್ತು ಸಹಕಾರ ಸೊಸೈಟಿಯವರು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ರಸಗೊಬ್ಬರ ಸಮರ್ಪಕವಾಗಿ ಸರಬರಾಜು ಆಗಬೇಕು. ಕೃಷಿಕರಿಂದ ಯಾವುದೇ ರೀತಿ ದೂರು ಬರದಂತೆ ರಸಗೊಬ್ಬರ ಮಾರಾಟಗಾರರು, ಕಂಪನಿಗಳು, ಸಹಕಾರ ಸಂಘಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಎಲ್ಲಾ ಸಗಟು ಮತ್ತು ಚಿಲ್ಲರೆ ರಸಗೊಬ್ಬರ ಮಾರಾಟಗಾರರು ಪಿಒಎಸ್ ಯಂತ್ರದಲ್ಲಿನ ದಾಸ್ತಾನು ಹಾಗೂ ವಾಸ್ತವಿಕ ಭೌತಿಕ ದಾಸ್ತಾನನ್ನು ತಾಳೆ ಇರುವಂತೆ ನೋಡಿಕೊಳ್ಳಲು ಸೂಚಿಸಿದರು. ಇಲ್ಲವಾದ್ದಲ್ಲಿ, ಪಿಒಎಸ್ ಯಂತ್ರದಲ್ಲಿನ ತೀರುವಳಿಗೊಳಿಸದ ದಾಸ್ತಾನನ್ನು ಪರಿಗಣಿಸಿ, ವಾಸ್ತಾವಿಕವಾಗಿ ಭೌತಿಕ ದಾಸ್ತಾನು ಕಡಿಮೆ ಇದ್ದರೂ ಸಹ ಜಿಲ್ಲೆಗೆ ಬರುವ ರಸಗೊಬ್ಬರ ಪ್ರಮಾಣದಲ್ಲಿ ಕೊರತೆ ಉಂಟಾಗುತ್ತದೆ. ಆದ್ದರಿಂದ, ಎಲ್ಲಾ ಸಗಟು ಮತ್ತು ಚಿಲ್ಲರೆ ರಸಗೊಬ್ಬರ ಮಾರಾಟಗಾರರು ತಮ್ಮ ತಾಂತ್ರಿಕ ದೋಷಪೂರಿತ ಪಿಒಎಸ್ ಯಂತ್ರಗಳನ್ನು ಸಂಬಂಧಪಟ್ಟವರಿಂದ ನವೀಕರಿಸಿಕೊಳ್ಳುವುದು ಹಾಗೂ ಪ್ರತಿದಿನದ ಮಾರಾಟಕ್ಕೆ ಅನುಗುಣವಾಗಿ ಪಿಒಎಸ್ ಯಂತ್ರದಲ್ಲಿಯೂ ಸಹ ದಾಸ್ತಾನನ್ನು ತೀರುವಳಿಗೊಳಿಸಿ ವಾಸ್ತವಿಕ ಭೌತಿಕ ದಾಸ್ತಾನು ಹಾಗೂ ಪಿಒಎಸ್ ಯಂತ್ರದ ದಾಸ್ತಾನು ತಾಳೆ ಇರುವಂತೆ ನಿರ್ವಹಿಸಲು ಸೂಚಿಸಿದರು. ರೈತರಿಗೆ ಯಾವುದೇ ರೀತಿಯ ಕಳಪೆ ರಸಗೊಬ್ಬರ ಸರಬರಾಜು ಆಗದಂತೆ ಎಲ್ಲಾ ರಸಗೊಬ್ಬರ ತಯಾರಿಕ ಸಂಸ್ಥೆ ಹಾಗೂ ಎಲ್ಲಾ ಖಾಸಗಿ ಮತ್ತು ಸಹಕಾರ ಸಂಘಗಳು ಎಚ್ಚರ ವಹಿಸಬೇಕು ಎಂದು ನಿರ್ದೇಶನ ನೀಡಿದರು. ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿರುವ ರಸಗೊಬ್ಬರಗಳನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡುವುದನ್ನ ಪರಿಣಾಮಕಾರಿಯಾಗಿ ತಡೆಯುವ ಸಂಬಂಧ ಜಿಲ್ಲೆಯ ಗಡಿ ಭಾಗಗಳ ಚೆಕ್ ಪೆÇೀಸ್ಟ್ ಗಳಲ್ಲಿ ಸೂಕ್ತ ತಪಾಸಣೆ ಕೈಗೊಳ್ಳಲು ಕ್ರಮವಹಿಸಬೇಕು. ಆ ನಿಟ್ಟಿನಲ್ಲಿ ಪೆÇೀಲೀಸ್ ಇಲಾಖೆಯ ಸಹಕಾರ ಪಡೆದುಕೊಳ್ಳಲು ಸಹ ಸೂಚಿಸಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಅವರು ಮಾತನಾಡಿ ಜಿಲ್ಲೆಯಲ್ಲಿ ಯೂರಿಯಾ ಮತ್ತು ಡಿ.