Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೊನ್ನಂಪೇಟೆ ಅರಣ್ಯ ವಿದ್ಯಾಲಯದಲ್ಲಿ ಡಾ.ಫ.ಗು.ಹಳಕಟ್ಟಿ ದತ್ತಿ ಕಾರ್ಯಕ್ರಮ : ವಚನಕಾರರಿಂದ ರಾಜಪ್ರಭುತ್ವದ ವಿರುದ್ಧ ಪ್ರಜಾಪ್ರಭುತ್ವದ ಕಹಳೆ : ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೊನ್ನಂಪೇಟೆ ಅರಣ್ಯ ವಿದ್ಯಾಲಯದಲ್ಲಿ ಡಾ.ಫ.ಗು.ಹಳಕಟ್ಟಿ ದತ್ತಿ ಕಾರ್ಯಕ್ರಮ : ವಚನಕಾರರಿಂದ ರಾಜಪ್ರಭುತ್ವದ ವಿರುದ್ಧ ಪ್ರಜಾಪ್ರಭುತ್ವದ ಕಹಳೆ : ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ*

ಮಾರ್ಚ್ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪೊನ್ನಂಪೇಟೆ ಮಾ.22 NEWS  DESK : ಹನ್ನೆರಡನೇ ಶತಮಾನದಲ್ಲಿ ಇದ್ದ ರಾಜಪ್ರಭುತ್ವದ ವಿರುದ್ಧ ಪ್ರಜಾಪ್ರಭುತ್ವದ ಬೀಜ ಬಿತ್ತಿದ ಶರಣರು ಈ ರಾಷ್ಟ್ರ ಕಂಡ ಪ್ರಪ್ರಥಮ ಸ್ವಾಂತಂತ್ರ್ಯ ಚಳುವಳಿಗಾರರು ಎಂದು ವಿರಾಜಪೇಟೆ ತಾಲ್ಲೂಕು ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ವತಿಯಿಂದ ಬಿಜಾಪುರದ ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕಿನ ವತಿಯಿಂದ ಸ್ಥಾಪಿಸಿರುವ ವಚನ ಸಾಹಿತ್ಯ ಸಂವರ್ಧಕ ಡಾ.ಫ.ಗು.ಹಳಕಟ್ಟಿ ಅವರ ಜೀವನ ಹಾಗೂ ಸಾಧನೆ ಕುರಿತ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜಪ್ರಭುತ್ವದ ಕಾಲದಲ್ಲಿ ಅಸಮಾನತೆಯಿಂದ ಜನ ಬಳಲಿದ್ದರು. ವೇದ, ಆಗಮ, ಉಪನಿಷತ್ತುಗಳು ಸಂಸ್ಕ್ರತ ಭಾಷೆಯಲ್ಲಿದ್ದು ಜನಸಾಮಾನ್ಯರಿಗೆ ಅರ್ಥವಾಗುತ್ತಿರಲಿಲ್ಲ. ಅಂತಹ ಕಾಲದಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವ ಸರಳ ಭಾಷೆಯ ವಚನಗಳ ಮೂಲಕ ಬಹುದೊಡ್ಡ ಕ್ರಾಂತಿಯನ್ನು ಮಾಡಿದ ಬಸವಾದಿ ಶರಣರು ಸಮಾಜದಲ್ಲಿ ಸಮಾನತೆ ಹಾಗೂ ಮಹಿಳಾ ಸ್ವಾತಂತ್ರ್ಯವನ್ನು ತಂದುಕೊಟ್ಟರು. ಜನರಲ್ಲಿ ಹೇರಿದ್ದ ಮೂಢನಂಬಿಕೆಗಳ ವಿರುದ್ಧವೂ ಸಮರ ಸಾರಿದ ಶರಣರು ಪುರೋಹಿತಶಾಹಿ ಹಾಗೂ ಪಟ್ಟಭದ್ರರ ಸ್ಥಾಪಿತ ಹಿತಾಸಕ್ತಿ ವಿರುದ್ಧ ಸಮರವನ್ನೇ ಸಾರಿದರು. ಇವನಾರವ ಎನ್ನದೇ ಇವ ನಮ್ಮವ ಎಂದು ಸಮ ಸಮಾಜದ ಪರಿಕಲ್ಪನೆಯನ್ನು ಮೊಳಗಿಸಿದರು. ಹೀಗೆ ಶರಣರು ಕಲ್ಯಾಣದಲ್ಲಿ ಮಾಡಿದ ಕ್ರಾಂತಿಯ ಬೀಜಗಳು ವಚನಗಳ ಕಟ್ಟುಗಳಲ್ಲಿದ್ದವು. ಇಂತಹ ವಚನಗಳ ಕಟ್ಟುಗಳನ್ನು ಕಲೆ ಹಾಕಿದ ಫ.ಗು.ಹಳಕಟ್ಟಿಯವರು, ವಚನಗಳನ್ನು ಸಂರಕ್ಷಿಸಿ ಅವುಗಳನ್ನು ಅಚ್ಚು ಹಾಕಲು ಪ್ರಿಂಟಿಂಗ್ ಪ್ರೆಸ್ ತೆರೆಯಲು ತಮ್ಮಲ್ಲಿ ಇದ್ದ ಆಸ್ತಿಯನ್ನೇ ಮಾರಿಕೊಂಡ ಬಗೆಯನ್ನು ಶ್ರೀಗಳು ಸವಿಸ್ತಾರವಾಗಿ ವಿಶ್ಲೇಷಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ಜಿ.