



ಮಡಿಕೇರಿ ಮಾ.18 NEWS DESK : ಬೈಕಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಪ್ರಾಣಪಾಯದಿಂದ ಪಾರದ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಮುಖ್ಯ ರಸ್ತೆಯಲ್ಲಿ ನಡೆದಿದೆ. ತಟ್ಟಳ್ಳಿಯಿಂದ ಮಾಲ್ದಾರೆ ಮಾರ್ಗವಾಗಿ ವಾಲ್ನೂರು ಗ್ರಾಮಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಅಯ್ಯಪ್ಪ ಮಾಲ್ದಾರೆ- ಸಿದ್ದಾಪುರ ಮುಖ್ಯ ರಸ್ತೆಯ ಕೆರೆಯ ಬಳಿ
ಕಾಡಾನೆಯೊಂದು ಕಾಫಿ ತೋಟದಿಂದ ನೇರವಾಗಿ ರಸ್ತೆಗೆ ಬಂದಿದೆ. ಆನೆಯನ್ನು ಕಂಡು ಗಾಬರಿಗೊಂಡ ಸವಾರ ಅಯ್ಯಪ್ಪ ಬೈಕ್ ನ್ನು ಹಿಂಬದಿಗೆ ತಿರುಗಿಸುವಷ್ಟರಲ್ಲಿ ಕಾಡಾನೆ ಏಕಾಏಕಿ ದಾಳಿಗೆ ಯತ್ನಿಸಿದೆ. ತಕ್ಷಣ ಬೈಕನ್ನ ಬಿಟ್ಟು ಓಡಿ ಪ್ರಾಣಪಾಯದಿಂದ ಪರಾದರೆ ಕಾಡಾನೆ ಬೈಕನ್ನ ಸಂಪೂರ್ಣ ಜಖಂ ಗೊಳಿಸಿ ಮುಖ್ಯ ರಸ್ತೆಯಿಂದ ಕಂದಕ್ಕೆ ಎಸದಿದೆ. ಆನೆಯ ಕಿರಿಚಾಟದ ಶಬ್ದ ಕೇಳಿ ಸಮೀಪದಲ್ಲೇ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಹಾಗೂ ಆರ್ ಆರ್ ಟಿ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಆನೆಯನ್ನ ಕಾಡಿಗಟ್ಟಿದ್ದಾರೆ. ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್ ಅವರ ನಿರ್ದೇಶನದಂತೆ ಉಪ ವಲಯ ಅರಣ್ಯ ಅಧಿಕಾರಿಗಳಾದ ಹಂಸ, ಶಶಿ, ಅರಣ್ಯ ರಕ್ಷಕರುಗಳಾದ ಸಂಪತ್ ಕುಮಾರ್, ತಿಮಣ್ಣ, ಆರ್ ಆರ್ ಟಿ ಸಿಬ್ಬಂದಿಗಳಾದ ರಾಜಪ್ಪ, ಚೇತನ್, ಶಶಿ ಸೇರಿದಂತೆ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಬೈಕ್ ಸವಾರ ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ದೂರು ನೀಡಿದ್ದು, ಒಂದು ವರ್ಷಗಳ ಹಿಂದೆ ಹೂಸ ಬೈಕನ್ನ ಖರೀದಿ ಮಾಡಲಾಗಿತ್ತು ಕಾಡಾನೆ ದಾಳಿಯಿಂದ ಸಂಪೂರ್ಣ ಜಖಂಗೊಂಡಿದ್ದು ಅಂದಾಜು 70ಸಾವಿರ ದಷ್ಟು ನಷ್ಟ ಉಂಟಾಗಿದೆ ಎಂದು ಇಲಾಖೆ ಅಧಿಕಾರಿಗಳಿಗೆ ದೂರ ನೀಡಿದ್ದಾರೆ. ಕಾಡಾನೆ ಹಾವಳಿ ತಡೆಗೆ ಒತ್ತಾಯ :: ಕಾಡಾನೆ ದಾಳಿಯಿಂದ ಬೈಕ್ ಜಖಂಗೊಂಡ ಸ್ಥಳಕ್ಕೆ ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಆದಿವಾಸಿ ಮುಖಂಡ ಜೆ.ಕೆ.ಅಪ್ಪಾಜಿ ಭೇಟಿ ನೀಡಿ, ಮಾತನಾಡಿ
ಶಾಶ್ವತವಾಗಿ ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದ್ದು ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು, ಬೆಳೆಗಾರರು, ಸಾರ್ವಜನಿಕರು ಹಾಡಹಗಲಿನಲ್ಲೂ ನಡೆದಾಡಲು ಸಾಧ್ಯವಾಗದಂತಹ ಸ್ಥಿತಿ ಎದುರಾಗಿದೆ ಕೂಲಿ ಕೆಲಸ ಮಾಡಿ ಜೀವನ ನಡೆಸುವ ಅದೆಷ್ಟೋ ಕುಟುಂಬಗಳು ಕಾಡು ಪ್ರಾಣಿಗಳ ಹಾವಳಿಯಿಂದ ಸಾವು ನೋವುಗಳನ್ನ ಅನುಭವಿಸುತ್ತಿದ್ದಾರೆ. ಕಾಡು ಪ್ರಾಣಿಗಳ ಹಾವಳಿಯನ್ನ ತಡೆಗಟ್ಟಲು ಅಧಿಕಾರಿಗಳು
ಮುಂದಾಗುತ್ತಿಲ್ಲ. ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟಲು ರೈಲ್ವೆ ಕಂಬಿ ಅಳವಡಿಕೆ ಕಾಮಗಾರಿಯನ್ನು ವೈಜ್ಞಾನಿಕವಾಗಿ ಮಾಡದೆ ಕಾಟಾಚಾರಕ್ಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಕಾಡಿನಲ್ಲಿ ಪ್ರಾಣಿಗಳಿಗೆ ಆಹಾರ, ನೀರಿನ ವ್ಯವಸ್ಥೆ ಮಾಡಿ ನಾಡಿನತ್ತ ಬರದ ಹಾಗೆ ತಡೆಗಟ್ಟುಬೇಕು, ಬೈಕ್ ಸವಾರನಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಗ್ರಾಮದ ಪಾಪಣ್ಣ, ಬಸಪ್ಪ, ವಿನು, ಅರುಣ, ರವಿ, ಮುತ್ತ ಸೇರಿದಂತೆ ಮತ್ತಿತರರು ಇದ್ದರು.