ಎ.ಪಿ ರಸಗೊಬ್ಬರಗಳಿಗೆ ರೈತರಿಂದ ಹೆಚ್ಚಿನ ಬೇಡಿಕೆ ಇದ್ದು, ಸಕಾಲದಲ್ಲಿ ರೈತರಿಗೆ ರಸಗೊಬ್ಬರಗಳನ್ನು ದೊರೆಯುವಂತೆ ಮಾಡುವ ಸಂಬಂಧ ಈಗಾಗಲೇ ಕೇಂದ್ರ ಕಚೇರಿಗೆ ಜಿಲ್ಲೆಗೆ ಸರಬರಾಜು ಮಾಡಲಾಗುವ ಯೂರಿಯಾ ಮತ್ತು ಡಿ.ಎ.ಪಿ ರಸಗೊಬ್ಬರ ಪ್ರಮಾಣದಲ್ಲಿ ಶೇ.25 ರಷ್ಟು ರಸಗೊಬ್ಬರಗಳನ್ನು ಕಾಪು ದಾಸ್ತಾನೀಕರಿಸಲು ಕೋರಲಾಗಿ, ಈ ಸಂಬಂಧ ಕೇಂದ್ರ ಕಚೇರಿಯಿಂದ ಪತ್ರ ಬಂದಿರುವುದಾಗಿ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಮಾಹಿತಿ ನೀಡಿದರು. ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿರುವ ರಸಗೊಬ್ಬರಗಳನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಸಹಾಯಕ ಕೃಷಿ ನಿರ್ದೇಶಕರು(ಜಾರಿದಳ) ಮತ್ತು ಎಲ್ಲಾ ರಸಗೊಬ್ಬರ ಪರಿವೀಕ್ಷಕರುಗಳಿಗೆ ಕಾಲಕಾಲಕ್ಕೆ ಪರಿಶೀಲನೆ ಮಾಡುವಂತೆ ಹಾಗೂ ಅಂತಹ ಪ್ರಕರಣಗಳು ಕಂಡು ಬಂದಲ್ಲಿ ರಸಗೊಬ್ಬರ ನಿಯಂತ್ರಣ ಆದೇಶ 1985 ಹಾಗೂ ಅಗತ್ಯ ವಸ್ತುಗಳ ಕಾಯ್ದೆ 1955 ಪ್ರಕಾರ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಕ್ರಮವಹಿಸಲು ಸೂಚಿಸಲಾಗಿರುವುದಾಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದರು. ಜಿಲ್ಲಾ ಕೃಷಿ ಪರಿಕರ ಮಾರಾಟಗಾರರ ಸಹಾಕರ ಸಂಘ ಅಧ್ಯಕ್ಷರು ಮಾತನಾಡಿ ಕಾಪು ದಾಸ್ತಾನೀಕರಿಸಿದ ರಸಗೊಬ್ಬರಗಳನ್ನು ಸಹಕಾರ ಸಂಘಗಳಿಗೆ ಹಂಚಿಕೆ ಮಾಡುವುದರ ಜೊತೆಗೆ ಖಾಸಗಿ ರಸಗೊಬ್ಬರ ಮಾರಾಟಗಾರರಿಗೂ ಹಂಚಿಕೆ ಮಾಡಿದರೆ ಸೂಕ್ತ ವೆಂದು ಕೋರಿದರು. ಹಾಗೆಯೇ ರಸಗೊಬ್ಬರ ಮಾರಾಟಗಾರರಲ್ಲಿರುವ ಪಿಒಎಸ್ ಯಂತ್ರದಲ್ಲಿ ಅನೇಕ ತಾಂತ್ರಿಕ ದೋಷಗಳ ಕಾರಣದಿಂದಾಗಿ ನಿಗಧಿತ ಸಮಯದೊಳಗೆ ರಸಗೊಬ್ಬರಗಳ ಮಾರಾಟದ ವಿವರವನ್ನು ಪಿಒಎಸ್ ಯಂತ್ರದಲ್ಲಿ ತೀರುವಳಿಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು. ಈ ಕುರಿತು ಜಂಟಿ ಕೃಷಿ ನಿರ್ದೇಶಕರು ಮಾತನಾಡಿ ಕೃಷಿ ಇಲಾಖೆ ಆಯುಕ್ತರ ಕಚೇರಿಯ ನಿರ್ದೇಶನದಂತೆ ಈಗಾಗಲೇ ಬೇರೆ ಜಿಲ್ಲೆಗಳ ಸಗಟು ರಸಗೊಬ್ಬರ ಮಾರಾಟಗಾರರು ಈ ಜಿಲ್ಲೆಯಲ್ಲಿ ಹೊಂದಿರುವ iಈಒS Iಆ ಗಳನ್ನು ರದ್ದುಪಡಿಸಲು ಪ್ರಸ್ತಾವನೆಯನ್ನು ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಮುಂಬರುವ ಮುಂಗಾರು ಹಂಗಾಮಿನ ಪೂರ್ವದಲ್ಲಿ ಎಲ್ಲಾ ಸಗಟು ಮತ್ತು ಚಿಲ್ಲರೆ ರಸಗೊಬ್ಬರ ಮಾರಾಟಗಾರರಿಗೆ ಒಂದು ದಿನ ಕಾರ್ಯಗಾರ ಏರ್ಪಡಿಸಿ ಪಿಒಎಸ್ ಯಂತ್ರದ ಬಳಕೆ ಹಾಗೂ ಕೃಷಿ ಪರಿಕರಗಳ ಮಾರಾಟ ಕಾಯ್ದೆಗಳ ಬಗ್ಗೆ ಒಂದು ದಿನದ ತರಬೇತಿ ನೀಡಲಾಗುವುದು ಎಂದು ಸಭೆಗೆ ತಿಳಿಸಿದರು. 2024ರ ಮುಂಗಾರು ಸಂದರ್ಭದಲ್ಲಿ ಯೂರಿಯಾ 19366 ಮೆ.ಟ., ಡಿಎಪಿ 7501, ಎಂಒಪಿ 15884, ಕಾಂಪ್ಲೆಕ್ಸ್ 34,558,ಮತ್ತು ಎಸ್‍ಎಸ್‍ಪಿ 3,637 ಒಟ್ಟು 80,946 ಮೆಟ್ರಿಕ್ ಟನ್ ಬೇಡಿಕೆ ಇತ್ತು. ಅದೇ ರೀತಿ ಹಿಂಗಾರು ಸಂದರ್ಭದಲ್ಲಿ ಯೂರಿಯಾ 5307 ಮೆ.ಟಿ., ಡಿಎಪಿ 1709, ಎಂಒಪಿ 5047, ಕಾಂಪ್ಲೆಕ್ಸ್ 6486, ಎಸ್‍ಎಸ್‍ಪಿ 584 ಒಟ್ಟು 19,133 ಮೆಟ್ರಿಕ್ ಟನ್ ಬೇಡಿಕೆ ಇತ್ತು. ಅದರಂತೆ ಪ್ರಸಕ್ತ ಸಾಲಿನಲ್ಲಿ 99,893 ಮೆಟ್ರಿಕ್ ಟನ್ ವಿವಿಧ ರಸಗೊಬ್ಬರ ಪೂರೈಕೆ ಆಗಿತ್ತು. ಇಲ್ಲಿಯವರೆಗೆ ಒಟ್ಟು ಲಭ್ಯತೆ 1,31,502 ಮೆಟ್ರಿಕ್ ಟನ್ ಆಗಿದ್ದು, 1,04,396 ಮೆ.ಟ.ರಸಗೊಬ್ಬರ ವಿತರಣೆಯಾಗಿದ್ದು, 27,106 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಉಳಿಕೆಯಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ವಿವರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.