

ವಿರಾಜಪೇಟೆ NEWS DESK ಮಾ.18 : ಧಾರವಾಡದ ಚೇತನ ಫೌಂಡೇಶನ್ ಕರ್ನಾಟಕದ ಆಶ್ರಯದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ ಇವರ ಸಹಯೋಗದಲ್ಲಿ ಮೈಸೂರಿನ ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಸಭಾಂಗಣದಲ್ಲಿ ನಡೆದ ಮೈಸೂರು ನುಡಿ ಸಡಗರ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಭರತನಾಟ್ಯ ಕಲಾವಿದೆ ದಿಥ್ಯ ಕೆ.ಪಿ ಅವರಿಗೆ ಕನ್ನಡ ಮಾಣಿಕ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿರಾಜಪೇಟೆಯ ವಿನಾಯಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಓದುತ್ತಿರುವ ಕು. ದಿಥ್ಯ ಕೆ.ಪಿ. ಅವರು ನಾಟ್ಯಾಂಜಲಿ ನೃತ್ಯ ಶಾಲೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾಳೆ. ಈಕೆ ವಿರಾಜಪೇಟೆಯ ಚಿಕ್ಕಪೇಟೆಯ ನಿವಾಸಿಗಳಾಗಿರುವ ಕೆ.ಪಿ.ಪ್ರಥ್ವಿಕುಮಾರ್ ಹಾಗೂ ಭವ್ಯ ಅವರ ಪುತ್ರಿ. ಕೊಂಪುಳೀರ ಪಳಂಗಪ್ಪ ಹಾಗೂ ತಾರಾಮಣಿಯವರ ಮೊಮ್ಮಗಳು.