


ವಿರಾಜಪೇಟೆ ಮಾ.22 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮಗ್ರ ಆಪ್ತ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರದಲ ಆಪ್ತ ಸಮಾಲೋಚಕಿ ಬಿ.ಅಶ್ವಿತಾ ಏಡ್ಸ್ ನ ಇತಿಹಾಸ, ಅದರ ಹರಡುವಿಕೆಗೆ ಕಾರಣಗಳು, ಸರ್ಕಾರ ಅದನ್ನು ನಿಯಂತ್ರಿಸಲು ಕೈಗೊಳ್ಳುತ್ತಿರುವ ಕ್ರಮಗಳು, ಕಾಯಿದೆ, ಕಳಂಕ ತಾರತಮ್ಯದ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ.ದಯಾನಂದ ಏಡ್ಸ್ ನಿಯಂತ್ರಿಸುವುದರಲ್ಲಿ ಯುವಜನತೆ ಪಾತ್ರ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಹ ಸಂಚಾಲಕರಾದ ಡಾ. ಬಸವರಾಜು. ಕೆ, ರೆಡ್ ರಿಬ್ಬನ್ ಕ್ಲಬ್ ಸಂಚಾಲಕರಾದ ರುದ್ರ, ಬೋಧಕ ಮತ್ತು ಬೋಧಕೇತರರು ಇದ್ದರು. ಏಡ್ಸ್ ಜಾಗೃತಿ ಕುರಿತ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಿದರು.