Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.24 ರಂದು ಮಾಜಿ ಸೈನಿಕರ ಬೃಹತ್ ಸಮಾವೇಶ : ಭೂಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಧೀರಜ್ ಸೇತ್ ಉಪಸ್ಥಿತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.24 ರಂದು ಮಾಜಿ ಸೈನಿಕರ ಬೃಹತ್ ಸಮಾವೇಶ : ಭೂಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಧೀರಜ್ ಸೇತ್ ಉಪಸ್ಥಿತಿ*

ಮಾರ್ಚ್ 21, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.21 NEWS DESK : ದಕ್ಷಿಣ ವಲಯದ ಭೂಸೇನಾ ಮುಖ್ಯಸ್ಥರಾದ ಲೆಫ್ಟಿನೆಂಟ್ ಜನರಲ್ ಧೀರಜ್ ಸೇತ್ ಪಿವಿಎಸ್‍ಎಂ, ಎವಿಎಸ್‍ಎಂ ಅವರ ಉಪಸ್ಥಿತಿಯಲ್ಲಿ ನಿವೃತ್ತ ಸೈನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಬೃಹತ್ ಸಮಾವೇಶ ಮಾ.24 ರಂದು ನಗರದಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಪ್ರಧಾನ ಕಾರ್ಯದರ್ಶಿ ನಿವೃತ್ತ ಮೇಜರ್ ಓ.ಎಸ್.ಚಿಂಗಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ನಗರದ ಕ್ರಿಸ್ಟಲ್ ಕೋರ್ಟ್ ಸಂಭಾಂಗಣದಲ್ಲಿ ಸಮಾವೇಶ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಇದರಲ್ಲಿ ಜಿಲ್ಲೆಯ ನಿವೃತ್ತ ಸೈನಿಕರು, ಅವರ ಅವಲಂಬಿತರು ಪಾಲ್ಗೊಳ್ಳಲಿದ್ದಾರೆ. ನೆರೆಯ ಕೇರಳ ವಿಭಾಗದ ಮಾಜಿ ಸೈನಿಕರು ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ ಹೇಳಿದರು. ಕಳೆದ ಸಾಲಿನಲ್ಲಿ ಗೋಣಿಕೊಪ್ಪಲಿನಲ್ಲಿ ಸಮಾವೇಶ ನಡೆದಿತ್ತು, ಈ ಬಾರಿ ಮಡಿಕೇರಿಯಲ್ಲಿ ನಡೆಯುತ್ತಿದೆ. ರಾಷ್ಟ್ರಕ್ಕೆ ಇಬ್ಬರು ಜನರಲ್‍ಗಳನ್ನು ಮತ್ತು ಅಸಂಖ್ಯ ವೀರಯೋಧರನ್ನು ನೀಡಿದ ಕೊಡಗಿನಲ್ಲಿ ಸೈನಿಕ ಪರಂಪರೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಭಾರತೀಯ ಸೈನ್ಯದ ದಕ್ಷಿಣ ಪ್ರಾಂತದ ಮುಖ್ಯಸ್ಥರು ಪ್ರತಿ ವರ್ಷ ಕೊಡಗಿನಲ್ಲಿ ಸಮಾವೇಶವನ್ನು ಆಯೋಜಿಸುತ್ತಿರುವುದಾಗಿ ತಿಳಿಸಿದರು. ಕೊಡಗಿನಲ್ಲಿ ನೆಲೆಸಿರುವ ಮಾಜಿ ಯೋಧರು, ವೀರನಾರಿಯರು,  ಮಾಸಿಕ ಪಿಂಚಣಿ, ಸೇವೆ ಸಲ್ಲಿಸಿದ ದಾಖಲೆಗಳಲ್ಲಿನ ಲೋಪ ದೋಷ, ಪಿಂಚಣಿ ಪಡೆಯುವಲ್ಲಿ ಹಲ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವುಗಳಿಗೆ ಸಮಾವೇಶದ ಸಂದರ್ಭ ಸ್ಥಳದಲ್ಲೆ ಪರಿಹಾರ ದೊರಕುವ ವಿಶ್ವಾಸವಿದ್ದು, ಅದಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಸಮಾವೇಶದಲ್ಲಿ ಕಲ್ಪಿಸಲಾಗುತ್ತಿದೆಯೆಂದು ವಿವರಿಸಿದರು. ಸಮಾವೇಶ ನಡೆಯುವ ಕ್ರಿಸ್ಟಲ್ ಕೊರ್ಟ್ ಸಭಾಂಗಣದಲ್ಲಿ ಭಾರತೀಯ ಸೇನೆಯ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದವರಿಗೆ, ಅವರವರ ವಿಭಾಗದಲ್ಲಿನ ದಾಖಲೆಗಳನ್ನು ಸರಿಪಡಿಸಿಕೊಳ್ಳುವ ಸಲುವಾಗಿ, ಭಾರತೀಯ ಸೇನೆಯ 8 ವಿಭಾಗಗಳ ಅಧಿಕಾರಿಗಳು ಅಂದು ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 9 ಗಂಟೆಯಿಂದಲೆ ಮಾಜಿ ಸೈನಿಕರು ತಮ್ಮ ತಮ್ಮ ವಿಭಾಗಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸ್ಥಳದಲ್ಲೆ ಸರಿಪಡಿಸಿಕೊಳ್ಳಬಹುದಾಗಿದೆ. ಎಂದರು. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರ ಮಾಸಿಕ ಪಿಂಚಣಿ ವ್ಯವಸ್ಥೆಯನ್ನು ಕೇಂದ್ರ ಸರ್ಕಾರದ ‘ಸಿಸ್ಟಂ ಆಫ್ ಪೆನ್ಶನ್ ಅಡ್ಮಿನಿಸ್ಟ್ರೇಷನ್ ರಕ್ಷಾ’ ಎನ್ನುವ ಯೋಜನೆಯಡಿ ತರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮಾವೇಶದಂದು ಸ್ಪರ್ಶ್ ಅಧಿಕಾರಿಗಳು ಮಾಜಿ ಸೈನಿಕರಿಗೆ ಲಭ್ಯರಿರುತ್ತಾರೆ. ಇವರ ಬಳಿ ತಮ್ಮ ಮಾಸಿಕ ಪಿಂಚಣಿಯ ಯಾವುದೇ ಸಮಸ್ಯೆ, ಗೊಂದಲಗಳಿಗೆ ಪರಿಹಾರವನ್ನು ಕಂಡು ಕೊಳ್ಳುವ ಅವಕಾಶವಿರುವುದಾಗಿ ಮೇಜರ್ ಚಿಂಗಪ್ಪ ತಿಳಿಸಿದರು. ಮಾಜಿ ಸೈನಿಕರಿಗಾಗಿ ಆಯೋಜಿತವಾಗಿರುವ ಈ ಸಮಾವೇಶದಲ್ಲಿ ಜಿಲ್ಲೆಯ ಎಲ್ಲಾ ಮಾಜಿ ಸೈನಿಕರು, ವೀರ ನಾರಿಯರು, ಅವಲಂಭಿತರಲ್ಲದೆ ಸೈನ್ಯದಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾದವರು ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಭಾರತೀಯ ಭೂ ಸೇನಾ ದಕ್ಷಿಣ ವಲಯ(ಸದರ್ನ್ ಕಮಾಂಡ್)ದ ಸೇನಾ ಮುಖ್ಯಸ್ಥರಾದ ಲೆಫ್ಟಿನೆಂಟ್ ಜನರಲ್ ಧೀರಜ್ ಸೇತ್ ಅವರು ಅಂದು ಬೆಳಗ್ಗೆ ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಸ್ಮಾರಕಕ್ಕೆ ಮೊದಲು ಭೇಟಿ ನೀಡಲಿದ್ದಾರೆ. ಬಳಿಕ ಬೆ.10 ಗಂಟೆಯ ನಂತರ ಸಮಾವೇಶದಲ್ಲಿ ಪಾಲ್ಗೊಂಡು ಮಾಜಿ ಸೈನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭ ಸೈನ್ಯದ ಇತರೆ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಗೌರವ ಕಾರ್ಯದರ್ಶಿ ಸುಬೇದಾರ್ ಮೇಜರ್ ವಾಸಪ್ಪ ಅಗರಿಮನೆ(ನಿವೃತ್ತ), ನಿರ್ದೇಶಕರುಗಳಾದ ಹವಾಲ್ದಾರ್ ಕುಟ್ಟಂಡ ನಂದಾ ಮಾದಪ್ಪ(ನಿವೃತ್ತ), ಹವಾಲ್ದಾರ್ ಮಾದೆಯಂಡ ನಾಚಪ್ಪ(ನಿವೃತ್ತ), ಸುಬೇದಾರ್ ಮೇಜರ್ ನಾಟೋಳಂಡ ಸೋಮಯ್ಯ(ನಿವೃತ್ತ) ಹಾಗೂ ಹವಾಲ್ದಾರ್ ಕೂಪದಿರ ಮುತ್ತಣ್ಣ(ನಿವೃತ್ತ) ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.5 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನ ಪರ್ವ ರಕ್ಷಾಬಂಧನ…

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.