







ಮಡಿಕೇರಿ ಮಾ.21 NEWS DESK : ಬೃಹತ್ ಜಲ ಸಂರಕ್ಷಣಾ ಅಭಿಯಾನದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಮಂಡಲಕ್ಕೆ ಭೇಟಿ ನೀಡಿ, ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿಗೆ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.