ಎಂ.ದೇವಗಿರಿ ಮಾತನಾಡಿ, ಇಂದಿನ ಆಧುನಿಕ ಜಗತ್ತಿನಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನಗಳು ಬೆಳೆದಷ್ಟು ವೇಗವಾಗಿ ನಾವು ಓಡುತ್ತಿದ್ದೇವೆ.‌ ಆದರೆ ಶಾಂತಿ, ಸಮಧಾನ, ನೆಮ್ಮದಿಯನ್ನು ಹುಡುಕುತ್ತಿದ್ದೇವೆ. ಇಂದು ಸಾಮಾಜಿಕ ವ್ಯಸನಗಳಿಗೆ ತುತ್ತಾಗಿ ಭವಿಷ್ಯವನ್ನು ಕಳೆದುಕೊಳ್ಳುತ್ತಿರುವ ಇಂದಿನ ಯುವ ಪೀಳಿಗೆಗೆ ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆ ಅತಿ ಮುಖ್ಯವಾಗಿ ಬೇಕಾಗಿದೆ. ಆದ್ದರಿಂದ ವಿಜ್ಞಾನ – ತಂತ್ರಜ್ಞಾನ ಹಾಗೂ ಸಾಮಾಜಿಕ ಮೌಲ್ಯಗಳ ಗಣಿಯಾಗಿರುವ ವಚನ ಸಾಹಿತ್ಯವನ್ನು ಇಂದಿನ ಯುವ ಜನಾಂಗ ಅರಿಯುವ ಅಗತ್ಯವಿದೆ. ಅರಿಸ್ಟಾಟಲ್ , ಪ್ಲೇಟೋ ಮೊದಲಾದ ತತ್ವಜ್ಞಾನಿಗಳಿಗೂ ಮಿಗಿಲಾಗಿ ಹನ್ನೆರಡನೇ ಶತಮಾನದ ಶರಣರು ಈ ಜಗತ್ತಿಗೆ ಸಾರಿ ಹೋಗಿರುವ ಕಲಬೇಡ ಕೊಲಬೇಡ, ಜಗದಗಲ – ಮಿಗೆಯಗಲ ಎಂಬ ಬಸವಾದಿ ಶರಣರ ವಚನಗಳು ಮಾನವನ ವ್ಯಕ್ತಿತ್ವದ ವಿಕಾಸ ಹಾಗೂ ಪ್ರಗತಿಗೆ ಅಡಿಗಲ್ಲಾಗಿವೆ ಎಂದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಸಂದೇಶ ನೀಡಿದ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಅವರು, ವಚನ ಸಾಹಿತ್ಯದ ಸಂವರ್ಧನೆಯಲ್ಲಿ ಡಾ.ಫಕೀರಪ್ಪ ಗುರಪ್ಪಾ ಹಳಕಟ್ಟಿ ಅವರು ಶ್ರಮಿಸಿದ ದುರ್ಗಮ ಸನ್ನಿವೇಶಗಳನ್ನು ವಿವರಿಸಿ ವಿದ್ಯಾರ್ಥಿಗಳಿಗೆ ಅರ್ಥೈಸಿದರು. ಅರಣ್ಯ ಮಹಾ ವಿದ್ಯಾಲಯದ ಪ್ರಾಧ್ಯಾಪಕ ಡಾ.ಕೆಂಚರೆಡ್ಡಿ ಫ.ಗು.ಹಳಕಟ್ಟಿ ಜೀವನ ಹಾಗೂ ಸಾಧನೆ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಾಸ್ತಾವಿಕ ನುಡಿಗಳಾಡಿದರು. ಕುಶಾಲನಗರದ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ, ಪೊನ್ನಂಪೇಟೆ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ಶೋಭಾರಾಣಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕೋಶಾಧಿಕಾರಿ ಕೆ.ಪಿ.ಪರಮೇಶ್, ಪೊನ್ನಂಪೇಟೆ ಮಹಾವಿದ್ಯಾಲಯದ ಆಡಳಿತಾಧಿಕಾರಿ ಎಸ್.ಸಿ.ಹೇಮಂತಕುಮಾರ್, ಪ್ರಾಧ್ಯಾಪಕರಾದ ಡಾ.ಜಡೇಗೌಡ, ಡಾ.ಸುಮನಾ, ಡಾ.ರಮ್ಯಾ, ಡಾ.ಮೋಹನಕುಮಾರ್, ಡಾ.ಮಂಜುಳ, ಡಾ.ರನೀಷಾ, ಡಾ.ನಾಣಯ್ಯ ಇದ್ದರು. ಪ್ರಾಧ್ಯಾಪಕ ಡಾ.ಬಿ.ಎನ್.ಸತೀಶ್ ಸ್ವಾಗತಿಸಿದರು. ನೇತ್ರಾವತಿ ನಿರೂಪಿಸಿದರು. ಡಾ.ಕೆ.ಎ.ಈಶ್ವರ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.